Indipendence Dayಗೆ ದೇಶ ಸಜ್ಜು: ದಿಲ್ಲಿಯಲ್ಲಿ ಬಂದೋಬಸ್ತ್
ನಾಳೆ ಕೆಂಪುಕೋಟೆಯಲ್ಲಿ 11ನೇ ಬಾರಿಗೆ ಪ್ರಧಾನಿ ಮೋದಿ ಭಾಷಣ, ಮಾಜಿ ಪ್ರಧಾನಿ ನೆಹರೂ, ಇಂದಿರಾ ಗಾಂಧಿ ಬಳಿಕ ಹೊಸ ದಾಖಲೆ
Team Udayavani, Aug 14, 2024, 7:09 AM IST
ಹೊಸದಿಲ್ಲಿ: 78ನೇ ಸ್ವಾತಂತ್ರ್ಯೋತ್ಸವಕ್ಕೆ ದೇಶ ಸಜ್ಜುಗೊಂಡಿದ್ದು, ಗುರು ವಾರ ಕೆಂಪು ಕೋ ಟೆ ಯಲ್ಲಿ ಧ್ವಜಾ ರೋ ಹಣ ನಡೆ ಯ ಲಿ ರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಜಮ್ಮು- ಕಾಶ್ಮೀರದಲ್ಲೂ ಸಮಾರಂಭದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ.
ಕೆಂಪು ಕೋಟೆಯ ಸಮಾರಂಭಕ್ಕೆ 4,000ಕ್ಕೂ ಅಧಿಕ ವಿಶೇಷ ಆಹ್ವಾನಿತರು ಹಾಜರಾಗಲಿದ್ದು, ಈ ಪೈಕಿ ದೇಶದ ನಾಲ್ಕು ಆಧಾರ ಸ್ತಂಭಗಳೆಂದು ಪರಿಗಣಿಸಲ್ಪಟ್ಟ ರೈತರು, ಯುವಜನತೆ, ಮಹಿಳೆಯರು ಮತ್ತು ಬಡವರ್ಗದ ಜನ ಇರಲಿದ್ದಾರೆ.
ಈ ವಿಶೇಷ ಆಹ್ವಾನಿತರ ಪಟ್ಟಿಯನ್ನು 11 ವಿಭಾಗಗಳಾಗಿ ವಿಂಗಡಿಸಲಾಗಿದೆ. ಕೃಷಿ ಮತ್ತು ರೈತರ ಅಭಿವೃದ್ಧಿ ವಿಭಾಗದಲ್ಲಿ 1,000 ಯುವಜನರ ವಿಭಾಗದಲ್ಲಿ 600, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಭಾಗದಿಂದ 300 ಮಹಿಳೆಯರಿಗೆ ಆಹ್ವಾನ ನೀಡಲಾಗಿದ್ದು ಈ ಪೈಕಿ 45 ಲಖ್ಪತಿ ದೀದಿಯರು, 30 ಡ್ರೋನ್ ದೀದಿಯರೂ ಇರಲಿದ್ದಾರೆ.
