Raksha Bandhan:ರಾಖಿ ಕಟ್ಟುವ ಮಗಳ ಆಸೆ ಪೂರೈಸಲು 1 ತಿಂಗಳ ಮಗುವನ್ನು ಅಪಹರಿಸಿದ ದಂಪತಿ!

ದಂಪತಿಗೆ ಮನೆ ಇಲ್ಲದಿದ್ದರಿಂದ ಫುಟ್‌ ಪಾತ್‌ ನಲ್ಲೇ ಆಶ್ರಯ ಪಡೆದಿರುವುದಾಗಿ ವರದಿ ವಿವರಿಸಿದೆ.

Team Udayavani, Aug 26, 2023, 3:56 PM IST

Raksha Bandhan:ರಾಖಿ ಕಟ್ಟುವ ಮಗಳ ಆಸೆ ಪೂರೈಸಲು 1 ತಿಂಗಳ ಮಗುವನ್ನು ಅಪಹರಿಸಿದ ದಂಪತಿ!

ನವದೆಹಲಿ: ರಕ್ಷಾ ಬಂಧನದ ಹಬ್ಬದಂದು (ಆಗಸ್ಟ್‌ 30) ರಾಖಿ ಕಟ್ಟಲು ತನಗೊಬ್ಬ ಸಹೋದರ ಬೇಕೆಂದು ಮಗಳು ಆಸೆ ಪಟ್ಟಿದ್ದಕ್ಕಾಗಿ ಆಕೆಯ ಇಷ್ಟವನ್ನು ನೆರವೇರಿಸಲು ಒಂದು ತಿಂಗಳ ಗಂಡು ಮಗುವನ್ನು ಅಪಹರಿಸಿರುವ ಆರೋಪದಲ್ಲಿ ದಂಪತಿಯನ್ನು ಬಂಧಿಸಿರುವ ಘಟನೆ ನವದೆಹಲಿಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:Spandana: ಎದೆಗೊತ್ತಿ ಪ್ರೀತಿಸುವೆ.. ವಿವಾಹ ವಾರ್ಷಿಕ ದಿನ ಪತ್ನಿ ನೆನೆದು ರಾಘು ಭಾವುಕ

ಛಟ್ಟಾ ರೈಲ್ವೆ ಚೌಕ್‌ ನ ಬೀದಿಬದಿಯಲ್ಲಿ ಮಲಗಿದ್ದ ದಂಪತಿಯ ಸಮೀಪದಲ್ಲಿದ್ದ ಒಂದು ತಿಂಗಳ ಗಂಡು ಮಗುವನ್ನು ಸಂಜಯ್‌ ಗುಪ್ತಾ (41ವರ್ಷ) ಮತ್ತು ಅನಿತಾ ಗುಪ್ತಾ (36ವರ್ಷ) ದಂಪತಿ ಅಪಹರಿಸಿದ್ದರು.

ಫುಟ್‌ ಪಾತ್‌ ನಲ್ಲಿ ನಿದ್ರಿಸುತ್ತಿದ್ದ ವೇಳೆ ಬೆಳಗ್ಗಿನ ಜಾವ 3ಗಂಟೆ ಹೊತ್ತಿಗೆ ಎಚ್ಚರವಾದಾಗ ತಮ್ಮ ಮಗು ಕಾಣೆಯಾಗಿರುವುದು ತಿಳಿದುಬಂದಿದ್ದು, ಯಾರೋ ಮಗುವನ್ನು ಅಪಹರಿಸಿರಬೇಕೆಂದು ದಂಪತಿ ಪೊಲೀಸರಿಗೆ ದೂರು ಕೊಟ್ಟಿರುವುದಾಗಿ ವರದಿ ತಿಳಿಸಿದೆ.

