ಪರೀಕ್ಷೆ ವಿಳಂಬವಾದರೂ ಆನ್‌ಲೈನ್‌ ಬೋಧನೆ ಮುಂದುವರಿಕೆ : ಡಿಸಿಎಂ ಅಶ್ವತ್ಥನಾರಾಯಣ


Team Udayavani, May 21, 2021, 8:39 PM IST

ಪರೀಕ್ಷೆ ವಿಳಂಬವಾದರೂ ಆನ್‌ಲೈನ್‌ ಬೋಧನೆ ಮುಂದುವರಿಕೆ : ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಕಾಲೇಜುಗಳು ಪದವಿ ಕೋರ್ಸ್‌ಗಳ ಸಮ ಸ್ಥಾನಿಕ ಸೆಮಿಸ್ಟರ್‌ ಕೋರ್ಸ್‌ಗಳಿಗೆ ಆನ್‌ಲೈನ್‌ ತರಗತಿಗಳನ್ನು ಮುಂದುವರಿಸಬೇಕು. ಈ ಕೋರ್ಸ್‌ಗಳ ಭೌತಿಕ ತರಗತಿಗಳನ್ನು ಆರಂಭಿಸುವ ಕುರಿತು ಕೋವಿಡ್‌ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಶುಕ್ರವಾರ ತಿಳಿಸಿದ್ದಾರೆ.

ಬೆಸ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಪರೀಕ್ಷೆಗಳನ್ನು ಇನ್ನೂ ಪೂರೈಸದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಕೂಡ ಸಮ ಸ್ಥಾನಿಕ ಸೆಮಿಸ್ಟರ್‌ಗಳಿಗೆ (2ನೇ, 4ನೇ, 6ನೇ ಮತ್ತು 8ನೇ ಸೆಮಿಸ್ಟರ್‌ಗಳು) ಆನ್‌ಲೈನ್‌ ತರಗತಿಗಳನ್ನು ಶುರು ಮಾಡಬೇಕು. ಬಹುತೇಕ ಕೋರ್ಸ್‌ಗಳಿಗೆ ಕ್ಯಾರಿ ಓವರ್‌ ಪದ್ಧತಿ ಅನ್ವಯವಾಗುವುದರಿಂದ ಪದವಿ ಕೋರ್ಸ್‌ಗಳ ಬೆಸ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಕೋವಿಡ್‌ ಪರಿಸ್ಥಿತಿ ತಹಬಂದಿಗೆ ಬಂದಮೇಲೆ ನಡೆಸಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಕೆಲವು ಎಂಜಿನಿಯರಿಂಗ್‌ ಮತ್ತು ವೃತ್ತಿಪರ ಕೋರ್ಸ್‌ಗಳಲ್ಲಿ ಮಾತ್ರ ಮುಂದಿನ ಸೆಮಿಸ್ಟರ್‌ಗಳಿಗೆ ಹೋಗಲು ಕ್ಯಾರಿ ಓವರ್‌ ಪದ್ಧತಿ ಅನ್ವಯವಾಗುವುದಿಲ್ಲ. ಅವುಗಳ ಬಗ್ಗೆ ಕುಲಪತಿಗಳು ಹಾಗೂ ಪ್ರಾಂಶುಪಾಲರುಗಳು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಜೊತೆ ಸಮಾಲೋಚನೆ ನಡೆಸಿ ನಿರ್ಧಾರಕ್ಕೆ ಬರಬೇಕು ಎಂದು ವಿವರಿಸಿದ್ದಾರೆ.

