ಮಲ್ಪೆಯ ಪಡುಕರೆಯಲ್ಲಿ ಮೃತದೇಹ ಪತ್ತೆ

ಕಾಪು ಬೀಚ್‌ ಬಳಿ ಬೈಕ್‌ ಬಿಟ್ಟು ನಾಪತ್ತೆಯಾಗಿದ್ದ ಯುವಕ

Team Udayavani, Jun 7, 2024, 10:02 PM IST

ಮಲ್ಪೆಯ ಪಡುಕರೆಯಲ್ಲಿ ಮೃತದೇಹ ಪತ್ತೆ

ಕಾಪು: ಕಾಪು ಬೀಚ್‌ ಬಳಿ ಬೈಕ್‌ ಮತ್ತಿತರ ಸೊತ್ತುಗಳನ್ನು ಬಿಟ್ಟು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಕಾಪು ಪಡು ಗ್ರಾಮ ನಿವಾಸಿ ಕರಣ್‌ ಸಾಲ್ಯಾನ್‌ (20) ಮೃತದೇಹ ಪಡುಕರೆ ಸಮುದ್ರದಲ್ಲಿ ಪತ್ತೆಯಾಗಿದೆ.

ಕಾಪು ಪಡು ಗ್ರಾಮ ನಿವಾಸಿ ನಾರಾಯಣ್‌ ಸಾಲ್ಯಾನ್‌ ಅವರ ಪುತ್ರ ಕರಣ್‌ ಸಾಲ್ಯಾನ್‌ ಜೂ. 5ರಂದು ಅಪರಾಹ್ನ 3 ಗಂಟೆಗೆ ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋಗಿದ್ದು, ಬಳಿಕ ನಾಪತ್ತೆಯಾಗಿದ್ದ. ಮನೆಯಿಂದ ನಾಪತ್ತೆಯಾಗಿದ್ದ ಆತನ ಬೈಕ್‌, ಬೆಲೆಬಾಳುವ ಐಫೋನ್‌, ನಗದು ಸಹಿತವಾಗಿ ಪರ್ಸ್‌ ಕಾಪು ಬೀಚ್‌ ಬಳಿ ಪತ್ತೆಯಾಗಿತ್ತು. ಆ ಬಳಿಕ ಮನೆಯವರು ಮತ್ತು ಸ್ಥಳೀಯರು ಕಾಪು ಬೀಚ್‌ ಬಳಿ, ಸಮುದ್ರದಲ್ಲಿ ತೀವ್ರ ಹುಡುಕಾಟ ನಡೆಸಿದ್ದರು.

ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ಮತ್ತು ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ಮೊದಲಾದವರು ಬೀಚ್‌ಗೆ ತೆರಳಿ ಮನೆಯವರನ್ನು ಸಂತೈಸಿದ್ದರು. ಮಗ ನಾಪತ್ತೆಯಾಗಿರುವ ಬಗ್ಗೆ ನಾರಾಯಣ್‌ ಸಾಲ್ಯಾನ್‌ ಯಾನೆ ತುಳಸಿ ಅವರು ಕಾಪು ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಕೂಡಾ ತನಿಖೆ ಮುಂದುವರಿಸಿದ್ದರು.

