ಕೋವಿಡ್ 19 ಹೋರಾಟ: ಉಡುಪಿ ಮಾದರಿ

ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ; ನಿಯಂತ್ರಣದಲ್ಲೂ ಎತ್ತಿದ ಕೈ

Team Udayavani, Apr 18, 2020, 5:30 AM IST

ಕೋವಿಡ್ 19 ಹೋರಾಟ: ಉಡುಪಿ ಮಾದರಿ

ಉಡುಪಿ: ಕೋವಿಡ್ 19 ವೈರಾಣು ಪ್ರಸರಣವನ್ನು ತಡೆಯಲು ಉಡುಪಿ ಜಿಲ್ಲಾಡಳಿತವು ಅನುಸರಿಸಿದ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಜಿಲ್ಲೆಯು ಕೋವಿಡ್‌-19 ಅಪಾಯದಿಂದ ಮುಕ್ತಿ ಹೊಂದುವ ದಾರಿಯಲ್ಲಿದೆ.

ಶಂಕಿತ ಕೋವಿಡ್ 19 ಲಕ್ಷಣಗಳನ್ನು ಹೊಂದಿರುವವರನ್ನು ಮುಂಚಿತ ವಾಗಿ ಗುರುತಿಸಿ, ಅವರನ್ನು ಪರೀಕ್ಷೆಗೊಳ ಪಡಿಸುವುದು, ಕ್ವಾರಂಟೈನ್‌ ಮಾಡುವುದು ಕೋವಿಡ್ 19 ಪ್ರಸರಣ ತಡೆಗೆ ಉಪಯುಕ್ತ ಕ್ರಮ. ಹೀಗೆ ಪರೀಕ್ಷೆಗಾಗಿ ಕಳುಹಿಸಿದ ಶಂಕಿತರ ಗಂಟಲುದ್ರವ ಮಾದರಿಗಳ ಸಂಖ್ಯೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ಪ್ರತಿ 10 ಲಕ್ಷ ಜನಸಂಖ್ಯೆಗೆ ಅನುಗುಣವಾಗಿ ಕಳುಹಿಸಲಾದ ಸರಾಸರಿ ಮಾದರಿಯಂತೆ ಈ ಲೆಕ್ಕಾಚಾರ ಹಾಕಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಇದನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.ದೇಶ ಮಟ್ಟದಲ್ಲಿ ಇದುವರೆಗೆ 10 ಲಕ್ಷ ಮಂದಿಗೆ ಸರಾಸರಿ 220ರಂತೆ 3 ಲಕ್ಷಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಶೇ. 65 ಪರೀಕ್ಷೆ
ಮೂರ್‍ನಾಲ್ಕು ದಿನಗಳ ಹಿಂದೆ 403 ಮಾದರಿಗಳ ಸಂಗ್ರಹವಾಗಿದ್ದಾಗ ಜಿಲ್ಲೆ ರಾಜ್ಯದಲ್ಲಿ ಲಕ್ಷ ಜನಸಂಖ್ಯೆಗೆ ಶೇ.34ರ ಸಾಧನೆ ಮಾಡಿ ಪ್ರಥಮ ಸ್ಥಾನದಲ್ಲಿತ್ತು.

ಶುಕ್ರವಾರದ ವರೆಗೆ 839 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಜಿಲ್ಲೆಯ ಜನಸಂಖ್ಯೆ ಸುಮಾರು 13 ಲಕ್ಷ. ಅಂದರೆ ಲಕ್ಷ ಜನಸಂಖ್ಯೆಗೆ ಸುಮಾರು ಶೇ.65ರಂತೆ ಪರೀಕ್ಷೆನಡೆಸಲಾಗಿದೆ. ಇದು ದೇಶ ಮಟ್ಟ ದಲ್ಲೂ ಉತ್ತಮ ಸಾಧನೆಯೇ.

ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಎಷ್ಟು ಬಿಗಿ ಕ್ರಮಗಳನ್ನು ಕೈಗೊಂಡಿದೆ ಎಂದರೆ, ಸೋಂಕು ದೃಢಪಟ್ಟ ವ್ಯಕ್ತಿಯಪ್ರಾಥಮಿಕ ಸಂಪರ್ಕ ಹೊಂದಿದ ವರು ಮಾತ್ರವಲ್ಲದೆ, ಪ್ರಾಥಮಿಕ ಸಂಪರ್ಕ ಹೊಂದಿದವರ ಸಂಪರ್ಕಿತರನ್ನೂ ಕ್ವಾರಂಟೈನ್‌ ಮಾಡಿಪರೀಕ್ಷೆಗೆ ಒಳಪಡಿಸಲಾಗಿದೆ ಸೋಂಕು ಸಮುದಾಯದತ್ತ ನುಗ್ಗದಂತೆ ಆರೋಗ್ಯ ಇಲಾಖೆ ಸಿಬಂದಿ, ಆಶಾ ಕಾರ್ಯಕರ್ತೆಯರು ಅತೀವ ಶ್ರಮ ವಹಿಸಿದ್ದಾರೆ.ಜಿಲ್ಲೆಯ ಗಡಿಗಳನ್ನು ಮುಚ್ಚಿರು ವುದೂ ಸೋಂಕು ನಿಯಂತ್ರಣದಲ್ಲಿ ಪ್ರಧಾನ ಪಾತ್ರ ವಹಿಸಿದೆ.

ತೀವ್ರ ಉಸಿರಾಟದ ಸಮಸ್ಯೆ
ಹೊಂದಿದವರ ಗಂಟಲ ದ್ರವ ಸಂಗ್ರಹಿಸಿದ ಸಾಧನೆಯಲ್ಲಿಯೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನವಿದೆ. ಉಸಿರಾಟ ಸಮಸ್ಯೆ
ಯುಳ್ಳ ಸುಮಾರು 100 ಮಂದಿಯ ಮಾದರಿ ಸಂಗ್ರಹಿಸಲಾಗಿದೆ.

