Council; ನನ್ನ ಯೋಗ್ಯತೆಗೆ ಸಿಕ್ಕ ವಿಪಕ್ಷ ನಾಯಕ ಸ್ಥಾನ: ಛಲವಾದಿ ನಾರಾಯಣಸ್ವಾಮಿ

ರವಿಕುಮಾರ್‌, ಸಿ.ಟಿ.ರವಿ ಹೆಸರಿದ್ದರೂ ನನ್ನ ಯೋಗ್ಯತೆ ಗುರುತಿಸಿ ಪಕ್ಷ ಜವಾಬ್ದಾರಿ ನೀಡಿದೆ

Team Udayavani, Jul 25, 2024, 7:15 AM IST

Chalavadi-Nara

ಬೆಂಗಳೂರು: ವಿಧಾನ ಪರಿಷತ್‌ನ ವಿಪಕ್ಷ ನಾಯಕರಾಗಿ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರ ಹೆಸರನ್ನು ಸಭಾಪತಿ ಬಸವರಾಜ ಹೊರಟ್ಟಿ ಬುಧವಾರ ಪ್ರಕಟಿಸಿದರು.

ಸಭಾಪತಿ ಹೆಸರು ಹೇಳುತ್ತಿದ್ದಂತೆ ಛಲವಾದಿ ಅವರನ್ನು ವಿಪಕ್ಷ ನಾಯಕರ ಕುರ್ಚಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಕರೆ ತಂದು ಕೂರಿಸಿದರು. ಸಭಾಪತಿ ಹೊರಟ್ಟಿ ಸೇರಿದಂತೆ ಸದನ ಛಲವಾದಿ ಅವರನ್ನು ಅಭಿನಂದಿಸಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿ, ನಾನು 1983ರಲ್ಲೇ ವಿಧಾನ ಪರಿಷತ್‌ ಪ್ರವೇಶಿಸುವ ಕನಸು ಕಂಡಿದ್ದೆ, ಸುಮಾರು 45 ವರ್ಷಗಳ ರಾಜಕೀಯ ಜೀವನದ ಬಳಿಕ ಇದು ಸಾಧ್ಯವಾಯಿತು. ತಳ ಸಮುದಾಯದಿಂದ ಬಂದಿರುವ ನನ್ನನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಸೇರಿ ಹಿರಿಯ ನಾಯಕರು ಈ ಜವಾಬ್ದಾರಿ ನೀಡಿದ್ದಾರೆ.

ರವಿಕುಮಾರ್‌, ಸಿ.ಟಿ.ರವಿ ಹೆಸರಿದ್ದರೂ ನನ್ನ ಯೋಗ್ಯತೆಯನ್ನು ಗುರುತಿಸಿ ಪಕ್ಷ ಜವಾಬ್ದಾರಿ ನೀಡಿದೆ ಎಂದು ಹೇಳಿದರು. ನಾನು ಮೂಲತಃ ಅಂಬೇಡ್ಕರ್‌ವಾದಿ. ಅವರ ಆಶಯಗಳನ್ನಿಟ್ಟುಕೊಂಡು ರಾಜಕಾರಣಕ್ಕೆ ಬಂದಿದ್ದೇನೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನನ್ನ ರಾಜಕೀಯ ಗುರು. ಅವರಲ್ಲಿದ್ದ ಕೆಚ್ಚು ನನ್ನಲ್ಲಿಯೂ ಇದೆ ಎಂದು ಭಾವಿಸಿದ್ದೇನೆ ಎಂದರು.

ಛಲವಾದಿ ಅವರ ಹೋರಾಟ, ಸಂಕಲ್ಪದ ಬಗ್ಗೆ ಅಭಿಮಾನವಿದೆ. ಜವಾಬ್ದಾರಿ ಸ್ಥಾನಗಳೆಂದರೆ ಕಷ್ಟಗಳು ಹೆಚ್ಚು. ಆ ಸ್ಥಾನದಲ್ಲಿ ಕುಳಿತು ಉತ್ತಮ ಕೆಲಸ ಮಾಡಲು ಪ್ರಯತ್ನಿಸಿ. ಸದನದ ಘನತೆ, ಗೌರವವನ್ನು ಕಾಪಾಡಿಕೊಂಡು ಬನ್ನಿ.
 -ಬಸವರಾಜ ಹೊರಟ್ಟಿ, ಸಭಾಪತಿ

ವಿಧಾನಪರಿಷತ್‌: 887 ಪ್ರಶ್ನೆ ; 280ಕ್ಕೆ ಮಾತ್ರ ಸರಕಾರದ ಉತ್ತರ!

