Congress Rally: ವೀಡಿಯೋ ತೋರಿಸಿ ಮೈತ್ರಿ ನಾಯಕರಿಗೆ ಡಿ.ಕೆ.ಶಿವಕುಮಾರ್‌ ಚಾಟಿ!

ಮೈತ್ರಿಗೆ ಮುನ್ನ, ಅನಂತರದ ಮಾತು ವೇದಿಕೆಯಲ್ಲಿ ಪ್ರದರ್ಶನ

Team Udayavani, Aug 7, 2024, 6:24 AM IST

Congress

ಮಂಡ್ಯ: ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಮೈತ್ರಿಗೂ ಮುನ್ನ ಹಾಗೂ ಮೈತ್ರಿ ಅನಂತರ ಆಡಿರುವ ಭಿನ್ನಾಭಿಪ್ರಾಯಗಳ ಮಾತು ಹಾಗೂ ಯೂಟರ್ನ್ ಹೊಡೆದಿರುವ ಮಾತುಗಳ ವೀಡಿಯೋ ಪ್ರದರ್ಶಿಸುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನಿಮ್ಮ ಮಾತುಗಳಿಗೆ ನೀವೇ ಉತ್ತರ ನೀಡಿ ಎಂದು ವಾಗ್ಧಾಳಿ ನಡೆಸಿದರು.

ಮಂಗಳವಾರ ಮಂಡ್ಯದಲ್ಲಿ ನಡೆದ ಜನಾಂದೋಲನ ಸಮಾವೇಶ ಉದ್ಘಾಟಿಸಿ ಮಾತನಾಡಿ, ನಾನು ನನ್ನ ಸಚಿವ ಸಹೋದ್ಯೋಗಿಗಳನ್ನು ನಂಬುವುದಿಲ್ಲ. ನಾನು ನಂಬುವುದು ಯಡಿಯೂರಪ್ಪ, ಕುಮಾರಸ್ವಾಮಿ, ದೇವೇಗೌಡ, ಸಿ.ಪಿ. ಯೋಗೇಶ್ವರ್‌, ಬಸನಗೌಡ ಪಾಟೀಲ್‌ ಯತ್ನಾಳ್‌, ಜಿ.ಟಿ. ದೇವೇಗೌಡ, ಡಾ| ಅಶ್ವತ್ಥನಾರಾಯಣ ಅವರ ಮಾತುಗಳ ಮೇಲೆ ನಂಬಿಕೆ ಇದೆ ಎಂದು ವ್ಯಂಗ್ಯವಾಡಿದರು. ಜೆಡಿಎಸ್‌-ಬಿಜೆಪಿ ನಾಯಕರು ಆಡಿರುವ ಮಾತುಗಳನ್ನು ಒಮ್ಮೆ ಕೇಳಿ ಎಂದು ವೀಡಿಯೋ ಪ್ರದರ್ಶನ ಮಾಡಿದರು.

15 ನಿಮಿಷಗಳ ವೀಡಿಯೋ
ಯಡಿಯೂರಪ್ಪ ಸದನದಲ್ಲಿ ಕುಮಾರಸ್ವಾಮಿ ವಿರುದ್ಧ, ಯತ್ನಾಳ್‌ ವಿಜಯೇಂದ್ರ ವಿರುದ್ಧ, ಕುಮಾರಸ್ವಾಮಿ ಬಗ್ಗೆ ಸಿ.ಪಿ. ಯೋಗೇಶ್ವರ್‌, ಡಾ| ಅಶ್ವತ್ಥನಾರಾಯಣ, ಕುಮಾರಸ್ವಾಮಿ ಯಡಿಯೂರಪ್ಪ, ಮೋದಿ, ಅಶ್ವತ್ಥನಾರಾಯಣ ವಿರುದ್ಧ ಮಾತನಾಡಿರುವ ವೀಡಿಯೋ ಪ್ರದರ್ಶನ ನಡೆಯಿತು. ಅಲ್ಲದೆ ಕಾವೇರಿ, ಮೇಕೆದಾಟು ಯೋಜನೆಗೆ ನೀಡಿರುವ ವಾಗ್ಧಾನ, ಅನಂತರ ಯೂಟರ್ನ್ ಹೊಡೆದಿರುವ ಬಗ್ಗೆ ಮಾತನಾಡಿರುವ ವೀಡಿಯೋ ಬಿಡುಗಡೆ ಮಾಡಲಾಯಿತು.

ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ
ಅನಂತರ ಮಾತು ಮುಂದುವರಿಸಿದ ಡಿ.ಕೆ. ಶಿವಕುಮಾರ್‌, ನಿಮ್ಮ ಮಾತುಗಳಿಗೆ ನೀವೇ ಉತ್ತರ ಕೊಡಿ, ಹಿಂದೆ ಮಂಡ್ಯದಲ್ಲಿ ವರುಣಾ ನಾಲೆಗಾಗಿ ಚೆಡ್ಡಿ ಪಾದಯಾತ್ರೆ, ಕಾವೇರಿಗಾಗಿ ಎಸ್‌.ಎಂ. ಕೃಷ್ಣ ಅವರ ಪಾದಯಾತ್ರೆ ಹಾಗೂ ಮೇಕೆದಾಟು ಯೋಜನೆಗಾಗಿ ನಾವು ಪಾದಯಾತ್ರೆ ಮಾಡಿದ್ದೆವು. ಆದರೆ ನೀವು ಯಾವ ಪುರುಷಾರ್ಥಕ್ಕೆ ಪಾದಯಾತ್ರೆ ಮಾಡುತ್ತಿದ್ದೀರಾ? ಈಗಾಗಲೇ ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ 147 ಟಿಎಂಸಿ ನೀರು ಹರಿದು ಹೋಗಿದೆ.

ಜುಲೈಯಲ್ಲಿ 41 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ ಇಂದು ಅತಿ ಹೆಚ್ಚು ನೀರು ಹರಿದು ಹೋಗಿದೆ. ಇದರಲ್ಲಿ 60 ಟಿಎಂಸಿ ನೀರು ಸಮುದ್ರ ಸೇರಿದೆ. ಈ ಸಮುದ್ರ ಸೇರಿರುವ ಸಂಗ್ರಹಿಸಿ ಜನರಿಗೆ ನೀಡುವ ಉದ್ದೇಶವಿದೆ. ಆದ್ದರಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ ಎಂದು ಆಗ್ರಹಿಸಿದರು.

ಬಿಜೆಪಿ-ಜೆಡಿಎಸ್‌ ಮೇಲೆ 108 ಹಗರಣ: ಚಲುವರಾಯಸ್ವಾಮಿ
ಮಂಡ್ಯ: ಬಿಜೆಪಿ ಮತ್ತು ಜೆಡಿಎಸ್‌ ಮೇಲೆ ಒಂದಲ್ಲ, ಎರಡಲ್ಲ 108 ಹಗರಣಗಳಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚಲುವರಾಯಸ್ವಾಮಿ ಆರೋಪಿಸಿದರು. ಜನಾಂದೋಲನ ಸಮಾವೇಶದಲ್ಲಿ ಮಾತನಾಡಿ, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ, ಶಾಸಕ ಅಶ್ವತ್ಥ ನಾರಾಯಣ, ವಿಜಯೇಂದ್ರ ಅವರ ನಾಯಕತ್ವದಲ್ಲಿ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ನಡೆಯುತ್ತಿದೆ. ವಿಪಕ್ಷದ ನಾಯಕ ಆರ್‌. ಅಶೋಕ್‌ ಮತ್ತು ಅಶ್ವತ್ಥ ನಾರಾಯಣ ಅವರದ್ದು ಒಂದು ಗುಂಪು, ವಿಜಯೇಂದ್ರ ಅವರದ್ದು ಒಂದು ಗುಂಪಿದೆ ಎಂದರು.

ರಾಜ್ಯದ ಜನತೆ ರಾಹುಲ್‌ ಗಾಂಧಿ , ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಅವರನ್ನು ನಂಬಿ 136 ಸೀಟುಗಳನ್ನು ಗೆಲ್ಲಿಸಿದ್ದಾರೆ. ರಾಜ್ಯದ ಜನತೆಯ ಸಮಸ್ಯೆಗಳು ನಮಗೆ ಮುಖ್ಯ. ಒಂದು ವರ್ಷ ರಾಜ್ಯದಲ್ಲಿ ರೈತರ ಬರಗಾಲ ಸಮಸ್ಯೆ ಹಾಗೂ ಜನರ ಸಮಸ್ಯೆಗೆ ಸ್ಪಂದಿಸಿದ್ದೇವೆ. ಇದು ತಪ್ಪಾ ಎಂದು ಜೆಡಿಎಸ್‌-ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.