ಇಬ್ಬರು ಗುಣಮುಖ ಜಿಲ್ಲೆಯಲ್ಲಿ ಕೋವಿಡ್ 19 ದೃಢ
ಪಟ್ಟ ಮೂವರಲ್ಲಿ ಇಬ್ಬರು ಈಗಾಗಲೇ ಗುಣಮುಖರಾಗಿ ದ್ದಾರೆ, ಇನ್ನೊಬ್ಬರ ಮೊದಲ ವರದಿ ನೆಗೆಟಿವ್‌ ಬಂದಿದೆ. ಕೇಂದ್ರ ಆರೋಗ್ಯ ಇಲಾಖೆಯ ಮಾರ್ಗದರ್ಶಿ ಸೂತ್ರದನ್ವಯ ಜಿಲ್ಲೆಯು ಆರೆಂಜ್‌ ಮತ್ತು ನಾನ್‌ ಹಾಟ್‌ಸ್ಪಾಟ್‌ ವಲಯದಲ್ಲಿದೆ.

ಕೋವಿಡ್ 19 ಸೋಂಕುಪೀಡಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕದವರು ಹಾಗೂ ತೀವ್ರ ಉಸಿರಾಟದ ಸಮಸ್ಯೆಯುಳ್ಳವರನ್ನು ಪತ್ತೆ ಮಾಡಿ ಮಾದರಿಗಳನ್ನು ಸಂಗ್ರಹಿಸಿದ ಕಾರಣ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪ್ರಾಪ್ತಿಯಾಗಿದೆ.
– ಡಾ|ಸುಧೀರ್‌ಚಂದ್ರ ಸೂಡ,
ಜಿಲ್ಲಾ ಆರೋಗ್ಯಾಧಿಕಾರಿ, ಉಡುಪಿ ಜಿಲ್ಲೆ

ರೋಗ ಲಕ್ಷಣ ಗುರುತಿಸಲು ಪರೀಕ್ಷೆ ನಡೆಸುವುದು ಬಹಳ ಮುಖ್ಯ. ಇದಕ್ಕಾಗಿ ಆರೋಗ್ಯ ಇಲಾಖೆ ಸಿಬಂದಿ ಉತ್ತಮ ರೀತಿಯಲ್ಲಿ ಶ್ರಮಿಸಿದ್ದಾರೆ.ಆದ್ದರಿಂದ ರಾಜ್ಯದಲ್ಲಿ ಲಕ್ಷ ಜನಸಂಖ್ಯೆಗೆ ಮಾದರಿ ಪರೀಕ್ಷೆಗಳನ್ನು ಅತಿ ಹೆಚ್ಚು ನಡೆಸಿದ ಹಿರಿಮೆಗೆ ಉಡುಪಿ ಪಾತ್ರವಾಗಿದೆ.ಆರೋಗ್ಯ ಇಲಾಖೆ ಸಿಬಂದಿಗೆ ಅಭಿನಂದನೆಗಳು.ಅವರು ಮುಂದೆಯೂ ಇದೇ ಗುಣಮಟ್ಟದಲ್ಲಿ ಶ್ರಮಿಸುತ್ತಾರೆ ಎಂಬ ವಿಶ್ವಾಸವಿದೆ.
ಜಿ. ಜಗದೀಶ್‌, ಜಿಲ್ಲಾಧಿಕಾರಿಗಳು, ಉಡುಪಿ

ಟಾಪ್ ನ್ಯೂಸ್

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

Farmers ಪಾತಾಳಕ್ಕಿಳಿದ ಶುಂಠಿ ಬೆಲೆ; ಬೆಳೆಗಾರ ಕಂಗಾಲು

Farmers ಪಾತಾಳಕ್ಕಿಳಿದ ಶುಂಠಿ ಬೆಲೆ; ಬೆಳೆಗಾರ ಕಂಗಾಲು

ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

Bengaluru: ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

Kharge 2

CM ಹುದ್ದೆ ವಿಚಾರದಲ್ಲಿ ಸಚಿವರಿಂದಲೇ ಗೊಂದಲ: ಖರ್ಗೆಗೆ ಪತ್ರ ಬರೆದ ಪರಿಷತ್ ಸದಸ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

21

CM ಪ್ರತಿಕೃತಿಗೆ ಚಪ್ಪಲಿ ಏಟು; ಶಾಸಕ ಯಶ್‌ಪಾಲ್‌ ಸುವರ್ಣ ಸೇರಿ 11 ಮಂದಿ ವಿರುದ್ಧ ಎಫ್ಐಆರ್‌

car-parkala

Bramavara: ಅಪಘಾತ: ಸ್ಕೂಟಿ ಸವಾರ ಸಾವು

Hebri ಶತಾಯುಷಿ ಕಜ್ಕೆ ಮಂಜುನಾಥ ಕಾಮತ್ ನಿಧನ

Hebri ಶತಾಯುಷಿ ಕಜ್ಕೆ ಮಂಜುನಾಥ ಕಾಮತ್ ನಿಧನ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 13ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 13ನೇ ರೀಲ್ಸ್ ಪ್ರಸಾರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

BC Road ಕಾರು ಅಪಘಾತವಾದ ಸ್ಥಳ ಪರಿಶೀಲಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

1-ak

AAP; ಹಣಕಾಸು ಅಕ್ರಮ: ಆಪ್‌ ಶಾಸಕ ಖಾನ್‌ಗೆ ನ್ಯಾಯಾಂಗ ಬಂಧನ

Kasaragod: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Kasaragod: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.