Council By Poll: ಬಿಜೆಪಿ ಸರಕಾರವಿದ್ದಾಗ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ: ಬಿವೈವಿ

ವಿಧಾನ ಪರಿಷತ್‌ ಚುನಾವಣೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶ

Team Udayavani, Oct 16, 2024, 6:34 AM IST

Bantwala-BJp

ಬಂಟ್ವಾಳ: ಬಿಜೆಪಿ ಸರಕಾರವು ಪ್ರತಿ ಬಾರಿ ಪಂಚಾಯತ್‌ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ ನೀಡಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಗೌರವ ನೀಡುವ ಕಾರ್ಯ ಮಾಡಿದೆ. ಆದರೆ ಈಗಿನ ಕಾಂಗ್ರೆಸ್‌ ಸರಕಾರವು ಅಭಿವೃದ್ಧಿ ಶೂನ್ಯ ಸರಕಾರ ಎನಿಸಿಕೊಂಡಿದೆ. ದ.ಕ.ಜಿಲ್ಲೆಯ ಜನತೆಯ ರಕ್ತದಲ್ಲಿ ಹಿಂದುತ್ವವೇ ತುಂಬಿರುವುದರಿಂದ ಸಿಎಂ ಸಿದ್ಧರಾಮಯ್ಯರಿಗೆ ಜಿಲ್ಲೆಯ ಜನರೆಂದರೆ ಅಲರ್ಜಿಯಾಗಿದೆ. ಹೀಗಾಗಿ ಅನುದಾನವೂ ಇಲ್ಲ, ಯಾವುದೇ ಸಚಿವರು ಕೂಡ ಜಿಲ್ಲೆಗೆ ಬರುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಅವರು ಮಂಗಳವಾರ ಬಿ.ಸಿ.ರೋಡು ಬಳಿಯ ಬಂಟವಾಳದ ಬಂಟರ ಭವನದಲ್ಲಿ ನಡೆದ ದ.ಕ.ಜಿಲ್ಲೆಯ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಾಮಾಣಿಕ ಕಾರ್ಯಕರ್ತ ಕಿಶೋರ್‌ಕುಮಾರ್‌ ಅವರು ಅತಿ ಹೆಚ್ಚು ಅಂತರದಿಂದ ಗೆಲ್ಲಲಿದ್ದಾರೆ. ಸಜ್ಜನಿಕೆಯ ರಾಜಕಾರಣಿ ಆಗಿರುವ ಅವರು ಕೋಟ ಅವರ ಸ್ಥಾನವನ್ನು ತುಂಬುವ ಮೂಲಕ ಪಂಚಾಯತ್‌ ಸದಸ್ಯರ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ ಎಂದರು.

ವಿಪಕ್ಷ ನಾಯಕ ಆರ್‌.ಅಶೋಕ್‌ ಮಾತನಾಡಿ, ಕಾಂಗ್ರೆಸ್‌ ಸರಕಾರವು ಮದ್ಯ, ಪೆಟ್ರೋಲ್‌, ಹಾಲಿನ ದರ ಜಾಸ್ತಿ ಮಾಡಿ ಗ್ಯಾರಂಟಿಗೆ ಹಣ ಹೊಂದಿಸುತ್ತಿದ್ದು, ಸಿದ್ದರಾಮಯ್ಯರ ಅವಧಿಯಲ್ಲಿ ಅಭಿವೃದ್ಧಿಗೆ ಹಣ ತರುವುದು ಕನಸಿನ ಮಾತಾಗಿದೆ ಎಂದರು.

ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಕಾಂಗ್ರೆಸ್‌ ಸರಕಾರದಲ್ಲಿ ಪಾಕಿಸ್ಥಾನಕ್ಕೆ ಜಿಂದಾಬಾದ್‌ ಹೇಳುವವರು ದೇಶಪ್ರೇಮಿಗಳು ಎಂಬ ಸ್ಥಿತಿ ಬಂದಿದ್ದು, ಲೂಟಿಯಲ್ಲಿ ಸಿಕ್ಕಿ ಹಾಕಿಕೊಂಡು ವಾಪಸ್‌ ಕೊಟ್ಟರೆ ಅವರು ನಿರಪರಾಧಿಗಳು ಎಂಬ ಹೊಸ ಕಾನೂನನ್ನು ಕೂಡ ಕಾಂಗ್ರೆಸ್‌ ಜಾರಿಗೆ ತಂದಿದೆ ಎಂದರು.

