Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ
Team Udayavani, Sep 28, 2024, 1:14 AM IST
ಬೆಂಗಳೂರು: ಪಕ್ಷದ ನಿಲುವಿಗೆ ವಿರುದ್ಧವಾಗಿ ಬಹಿರಂಗ ಹೇಳಿಕೆಗಳನ್ನು ನೀಡಿದರೆ ಪಕ್ಷ ಅದನ್ನು ಸಹಿಸುವುದಿಲ್ಲ, ಪಕ್ಷದ ಶಿಸ್ತನ್ನು ಪ್ರತಿಯೊಬ್ಬರೂ ಪಾಲಿ ಸ ಬೇಕು, ಪಕ್ಷಕ್ಕಿಂತ ಯಾರೊಬ್ಬರು ದೊಡ್ಡವರಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಹೇಳಿದ್ದಾರೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನ್ಯಾಯಾಲಯ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಅವರು ಸಿಎಂ ರಾಜೀನಾಮೆಗೆ ಆಗ್ರಹಿಸಿದ ಹಿನ್ನೆಲೆಯಲ್ಲಿ ಜಿ.ಸಿ. ಚಂದ್ರಶೇಖರ್ ಅವರು ಪತ್ರಿಕಾ ಹೇಳಿಕೆ ಮೂಲಕ ಈ ಬಗೆಯ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಸದಾ ಆಂತರಿಕ ಪ್ರಜಾಪ್ರಭುತ್ವಕ್ಕೆ ಆದ್ಯತೆ ನೀಡಿದೆ. ಯಾರಾದರೂ ಪಕ್ಷದ ನಿಲುವಿಗೆ ಭಿನ್ನವಾದ ಅಭಿಪ್ರಾಯ ವ್ಯಕ್ತಪಡಿಸಬೇಕಾದಲ್ಲಿ, ಪಕ್ಷದ ವೇದಿಕೆಯೊಳಗೆ ಮಾತ್ರ ವ್ಯಕ್ತಪಡಿಸಬೇಕು. ಯಾವುದೇ ವಿಚಾರವಾದರೂ ಇಂತಹ ಹೇಳಿಕೆಗಳನ್ನು ಸ್ವೀಕರಿಸಲು ಎಐಸಿಸಿ ಹಾಗೂ ಕೆಪಿಸಿಸಿಯು ಸೂಕ್ತ ವ್ಯವಸ್ಥೆ ಹೊಂದಿದೆ. ಈ ವ್ಯವಸ್ಥೆಯೊಳಗೆ ಮಾತ್ರ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕು.
ಮಾಧ್ಯಮಗಳ ಮುಂದೆ ಪಕ್ಷದ ನಿಲುವಿಗೆ ಭಿನ್ನವಾಗಿ ಹೇಳಿಕೆ ನೀಡಿ ಪಕ್ಷದ ನಾಯಕರ ಬಗ್ಗೆ ಮಾತನಾಡಿ ಮುಜುಗರ ತರುವುದನ್ನು ಪಕ್ಷ ಸಹಿಸುವುದಿಲ್ಲ. ಪಕ್ಷದಲ್ಲಿ ಕಟ್ಟುನಿಟ್ಟಾಗಿ ಶಿಸ್ತು ಪಾಲಿಸಬೇಕು. ಇಲ್ಲಿ ಪಕ್ಷಕ್ಕಿಂತ ಯಾರೊಬ್ಬರೂ ದೊಡ್ಡವರಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ
Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್
Electrical system: ಕೃಷಿ ಪಂಪ್ಸೆಟ್-ಆಧಾರ್ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ
Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್
Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.