ಇದನ್ನೂ ಓದಿ :ರಘುನಾಥ್‌ ಮೋಹಪಾತ್ರಾ ತೀರಿಕೊಂಡ ಕೆಲವೇ ದಿನಗಳಲ್ಲಿ ಇಬ್ಬರ ಮಕ್ಕಳ ಸಾವು

ಸ್ನಾತಕೋತ್ತರ ಕೋರ್ಸ್‌ಗಳ ಬಗ್ಗೆ ಪ್ರಸ್ತಾಪಿಸಿರುವ ಅವರು, “ಕೋವಿಡ್‌ ಕಾರಣದಿಂದಾಗಿ ಕೆಲವು ವಿಶ್ವವಿದ್ಯಾಲಯಗಳಲ್ಲಿ ಮೊದಲ ಸೆಮಿಸ್ಟರ್‌ಗೆ ಪ್ರವೇಶಾತಿ ಪ್ರಕ್ರಿಯೆ ವಿಳಂಬವಾಗಿದೆ. ಆದರೆ ಹೆಚ್ಚಿನ ವಿಶ್ವವಿದ್ಯಾಲಯಗಳಲ್ಲಿ ಈಗಾಗಲೇ ಮೂರನೇ ಸೆಮಿಸ್ಟರ್‌ನ ತರಗತಿಗಳು ಮುಗಿದಿದ್ದು, ಕೆಲವೆಡೆ ಪರೀಕ್ಷೆಗಳು ಕೂಡ ಆರಂಭವಾಗಿದ್ದವು. ಹೀಗಾಗಿ, ಸ್ನಾತಕೋತ್ತರ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ, ಮೂರನೇ ಸೆಮಿಸ್ಟರ್‌ನ ತರಗತಿಗಳು ಈಗಾಗಲೇ ಮುಗಿದಿದ್ದು, ಪರೀಕ್ಷೆಗಳನ್ನು ನಡೆಸುವುದು ಮಾತ್ರ ಬಾಕಿ ಉಳಿದಿದ್ದರೆ, ಅಲ್ಲಿ ಕೂಡ ಸಮ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಆನ್‌ಲೈನ್‌ ತರಗತಿಗಳನ್ನು ಆರಂಭಿಸಬೇಕು. ಬೆಸ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಬಾಕಿ ಉಳಿಯುವ ಪರೀಕ್ಷೆಗಳನ್ನು ಕೋವಿಡ್‌ ನಿಯಂತ್ರಣಕ್ಕೆ ಬಂದಮೇಲೆ ನಡೆಸಲಾಗುವುದು” ಎಂದಿದ್ದಾರೆ.

ಬೆಸ ಸ್ಥಾನಿಕ ಸೆಮಿಸ್ಟರ್‌ಗಳಿಗೆ (1ನೇ, 3ನೇ, 5ನೇ, 7ನೇ ಸೆಮಿಸ್ಟರ್ ಗಳು) ಇನ್ನೂ ತರಗತಿಗಳನ್ನು ಮುಗಿಸದ ವಿಶ್ವವಿದ್ಯಾಲಯಗಳು ಆನ್‌ಲೈನ್‌ ತರಗತಿಗಳನ್ನು ಮುಂದುವರಿಸಬೇಕು. ಒಂದೊಮ್ಮೆ ಈ ತರಗತಿಗಳು ಮುಗಿದ ಮೇಲೂ ಕೋವಿಡ್‌ನಿಂದಾಗಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗದಿದ್ದರೆ, ತಕ್ಷಣವೇ ಮುಂದಿನ ಸಮ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಆನ್‌ಲೈನ್‌ ತರಗತಿಗಳನ್ನು ಶುರುಮಾಡಬೇಕು. ಇದರಿಂದಾಗಿ ಬಾಕಿ ಉಳಿಯುವ ಬೆಸ ಸ್ಥಾನಿಕ ಸೆಮಿಸ್ಟರ್‌ಗಳ ಪರೀಕ್ಷೆಗಳನ್ನು ಕೋವಿಡ್‌ ನಿಯಂತ್ರಣಕ್ಕೆ ಬಂದಮೇಲೆ ನಡೆಸಲಾಗುತ್ತದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಪರಿಸ್ಥಿತಿಯ ಬೆಳವಣಿಗೆಗಳಿಗೆ ಅನುಗುಣವಾಗಿ ಕುಲಪತಿಗಳು ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನೊಂದಿಗೆ ಸಮಾಲೋಚನೆ ನಡೆಸಲಾಗುವುದು. ಅಲ್ಲಿ ಹೊರಹೊಮ್ಮುವ ನಿರ್ಧಾರಗಳನ್ನು ಆಧರಿಸಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪಾಲಿಸಬೇಕಾದ ಮಾರ್ಗದರ್ಶಿ ಸೂತ್ರಗಳನ್ನು ಹಾಗೂ ವೇಳಾಪಟ್ಟಿಗಳನ್ನು ರೂಪಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.