ಬೆಂಗಳೂರು: ಸದನಕ್ಕೆ ಕೇಳಲಾದ ಪ್ರಶ್ನೆಗಳು, ಶೂನ್ಯ ವೇಳೆಯ ಪ್ರಸ್ತಾವಗಳಿಗೆ ಅಧಿಕಾರಿಗಳು ಎಷ್ಟು ಉತ್ತರಗಳನ್ನು ಕೊಡಬೇಕಿತ್ತು, ಎಷ್ಟು ಕೊಡಲಾಗಿದೆ, ಉಳಿದದ್ದು ಯಾಕೆ ಕೊಟ್ಟಿಲ್ಲ, ಉತ್ತರ ಕೊಡದ ಅಧಿಕಾರಿಗಳ ಮೇಲೆ ಕೈಗೊಂಡ ಕ್ರಮದ ಬಗ್ಗೆ ಗುರುವಾರ ಸದನಕ್ಕೆ ಮಾಹಿತಿ ಕೊಡಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಸರಕಾರಕ್ಕೆ ತಾಕೀತು ಮಾಡಿದರು.

ಈ ವಿಷಯ ಪ್ರಸ್ತಾವಿಸಿದ ಜೆಡಿಎಸ್‌ ನಾಯಕ ಎಸ್‌.ಎಲ್‌.ಭೋಜೇಗೌಡ, ಆಡಳಿತ ಮತ್ತು ವಿಪಕ್ಷದ ಸದಸ್ಯರು ಸೇರಿ ಲಿಖೀತ ಮೂಲಕ ಉತ್ತರಿಸುವ ಹಾಗೂ ಶೂನ್ಯವೇಳೆಯ ಪ್ರಸ್ತಾವಗಳು ಸೇರಿ ಒಟ್ಟು 887 ಪ್ರಶ್ನೆಗಳನ್ನು ಕೇಳಿದ್ದಾರೆ. ಅದರಲ್ಲಿ 280 ಪ್ರಶ್ನೆಗಳಿಗೆ ಮಾತ್ರ ಉತ್ತರ ಬಂದಿದೆ. ಇನ್ನೂ 607 ಪ್ರಶ್ನೆಗಳಿಗೆ ಸರಕಾರದಿಂದ ಉತ್ತರಗಳು ಬಂದಿಲ್ಲ ಎಂದರು. ಇದಕ್ಕೆ ಛಲವಾದಿ ನಾರಾಯಣಸ್ವಾಮಿ ಸೇರಿ ವಿಪಕ್ಷ ಬಿಜೆಪಿ-ಜೆಡಿಎಸ್‌ ಸದಸ್ಯರು ಸಹ ಧ್ವನಿಗೂಡಿಸಿದರು.

ಕ್ರಮದ ಮಾಹಿತಿ ಕೊಡಿ
ಮಧ್ಯೆ ಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ, ಪ್ರತಿದಿನ ಹೇಳುತ್ತಿದ್ದೇನೆ. ಇನ್ನು ಯಾವ ಭಾಷೆಯಲ್ಲಿ ಹೇಗೆ ಹೇಳಬೇಕೆಂದು ನನಗಂತೂ ಅರ್ಥ ಆಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಉತ್ತರಗಳನ್ನು ಕೊಡಿಸಲಾಗುವುದು ಎಂದು ಸಭಾನಾಯಕ ಎನ್‌.ಎಸ್‌. ಬೋಸರಾಜ್‌ ಸಮಜಾಯಿಷಿ ನೀಡಿದರು. ಇದನ್ನು ಒಪ್ಪದ ಸಭಾಪತಿಗಳು, ಉತ್ತರ ಕೊಡದ ಅಧಿಕಾರಿಗಳ ಮೇಲೆ ಕೈಗೊಂಡ ಕ್ರಮದ ಬಗ್ಗೆ ಗುರುವಾರ ಸದನಕ್ಕೆ ಮಾಹಿತಿ ಕೊಡಬೇಕು ಎಂದು ತಾಕೀತು ಮಾಡಿದರು.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.