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾ| ಬ್ರಿಜೇಶ್‌ ಚೌಟ, ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ವಿಧಾನ ಪರಿಷತ್‌ ಬಿಜೆಪಿ ಅಭ್ಯರ್ಥಿ ಕಿಶೋರ್‌ಕುಮಾರ್‌ ಪುತ್ತೂರು ಮಾತನಾಡಿದರು.

ರಾಜ್ಯ ಕಾರ್ಯದರ್ಶಿ ವಿ. ಸುನೀಲ್‌ ಕುಮಾರ್‌, ಶಾಸಕರಾದ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು, ಡಿ. ವೇದವ್ಯಾಸ ಕಾಮತ್‌, ಹರೀಶ್‌ ಪೂಂಜ, ಉಮಾನಾಥ ಕೋಟ್ಯಾನ್‌, ಭಾಗೀರಥಿ ಮುರುಳ್ಯ, ಡಾ| ವೈ.ಭರತ್‌ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌, ಮೇಯರ್‌ ಮನೋಜ್‌ ಕುಮಾರ್‌, ಉಪಮೇಯರ್‌ ಭಾನುಮತಿ, ಪ್ರಮುಖರಾದ ಉದಯಕುಮಾರ್‌ ಶೆಟ್ಟಿ, ರಾಜೇಶ್‌ ಕಾವೇರಿ, ಪ್ರೇಮಾನಂದ ಶೆಟ್ಟಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ವೇದಿಕೆಯಲ್ಲಿದ್ದರು. ಸತೀಶ್‌ ಕುಂಪಲ ಸ್ವಾಗತಿಸಿದರು. ಕ್ಯಾ| ಗಣೇಶ್‌ ಕಾರ್ಣಿಕ್‌ ವಂದಿಸಿದರು. ಬಿ.ದೇವದಾಸ್‌ ಶೆಟ್ಟಿ ಹಾಗೂ ರಾಕೇಶ್‌ ರೈ ಕೆಡೆಂಜಿ ನಿರ್ವಹಿಸಿದರು.

ಪ್ರಾಮಾಣಿಕ ಸಿಎಂ: ಬಿವೈವಿ ವ್ಯಂಗ್ಯ
ವಾಲ್ಮೀಕಿ ಹಗರಣದಲ್ಲಿ 87 ಕೋ.ರೂ.ಭ್ರಷ್ಟಾಚಾರ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸದನದಲ್ಲೇ ಒಪ್ಪಿಕೊಂಡಿದ್ದು,  ಮುಡಾ ಹಗರಣದಲ್ಲಿ ನಿವೇಶನವನ್ನು ಹಿಂದಿರುಗಿಸುವುದಾಗಿ ಒಪ್ಪಿಕೊಳ್ಳುವ ಮೂಲಕ ಅವರು ಪ್ರಾಮಾಣಿಕ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Punjalkatte:ಕೊಳಕ್ಕೆಬೈಲ್‌-ನಯನಾಡು ರಸ್ತೆ ದುರವಸ್ಥೆ;ಯುವಕರಿಂದ ಶ್ರಮದಾನದ ಮೂಲಕ ದುರಸ್ತಿ

2

Didupe ದರ್ಕಾಸು ಕೆಮ್ಮಟೆಯಲ್ಲಿ ಪಾಲದಲ್ಲೇ ಓಡಾಟ; ರೋಟರಿ ತಂಡದಿಂದ ಕಾಲುಸಂಕ ಭರವಸೆ

4-ptr

Puttur: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು

1(1)

Madanthyar: ಇಲ್ಲಿ ಎಲ್ಲಿಂದ ಹೋದರೂ ಹೊಂಡಕ್ಕೇ ಬೀಳಬೇಕು!

BOJAPPA

Sulya: ದ್ವಿಚಕ್ರ ವಾಹನಗಳ ಢಿಕ್ಕಿ: ಉದ್ಯೋಗಿ ಸಾವು

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

11(1)

Mangaluru: ಪಾರಂಪರಿಕ ಕಟ್ಟಡ ಫಲಕಗಳಿಗೆ ಒದಗಲಿ ಶುಭಗಳಿಗೆ!

8-sirsi

Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.