ಇನ್ನು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ವಿಭಾಗಗಳಲ್ಲಿ ತಲಾ 300, ಬುಡಕಟ್ಟು ವ್ಯವಹಾರ ವಿಭಾಗದ ಮೂಲಕ 350, ಶಿಕ್ಷಣ ಮತ್ತು ರಕ್ಷಣ ವಿಭಾಗದ ಮೂಲಕ ತಲಾ 200, ಕುಟುಂಬ ಕಲ್ಯಾಣ, ಕ್ರೀಡಾ ಇಲಾಖೆಗಳಿಂದ ತಲಾ 150 ಮಂದಿಗೆ ಆಹ್ವಾನ ನೀಡಲಾಗಿದೆ. ನೀತಿ ಆಯೋಗದ ವಿಭಾಗದಿಂದ 1,200 ಮಂದಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಇವರೆಲ್ಲ ರಿಗೂ ತಮ್ಮೊಂದಿಗೆ ಯಾರಾದರೂ ಒಬ್ಬರು ಕುಟುಂಬ ಸದಸ್ಯರನ್ನು ಕರೆತರಲು ಅನುಮತಿ ನೀಡಲಾಗಿದೆ. ಇನ್ನು ಈ ಬಾರಿಯ ಸಮಾ ರಂಭಕ್ಕೆ ಆಹ್ವಾನಿತರ ಸಂಖ್ಯೆ ಕಳೆದ ಬಾರಿ ಗಿಂತಲೂ ಹೆಚ್ಚಾಗಿದೆ. ಈಗಾಗಲೇ 18,000 ಇ- ಆಮಂತ್ರಣಗಳನ್ನೂ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೋದಿ ದಾಖಲೆ: 11ನೇ ಬಾರಿಗೆ ಭಾಷಣ
ಆ.15ರಂದು ಕೆಂಪುಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವದ ಭಾಷಣ ಮಾಡಲಿದ್ದಾರೆ. ಇದು ಪ್ರಧಾನಿಯಾಗಿ ಅವರು ಮಾಡಲಿರುವ ಸ್ವಾತಂತ್ರ್ಯೋತ್ಸವದ 11ನೇ ಭಾಷಣ. ಈ ಮೂಲಕ ಹೊಸ ದಾಖಲೆಯೂ ನಿರ್ಮಾಣವಾಗಲಿದೆ. ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ 17 ಬಾರಿ, ಬಳಿಕ ಮಾಜಿ ಪ್ರಧಾನಿ ಇಂದಿರಾ ಗಾಂಧಿ 16 ಬಾರಿ ಸ್ವಾತಂತ್ರ್ಯೋತ್ಸವ ಭಾಷಣ ಮಾಡಿದ್ದರು. ಈಗ 11ನೇ ಬಾರಿಗೆ ಭಾಷಣ ಮಾಡುವ ಮೂಲಕ ಮೋದಿ ಹೊಸ ದಾಖಲೆ ನಿರ್ಮಿಸುತ್ತಿದ್ದಾರೆ.
ಇಂದು ರಾಷ್ಟ್ರಪತಿ ಭಾಷಣ:
78ನೇ ಸ್ವಾತಂತ್ರೋತ್ಸವದ ಅಂಗವಾಗಿ ಬುಧವಾರ ಸಂಜೆ ರಾಷ್ಟಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಂಜೆ 7ರಿಂದ ಭಾಷಣದ ನೇರ ಪ್ರಸಾರ ಪ್ರಸಾರವಾಗಲಿದೆ.
ಇಂದು ಅಮೃತ ಉದ್ಯಾನ ಉದ್ಘಾಟನೆ: ತುಳಸಿ ವಿತರಣೆ
ಹೊಸದಿಲ್ಲಿ: ನವೀಕರಣಗೊಂಡ ಅಮೃತ ಉದ್ಯಾನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಉದ್ಘಾಟಿಸ ಲಿದ್ದು, ಶುಕ್ರವಾರದಿಂದ ಸೆ.15ರ ವ ರೆಗೆ ಸಾರ್ವಜನಿಕರ ಪ್ರವೇಶಕ್ಕೆ ಅವ ಕಾ ಶ ವಿ ರ ಲಿ ದೆ. ಅಲ್ಲದೇ ಕಲ್ಲಿನ ಅಬ್ಯಾಕಸ್, ಧ್ವನಿ ಕೊಳವೆ, ಸಂಗೀತ ಗೋಡೆಗಳನ್ನು ಮಕ್ಕಳನ್ನು ಆಕರ್ಷಿ ಸಲೆಂದು ನಿರ್ಮಿಸಲಾಗಿದೆ. ಪರಿಸರ ಸಂರಕ್ಷಣೆಯ ಮಹತ್ವ ಮತ್ತು ಹೊಸ ಜೀವನದ ದ್ಯೋತಕವಾಗಿ ಉದ್ಯಾನಕ್ಕೆ ಭೇಟಿ ನೀಡುವವರಿಗೆ ತುಳಸಿ ಸಸ್ಯದ ಬೀಜಗಳುಳ್ಳ ಸೀಡ್ ಪೇಪರ್ ನೀಡಲಾಗು ವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.