Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

ಒಟ್ಟಾರೆ ಗಮಿನಿಸಿದರೆ ಧಾರ್ಮಿಕ ಕ್ಷೇತ್ರಗಳಿಗೆ ಆಗಮಿಸಿದ ಪ್ರವಾಸಿಗರೇ ಸಿಂಹ ಪಾಲು.

Team Udayavani, May 2, 2024, 12:48 PM IST

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ತಾಪ ಏರಿಕೆಯಾಗುತ್ತಿದ್ದರೂ ಇಲ್ಲಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲೇನು ಕಡಿಮೆಯಾಗಿಲ್ಲ. ಮೂರು ತಿಂಗಳಲ್ಲಿ ಜಿಲ್ಲೆಗೆ ಸುಮಾರು 1.23 ಕೋಟಿ ಗೂ ಅಧಿಕ ಮಂದಿ ಪ್ರವಾಸಿಗರು ವಿವಿಧ ಪ್ರವಾಸಿ ತಾಣಗಳಿಗೆ ಆಗಮಿಸಿದ್ದಾರೆ.

ದ.ಕ. ಜಿಲ್ಲೆಯ ಬೀಚ್‌, ಧಾರ್ಮಿಕ ಕ್ಷೇತ್ರ, ಉದ್ಯಾನವನ ಸಹಿತ ವಿವಿಧ ಪ್ರೇಕ್ಷಣೀಯ ಸ್ಥಳಗಳು ಪ್ರವಾಸಿಗರಿಗೆ ಆಕರ್ಷಣೆ ಪಡೆಯುತ್ತಿದೆ. ಜನವರಿ ತಿಂಗಳಿನಿಂದ ಮಾರ್ಚ್‌ ತಿಂಗಳವರೆಗೆ ಒಟ್ಟು 1,23,28,390 ಮಂದಿ ದೇಶೀಯ ಮತ್ತು 3347 ಮಂದಿ ವಿದೇಶಿ ಪ್ರವಾಸಿಗರು ಆಗಮಿಸಿ, ವಿವಿಧ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಒಟ್ಟಾರೆ ಗಮಿನಿಸಿದರೆ ಧಾರ್ಮಿಕ ಕ್ಷೇತ್ರಗಳಿಗೆ ಆಗಮಿಸಿದ ಪ್ರವಾಸಿಗರೇ ಸಿಂಹ ಪಾಲು.

ಕುಕ್ಕೆ ಸುಬ್ರಹ್ಮಣ್ಯಕ್ಕೆ 27 ಲಕ್ಷ ಮಂದಿ, ಧರ್ಮಸ್ಥಳ ಕ್ಷೇತ್ರಕ್ಕೆ 26.01 ಲಕ್ಷ, ಶ್ರೀ ಕ್ಷೇತ್ರ ಕಟೀಲಿಗೆ 23.99 ಲಕ್ಷ, ತಣ್ಣೀರುಬಾವಿ 5.96 ಲಕ್ಷ, ಸೋಮೇಶ್ವರ 3.11 ಲಕ್ಷ, ಪಣಂಬೂರು ಬೀಚ್‌ಗೆ 6.76 ಲಕ್ಷ, ಪಿಲಿಕುಳ 2.83 ಲಕ್ಷ, ಬಪ್ಪನಾಡು ಕ್ಷೇತ್ರ 6.51 ಲಕ್ಷ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಕ್ಷೇತ್ರ 2.49 ಲಕ್ಷ ಸಹಿತ ವಿವಿಧ ಕಡೆಗಳಿಗೆ ಪ್ರವಾಸಿಗರು ಭೇಟಿ ನೀಡಿದ್ದಾರೆ.

ವಿದೇಶಿ ಪ್ರವಾಸಿಗರು ಬಂದವರೆಷ್ಟು?
ದಕ್ಷಿಣ ಕನ್ನಡ ಜಿಲ್ಲೆಗೆ ರಸ್ತೆ, ವಿಮಾನ, ರೈಲು, ಹಡಗು ಸಂಪರ್ಕ ಇರುವ ಕಾರಣ ವಿದೇಶದಿಂದಲೂ ಹಲವಾರು ಮಂದಿ ಇಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಮೂರು ತಿಂಗಳಲ್ಲಿ 3,347 ಮಂದಿ ವಿದೇಶಿಗರು ಆಗಮಿಸಿದ್ದಾರೆ. ಮುಖ್ಯವಾಗಿ ಪಿಲಿಕುಳ
ನಿಸರ್ಗಧಾಮ 705 ಮಂದಿ, ಧರ್ಮಸ್ಥಳ 435, ಮೂಡುಬಿದಿರೆ 650, ಪಣಂಬೂರು 465, ಸುರತ್ಕಲ್‌ 275, ಕಟೀಲು 175,
ಸೋಮೇಶ್ವರ 126, ತಣ್ಣೀರುಬಾವಿ 139 ಮಂದಿ ಭೇಟಿ ನೀಡಿದ್ದಾರೆ.

