Dakshina Kannada ಜಿಲ್ಲೆಯಾದ್ಯಂತ ಮೊಸರು ಕುಡಿಕೆ ಸಂಭ್ರಮ
Team Udayavani, Aug 27, 2024, 11:07 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ಮೊಸರು ಕುಡಿಕೆ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ಸಂಘ-ಸಂಸ್ಥೆಗಳು, ಯುವಕ ಮಂಡಲ ಸಮಿತಿ ಸೇರಿದಂತೆ ಹಲವು ಸಂಘಟನೆಗಳಿಂದ ಉತ್ಸವ ನಡೆಯಿತು.
ಜಿಲ್ಲೆಯ ಅತಿ ಪುರಾತನ ಮೊಸರು ಕುಡಿಕೆ ಉತ್ಸವ ಎಂಬ ಹಿರಿಮೆಯ ಅತ್ತಾವರ ಸಾರ್ವಜನಿಕ ಶ್ರೀಕೃಷ್ಣ ಜಯಂತ್ಯುತ್ಸವ ಸಮಿತಿಯ ವತಿಯಿಂದ 115ನೇ ವರ್ಷದ ಮೊಸರು ಕುಡಿಕೆ ಉತ್ಸವ ನೆರವೇರಿತು. ಕದ್ರಿಯಲ್ಲಿ ಶ್ರೀಕೃಷ್ಣ ಜನ್ಮ ಮಹೋತ್ಸವ ಸಮಿತಿ ವತಿಯಿಂದ 55ನೇ ವರ್ಷದ ಮೊಸರು ಕುಡಿಕೆ ಉತ್ಸವ ನಡೆಯಿತು.
ಕೊಟ್ಟಾರ ದ್ವಾರಕನಗರ, ಉರ್ವ, ಕಾವೂರು ಸಹಿತ ವಿವಿಧ ಕಡೆಗಳಲ್ಲಿ ಮೊಸರುಕುಡಿಕೆ, ಮೆರವಣಿಗೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರಗಿದವು.
ಕೆಲವು ಕಡೆಗಳಲ್ಲಿ ಸಾಂಸ್ಕೃತಿಕ ಸಂಭ್ರಮವಿತ್ತು. ವಿವಿಧ ರಸ್ತೆಗಳನ್ನು ಸಿಂಗರಿಸಲಾಗಿತ್ತು. ವಾಹನ ಸಂಚಾರ ಮಾರ್ಪಾಡು ಮಾಡಲಾಗಿತ್ತು. ವಿವಿಧ ಕಡೆಗಳಲ್ಲಿ ಜನಜಾತ್ರೆಯೇ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ
Father Muller: ಔಷಧ ವಿಜ್ಞಾನ ಮಹಾವಿದ್ಯಾಲಯ ಬಿ ಫಾರ್ಮ ಕೋರ್ಸ್ಗೆ ಅನುಮತಿ
Temple: ಕೊನೆಯ ಶ್ರಾವಣ ಶುಕ್ರವಾರ ಕಟೀಲಿಗೆ ಅಪಾರ ಭಕ್ತರ ಭೇಟಿ
Bantwal: ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ನಗ-ನಗದು ಕಳವು
Mangaluru: ಮೀಸಲಾತಿ ವ್ಯವಸ್ಥೆ ಕುರಿತು ಅಮೆರಿಕದಲ್ಲಿ ರಾಹುಲ್ ಹೇಳಿಕೆಗೆ ಬಿಜೆಪಿ ಖಂಡನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.