![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 5, 2021, 7:30 AM IST
ಬೆಂಗಳೂರು : ಜನರು ಸ್ವಲ್ಪ ಎಚ್ಚರ ತಪ್ಪಿದರೂ ರಾಜ್ಯದಲ್ಲಿ ಮೂರನೇ ಬಾರಿಗೆ ಲಾಕ್ಡೌನ್ ಖಚಿತ ಎಂದು ಸಚಿವ ಆರ್. ಅಶೋಕ್ ಎಚ್ಚರಿಸಿದ್ದಾರೆ.
ಒಂದು ಮತ್ತು ಎರಡನೇ ಅಲೆಯ ಹಾವಳಿಯಿಂದ ವರ್ಷದ ಅಂತರದಲ್ಲಿ 2 ಬಾರಿ ಲಾಕ್ಡೌನ್ ಮಾಡಬೇಕಾಯಿತು. ತಜ್ಞರು 3ನೇ ಅಲೆಯ ಬಗ್ಗೆ ಎಚ್ಚರಿಕೆ ನೀಡುತ್ತಿದ್ದಾರೆ. ಈಗಷ್ಟೇ ಅನ್ಲಾಕ್ ಆಗುತ್ತಿದ್ದು, ಜನರು ಎಚ್ಚರದಿಂದ ಇರಬೇಕು ಎಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು ಆತಂಕ ವ್ಯಕ್ತಪಡಿಸಿದರು.
ಮೈಮರೆತರೆ ಅಪಾಯ
ರಾಜ್ಯಾದ್ಯಂತ ಸೋಮವಾರದಿಂದ ಹೆಚ್ಚು ಕಡಿಮೆ ಎಲ್ಲ ನಿರ್ಬಂಧಗಳೂ ತೆರವಾಗಲಿವೆ. ಆದರೆ ಜನ ಮೈಮರೆಯಬಾರದು ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಮಹಾರಾಷ್ಟ್ರ, ಕೇರಳದಲ್ಲಿ ಪ್ರತೀ ದಿನ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಆಂಧ್ರ, ತಮಿಳುನಾಡಿನಲ್ಲೂ ದಿನಕ್ಕೆ ನಾಲ್ಕೈದು ಸಾವಿರ ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಡೆಲ್ಟಾ+ ಪ್ರಕರಣಗಳು ಹೆಚ್ಚು ವರದಿಯಾಗಿವೆ. ಹೀಗಾಗಿ ರಾಜ್ಯದ ಜನತೆ ಮೈಮರೆಯುವಂತಿಲ್ಲ ಎಂದು ತಜ್ಞರು ಹೇಳಿದ್ದಾರೆ.
ನಿಯಮ ಪಾಲನೆಯಾಗದಿದ್ದರೆ ಮತ್ತೆ ಸೋಂಕು ಏರಿಕೆಯಾಗುತ್ತದೆ ಎಂದು ಡಾ| ವಿ. ರವಿ ಎಚ್ಚರಿಸಿದ್ದಾರೆ. ವರ್ಷಾಂತ್ಯದ ವರೆಗೂ ಮುಂಜಾಗ್ರತೆ ಕ್ರಮ ಪಾಲಿಸಲೇಬೇಕು ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ| ಸಿ.ಎನ್. ಮಂಜುನಾಥ್ ಹೇಳಿದ್ದಾರೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.