ಈ ಮಧ್ಯೆ ಶುಕ್ರವಾರ ಮಧ್ಯಾಹ್ನ ಪಡುಕೆರೆ ಸಮುದ್ರದಲ್ಲಿ ಮೃತದೇಹವೊಂದು ತೇಲಿಕೊಂಡು ಬರುತ್ತಿರುವುದನ್ನು ಗಮನಿಸಿದ್ದ ಸ್ಥಳೀಯರು ಮೃತದೇಹವನ್ನು ಬದಿಗೆ ತಂದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ನಾಪತ್ತೆಯಾಗಿದ್ದ ಕರಣ್‌ನ ಮನೆಯವರಿಗೆ ಮಾಹಿತಿ ತಲುಪಿಸಿದ್ದು, ಅವರು ಸ್ಥಳಕ್ಕೆ ಹೋಗಿ ನೋಡಿ, ಮೃತದೇಹದ ಗುರುತು ಪತ್ತೆ ಹಚ್ಚಿದರು. ಬಳಿಕ ಕಾಪು ಸೂರಿ ಶೆಟ್ಟಿ ನೇತೃತ್ವದಲ್ಲಿ ಮೃತದೇಹವನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ತಿಂಗಳಾಂತ್ಯಕ್ಕೆ ವಿದೇಶಕ್ಕೆ ತೆರಳಬೇಕಿತ್ತು
ಮೃತ ಕರಣ್‌ ಸಾಲ್ಯಾನ್‌ ತಿಂಗಳಾಂತ್ಯಕ್ಕೆ ಯುರೋಪ್‌ ರಾಷ್ಟ್ರಕ್ಕೆ ತೆರಳುವವನಿದ್ದ. ಮನೆಗೆ ಆಶ್ರಯನಾಗಬೇಕಿದ್ದ ಮಗ ವಿದೇಶಕ್ಕೆ ಹೋಗುವ ಕೆಲವೇ ದಿನಗಳ ಮೊದಲು ದಿಢೀರ್‌ ನಾಪತ್ತೆಯಾಗಿ, ಸಮುದ್ರದಲ್ಲಿ ಶವವಾಗಿ ಪತ್ತೆಯಾಗಿದ್ದು ತಂದೆ ಮತ್ತು ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

1-crick

India vs England ಸೆಮಿ ಪಂದ್ಯ; ನಿರೀಕ್ಷೆಯಂತೆ ಮಳೆಯಿಂದ ಟಾಸ್ ವಿಳಂಬ

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

1-saddas

Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

1-asdsad

Agumbe ಘಾಟಿ; ಭಾರೀ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗ

rain 3

Red Alert; ನಾಳೆ ದಕ್ಷಿಣ ಕನ್ನಡದ ಶಾಲೆಗಳಿಗೆ, ಪಿಯು ಕಾಲೇಜುಗಳಿಗೆ ರಜೆ

suicide

Belthangady; ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

1-wqeqwewq

CM ಹುದ್ದೆ ಬಿಟ್ಟು ಕೊಡಲಿ; ಸ್ವಾಮೀಜಿ ಹೇಳಿಕೆ ಬಳಿಕ ಕಾಂಗ್ರೆಸ್ ನಲ್ಲಿ ಅಲ್ಲೋಲ ಕಲ್ಲೋಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

Udupi: ವಿಮಾ ಕಂಪೆನಿ ವಿರುದ್ಧ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ತೀರ್ಪು 

Nejar Case: Accused Praveen Chowgule’s bail application dismissed by High Court

Nejar Case: ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್

ಖರ್ದುಂಗ್ಲಾದಲ್ಲಿ ಕನ್ನಡ ಬಾವುಟ ಹಾರಿಸಿದ ಶಿರ್ವದ ಅಪ್ಪ -ಮಗ

Khardung La; 17,982 ಅಡಿ ಎತ್ತರದಲ್ಲಿ ಕನ್ನಡ ಬಾವುಟ ಹಾರಿಸಿದ ಶಿರ್ವದ ಅಪ್ಪ -ಮಗ

Udupi; ಬಸ್ ಗೆ ಡಿಕ್ಕಿ ಹೊಡೆದ ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು

Udupi; ಬಸ್ ಗೆ ಡಿಕ್ಕಿ ಹೊಡೆದ ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

DK Shivakumar: ಡಿಸಿಎಂ ಹುದ್ದೆ ಬೇಕಿದ್ದವರು ಹೈಕಮಾಂಡ್‌ ಬಳಿ ಹೋಗಿ; ಡಿಕೆಶಿ

DK Shivakumar: ಡಿಸಿಎಂ ಹುದ್ದೆ ಬೇಕಿದ್ದವರು ಹೈಕಮಾಂಡ್‌ ಬಳಿ ಹೋಗಿ; ಡಿಕೆಶಿ

7

Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ

1-crick

India vs England ಸೆಮಿ ಪಂದ್ಯ; ನಿರೀಕ್ಷೆಯಂತೆ ಮಳೆಯಿಂದ ಟಾಸ್ ವಿಳಂಬ

1-ree

Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.