ಗೋಡೆ ಕೊರೆದು 1.2 ಕೆಜಿ ಚಿನ್ನ ಕಳವು :ಆರೋಪಿಗಳ ಕೃತ್ಯ ಮಳಿಗೆಯ ಸಿಸಿ ಕ್ಯಾಮೆರಾದಲ್ಲಿ ಸೆರೆ


Team Udayavani, Feb 24, 2022, 1:15 PM IST

ಗೋಡೆ ಕೊರೆದು 1.2 ಕೆಜಿ ಚಿನ್ನ ಕಳವು :  ಆರೋಪಿಗಳ ಕೃತ್ಯ ಮಳಿಗೆಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಬೆಂಗಳೂರು: ಜ್ಯುವೆಲ್ಲರಿ ಮಳಿಗೆಯ ಗೋಡೆ ಕೊರೆದು ಚಿನ್ನಾಭರಣ ದೋಚಿರುವ ಘಟನೆ ಹೆಣ್ಣೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಣ್ಣೂರಿನ ಸರಾಯಿಪಾಳ್ಯ ದಲ್ಲಿರುವ ರಾಘವೇಂದ್ರ ಜ್ಯುವೆಲ್ಲರಿಯ ಗೋಡೆ ಕೊರೆದ ಆರೋಪಿಗಳು, 50 ಲಕ್ಷ ರೂ. ಮೌಲ್ಯದ 1,200 ಗ್ರಾಂ ಚಿನ್ನಾ ಭರಣ ದೋಚಿದ್ದಾರೆ. ಮಳಿಗೆಗೆ ಹೊಂದಿಕೊಡಂತೆ ಪಕ್ಕದ ಕಟ್ಟಡಕ್ಕೆ ಹೋಗಲು ಮೆಟ್ಟಿಲುಗಳಿದ್ದು, ಈ ಭಾಗದಲ್ಲಿ ಮಳಿಗೆಯ ಗೋಡೆಯನ್ನು ಕೊರೆದು, ಒಳ ನುಗ್ಗಿರುವ ಕಳ್ಳರು ಚಿನ್ನಾಭರಣ ದೋಚಿದ್ದಾರೆ. ಬುಧವಾರ ಬೆಳಗ್ಗೆ ಮಾಲೀಕರು ಮಳಿಗೆ ತೆರೆಯಲು ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಆರೋಪಿಗಳ ಕೃತ್ಯ ಮಳಿಗೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿಗಳ ಪತ್ತೆಗಾಗಿ ಹೆಣ್ಣೂರು ಠಾಣೆ ಇನ್‌ಸ್ಪೆಕ್ಟರ್‌ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮಳಿಗೆ ಬಾಗಿಲು ಮೀಟಿ ದರೋಡೆ

ಬೆಂಗಳೂರು: ನಸುಕಿನಲ್ಲಿ ಜ್ಯುವೆಲ್ಲರಿ ಮಳಿಗೆಯ ಬಾಗಿಲು ಮೀಟಿ ಒಳಗೆ ಮಲಗಿದ್ದ ಕೆಲಸಗಾರರಿಗೆ ಮಾರಕಾಸ್ತ್ರಗಳನ್ನು ತೋರಿಸಿ ಚಿನ್ನದ ಹಾಗೂ ಬೆಳ್ಳಿ ವಸ್ತಗಳನ್ನು ದೋಚಿದ್ದ ಐವರು ದರೋಡೆಕೋರರು ಒಂದು ವರ್ಷದ ಬಳಿಕ ಸಿಟಿ ಮಾರುಕಟ್ಟೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಮೊಹಮ್ಮದ್ ಫರ್ಹಾನ್ , ನದೀಮ್‌ ಪಾಷಾ, ನಯಾಜ್‌ ಪಾಷಾ, ಸಲ್ಮಾನ್‌ ಪಾಷಾ, ಇಮ್ರಾನ್‌ ಪಾಷಾ ಬಂಧಿತರು. ಆರೋಪಿಗಳಿಂದ 3.77 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ 2 ಚಿನ್ನದ ಸರಗಳು, ಒಂದು ಕೆ.ಜಿ. 80 ಗ್ರಾಂ ತೂಕದ ಬೆಳ್ಳಿ ಸಾಮಾನುಗಳು, 25 ಸಾವಿರ ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಉಕ್ರೇನ್ ಮೇಲ್ಯಾಕೆ ರಷ್ಯಾ ಕಣ್ಣು? ವಿವಾದದ ಮೂಲವೇನು? NATO ಕಂಡರೆ ಪುಟಿನ್ ಗೆ ಯಾಕೆ ಉರಿ?

ಚಿಕ್ಕಪೇಟೆಯಲ್ಲಿರುವ ಆರ್‌.ಜೆ.ಜ್ಯುವೆಲ್ಲರಿ ಮಳಿಗೆಯಲ್ಲಿ ದೂರುದಾರ ಲಕ್ಷ್ಮಿಕಾಂತ್ ಘೋರೈ ಸೇರಿ ಮೂವರು ಕೆಲಸಗಾರರು ಇದ್ದು, ಕಳೆದ ವರ್ಷ ಲಾಕ್‌ಡೌನ್‌ ಇದ್ದರಿಂದ ಅಲ್ಲಿಯೇ ಕೆಲಸ ಮಾಡಿ ಮಲಗುತ್ತಿದ್ದರು. ಮೇ 12ರ  ನಸುಕಿನ 3.30ರ ಸುಮಾರಿಗೆ ಐದು ಮಂದಿ ದರೋಡೆಕೋರರು ಮಳಿಗೆಯ ಬಾಗಿಲು ಮೀಟಿ ಒಳಗಡೆ ಬಂದಿದ್ದಾರೆ. ಆ ಸಂದರ್ಭದಲ್ಲಿ ಕೆಲಸಗಾರರಿಗೆ ಎಚ್ಚರವಾಗಿದೆ. ಆಗ ದರೋಡೆಕೋರರು ಏಕಾಏಕಿ ಮಾರಕಾಸ್ತ್ರಗಳನ್ನು ತೋರಿಸಿ ಮೂವರ ಮೇಲೆ ಹಲ್ಲೆ ನಡಸಿದ್ದು, ಲಕ್ಷ್ಮಿಕಾಂತ್ ಘೋರೈ ಕತ್ತಿನಲ್ಲಿದ್ದ 80 ಗ್ರಾಂ ತೂಕದ ಚಿನ್ನದ ಸರ, ಅಂಗಡಿಯಲ್ಲಿ ಒಂದು ಕೆ.ಜಿ.ಬೆಳ್ಳಿ ವಸ್ತುಗಳನ್ನು ಹಾಗೂ ಇತರೆ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ಸಂಬಂಧ ಕಾರ್ಯಾಚರಣೆ ನಡೆಸಿ ಒಂದು ವರ್ಷಗಳ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.