ಎಲ್ಲೆಲ್ಲಿಗೆ ಬಂದವರು?
ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು, ಸುರತ್ಕಲ್‌, ಉಳ್ಳಾಲ, ಸೋಮೇಶ್ವರ, ಕಟೀಲು, ಮೂಡಬಿದಿರೆ, ತಣ್ಣೀರುಬಾವಿ, ಪಿಲಕುಳ ನಿಸರ್ಗಧಾಮ, ಸಸಿಹಿತ್ಲು ಬೀಚ್‌, ತಲಪಾಡಿ ಬೀಚ್‌, ನೆಲ್ಲಿತೀರ್ಥ ಗುಹಾಲಯ, ಗುರುಪುರ ನದಿ, ನೇತ್ರಾವತಿ ನದಿ, ಸೀಮಂತಿಬಾಯಿ ಮ್ಯೂಸಿಯಂ, ಸುಲ್ತಾನ್‌ಬತ್ತೇರಿ, ಪಾಂಡೇಶ್ವರ ಅಂಚೆ ಕಚೇರಿ, ಧರ್ಮಸ್ಥಳ, ವೇಣೂರು, ಜಮಲಾಬಾದ್‌ ಕೋಟೆ, ಎರ್ಮಾಯಿ ಜಲಪಾತ, ದಿಡುಪ್ಪೆ ಜಲಪಾತ, ಕಡಮಗುಂಡಿ ಜಲಪಾತ, ಪಶ್ಚಿಮಘಟ್ಟ, ತೋಡಿಕಾನ ಜಲಪಾತ, ಮತ್ಸ್ಯದಾಮ, ಎಣ್ಮೂರು ಬಂಟಮಲೆ ಮತ್ತು ಪೂಮಲೆ, ಬೆಂದ್ರ್ತೀರ್ಥ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ಶಿರಾಡಿ,
ಬಿರುಮಲೆ ಬೆಟ್ಟ, ಪಡುಮಲೆ ಬೆಟ್ಟ, ಶಿವರಾಮ ಕಾರಂತ ಬಾಲವನ, ಅನಂತವಾಡಿ ಪಾಂಡವರ ಗುಹೆ, ಕೊಡ್ಯಡ್ಕ, ಬೆಳುವಾಯಿ ಚಿಟ್ಟೆ ಪಾರ್ಕ್‌, ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ, ಶ್ರೀ ಬಪ್ಪನಾಡು ಕ್ಷೇತ್ರ, ಶ್ರೀ ಮರೋಳಿ ಕ್ಷೇತ್ರ ಸಹಿತ ಒಟ್ಟು 38 ಸ್ಥಳಗಳಿಗೆ 1.23 ಕೋಟಿಗೂ ಮಿಕ್ಕಿ ಪ್ರವಾಸಿಗರು ದೌಡಾಯಿಸಿದ್ದಾರೆ.

ಕಳೆದ ವರ್ಷ ಮೂರು ಕೋಟಿ ಪ್ರವಾಸಿಗರು
ದಕ್ಷಿಣ ಕನ್ನಡ ಜಿಲ್ಲೆಗೆ ಕಳೆದ ವರ್ಷ (2023) 3.28 ಕೋಟಿ ಮಂದಿ ದೇಶೀಯರು ಮತ್ತು 3,818 ಮಂದಿ ವಿದೇಶಿ ಪ್ರವಾಸಿಗರು ಆಗಮಿಸಿದ್ದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಪ್ರವಾಸಿಗರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. 2022ರಲ್ಲಿ ಕೋವಿಡ್‌ ಆತಂಕ ಕಾರಣಕ್ಕೆ ಪ್ರವಾಸಿಗರ ಸಂಖ್ಯೆಯಲ್ಲೂ ಇಳಿಕೆ ಕಂಡಿತ್ತು. 1.28 ಕೋಟಿ ಮಂದಿ ದೇಶೀಯರು, 1,261 ಮಂದಿ ವಿದೇಶಿ ಪ್ರವಾಸಿಗರ ಆಗಮನವಾಗಿತ್ತು.

ಪ್ರವಾಸೋದ್ಯಮ ಚೇತರಿಕೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರ ಚಿಗುರೊಡೆಯುತ್ತಿದೆ. ಜನವರಿಯಿಂದ ಮಾರ್ಚ್‌ ತಿಂಗಳಾಂತ್ಯದವರೆಗೆ ಜಿಲ್ಲೆಯ 39 ಪ್ರವಾಸಿ ತಾಣಗಳಿಗೆ 1.23 ಕೋಟಿಗೂ ಅಧಿಕ ಮಂದಿ ಪ್ರವಾಸಿಗರು ಆಗಮಿಸಿದ್ದಾರೆ. ಈಗಾಗಲೇ ಮಕ್ಕಳಿಗೆ ರಜಾ ಆರಂಭಗೊಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ.
* ಮಾಣಿಕ್ಯ, ದ.ಕ. ಜಿಲ್ಲೆ
ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ

*ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.