ಹೂತು ಹಾಕಿದ್ದ ಶವ ಮರಣೋತ್ತರ ಪರೀಕ್ಷೆಗೆ

ವರದಿ ಬಂದ ಬಳಿಕ ಸಾವಿನ ಕಾರಣ ಸ್ಪಷ್ಟ: ಶಂಕಿತ ಆರೋಪಿಗಳ ಬಿಡುಗಡೆ

Team Udayavani, Feb 7, 2022, 6:45 AM IST

ಹೂತು ಹಾಕಿದ್ದ ಶವ ಮರಣೋತ್ತರ ಪರೀಕ್ಷೆಗೆ

ಕುಂಬಳೆ: ಕನಿಯಾಲ ಮುಂಡೋಳಿಯಲ್ಲಿ ಅಡಿಕೆ ತೋಟದಲ್ಲಿ ಹೂತು ಹಾಕಿದ್ದ ಝಾರ್ಖಂಡ್‌ ಮೂಲದ ಕೂಲಿ ಕಾರ್ಮಿಕ ಶಿವಚಂದ್‌ ಮೃತದೇಹವನ್ನು ರವಿವಾರ ಮೇಲೆತ್ತಲಾಯಿತು.

ಕಂದಾಯ ಅಧಿಕಾರಿ ಆಂಡೊ ಪಿ. ಜೆ., ವಿಧಿವಿಜ್ಞಾನ ತಂಡದ ಅಧಿಕಾರಿ ದೀಪ್ನಾ, ಆರೋಗ್ಯ ಅಧಿಕಾರಿ ಡಾ| ರೋಹಿತ್‌, ಕಾಸರಗೋಡು ಡಿವೈಎಸ್‌ಪಿ ಬಾಲಕೃಷ್ಣನ್‌, ಮಂಜೇಶ್ವರ ಸಿಐ ಸಂತೋಷ್‌, ಎಸ್‌ಐ ಅನ್ಸಾರ್‌ ಮುಂತಾದವರ ಸಮ್ಮುಖದಲ್ಲಿ ಶವವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ಒಯ್ಯಲಾಯಿತು.

ಸ್ಥಳೀಯ ನಿವಾಸಿ ವಿಶ್ವನಾಥ ಭಟ್‌ ಅವರು ತಮ್ಮ ಭಾವ ಗೋವಿಂದ ಭಟ್ಟರ ಅಡಿಕೆ ತೋಟದಲ್ಲಿ ಡಿ. 25ರಂದು ಮರವೊಂದನ್ನು ಕಡಿಸಿದ್ದರು. ಮರದ ಕೊಂಬೆ ಮುರಿದು ವಿದ್ಯುತ್‌ ಕಂಬಕ್ಕೆ ತಾಗಿ ಆಘಾತಕ್ಕೊಳಗಾಗಿ ಸಾವು ಸಂಭವಿಸಿರುವುದಾಗಿ ಪ್ರಥಮ ಹಂತದ ತನಿಖೆಯಲ್ಲಿ ತಿಳಿದು ಬಂದಿದೆ. ಆದರೆ ಅದು ವಿಶ್ವಾಸಾರ್ಹವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಭಟ್ಟರ ಭಿನ್ನ ಹೇಳಿಕೆ
ಡಿ.23ರಂದು ತಾನು ಕಾರ್ಯ ಕ್ರಮವೊಂದಕ್ಕೆ ತೆರಳಿದ್ದಾಗ ಕಾರ್ಮಿಕ ನೋರ್ವ ನನಗೆ ಮೊಬೈಲ್‌ ಕರೆ ಮಾಡಿ, ಶಿವಚಂದ್‌ ತೋಡಿನ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ. ಶವವನ್ನು ತೋಡಿನಲ್ಲಿ ಹೂಳುವುದಾಗಿ ತಿಳಿಸಿದ್ದ. ನಾನು ಡಿ.24ಕ್ಕೆ ಬಂದಾಗ ಶವವನ್ನು ತೋಟದಲ್ಲಿ ಹೂತಿರುವುದಾಗಿ ಕಂಡು ಬಂತು ಎಂಬುದಾಗಿ ಭಟ್ಟರು ಹೇಳಿದರು.

ಹೆಚ್ಚಿದ ಸಂಶಯ
ಈ ರೀತಿಯ ಭಿನ್ನ ಹೇಳಿಕೆಗಳಿಂದ ಸಾವಿನ ಬಗ್ಗೆ ಸಂಶಯ ಬಲವಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ನಿಜಾಂಶ ಹೊರಬರಲಿದೆ. ಶರ್ಟ್‌ಪ್ಯಾಂಟ್‌ ಧರಿಸಿದ್ಧ ಶವವನ್ನು ಗೋಣಿಯಲ್ಲಿ ಸುತ್ತಿ ಹೂಳಲಾಗಿದೆ.

ಶಂಕಿತ ಆರೋಪಿಗಳ ಬಿಡುಗಡೆ
ಮಂಜೇಶ್ವರ ಪೊಲೀಸರು ವಿಚಾರಣೆ ಗಾಗಿ ವಶಕ್ಕೆ ಪಡೆದಿದ್ದ ವಿಶ್ವನಾಥ ಭಟ್‌ ಮತ್ತು ಇತರ ಕಾರ್ಮಿಕರನ್ನು ತನಿಖೆ ನಡೆಸಿ ಷರತ್ತಿನಲ್ಲಿ ಬಿಡುಗಡೆ ಮಾಡಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ನೆರೆದಿದ್ದರು. ಮೃತದೇಹವನ್ನು ಹೂತು ಹಾಕಿದ್ದಾರೆ ಎಂದು ಹೇಳಲಾಗಿರುವ ಝಾರ್ಖಂಡ್‌ ಮೂಲದ ಕೂಲಿ ಕಾರ್ಮಿಕರಿಂದಲೇ ಈಗ ಅದನ್ನು ಹೊರಕ್ಕೆ ತರಲಾಗಿದೆ.

ಟಾಪ್ ನ್ಯೂಸ್

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.