ದೂರಿನ ಆಧಾರದ ಮೇಲೆ ಪೊಲೀಸರು ಸಮೀಪದ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿದಾಗ, ಇಬ್ಬರು ವ್ಯಕ್ತಿಗಳು ಬೈಕ್‌ ನಲ್ಲಿ ಅಡ್ಡಾಡುತ್ತಿರುವುದು ಪತ್ತೆಯಾಗಿತ್ತು. ಕೊನೆಗೆ ಎಲ್ಲಾ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಶಂಕಿತ ಬೈಕ್‌ ಸಂಜಯ್‌ ಹೆಸರಿನಲ್ಲಿರುವುದು ತನಿಖೆ ವೇಳೆ ಬಯಲಾಗಿತ್ತು.

ಇದೊಂದು ಅಪರಾಧ ಕೃತ್ಯಗಳ ಪ್ರದೇಶ ಎಂದೇ ಪರಿಗಣಿಲ್ಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಸುಮಾರು 15 ಮಂದಿ ಶಸ್ತ್ರ್‌ ಸಜ್ಜಿತ ಪೊಲೀಸರು ಪ್ರದೇಶವನ್ನು ಸುತ್ತುವರಿದಿದ್ದರು. ರಘುಬೀರ್‌ ನಗರದ ಸಿ ಬ್ಲಾಕ್‌ ನ ಟ್ಯಾಗೋರ್‌ ಗಾರ್ಡರ್ನ್ಸ್‌ ನಲ್ಲಿ ಆರೋಪಿತ ದಂಪತಿಯನ್ನು ಸೆರೆಹಿಡಿದಿದ್ದು, ಈ ಸಂದರ್ಭದಲ್ಲಿ ಮಗು ಕೂಡಾ ಪತ್ತೆಯಾಗಿತ್ತು ಎಂದು ಡೆಪ್ಯುಟಿ ಪೊಲೀಸ್‌ ಕಮಿಷನರ್‌ ಸಾಗರ್‌ ಸಿಂಗ್‌ ಕಾಲ್ಸಿ ತಿಳಿಸಿದ್ದಾರೆ.

ಬಂಧಿತ ದಂಪತಿಯನ್ನು ವಿಚಾರಣೆಗೊಳಪಡಿಸಿದಾಗ, ಕಳೆದ ವರ್ಷ ಆಗಸ್ಟ್‌ 17ರಂದು ತಮ್ಮ 17 ವರ್ಷದ ಪುತ್ರ ಟೇರೇಸ್‌ ನಿಂದ ಬಿದ್ದು ಸಾವನ್ನಪ್ಪಿದ್ದ. ಈ ವಿಷಯ ನಮ್ಮ ಮಗಳಿಗೆ ತಿಳಿದಿಲ್ಲ. ಏತನ್ಮಧ್ಯೆ ರಕ್ಷಾ ಬಂಧನ ದಿನಾಚರಣೆಯಂದು ತನಗೆ ರಾಖಿ ಕಟ್ಟಲು ಸಹೋದರ ಬೇಕೆಂದು ಮಗಳು ಇಚ್ಛೆಯನ್ನು ವ್ಯಕ್ತಪಡಿಸಿರುವುದಾಗಿ ಸಂಜಯ್‌ ಮತ್ತು ಅನಿತಾ ತಿಳಿಸಿದ್ದರು.

ಮಗಳ ಇಚ್ಛೆಯನ್ನು ಈಡೇರಿಸುವ ನಿಟ್ಟಿನಲ್ಲಿ ದಂಪತಿ ಮಗುವನ್ನು ಅಪಹರಿಸಲು ನಿರ್ಧರಿಸಿದ್ದರು. ಅದರಂತೆ ಛಟ್ಟಾ ರೈಲ್‌ ಚೌಕ್‌ ಬಳಿ ಮಲಗಿದ್ದ ದಂಪತಿಯ ಪಕ್ಕದಲ್ಲಿದ್ದ ಒಂದು ತಿಂಗಳ ಗಂಡು ಮಗುವನ್ನು ಅಪಹರಿಸಿರುವುದಾಗಿ ತನಿಖೆ ವೇಳೆ ತಿಳಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂಜಯ್‌ ಟ್ಯಾಟೋ ಆರ್ಟಿಸ್ಟ್‌ ಆಗಿದ್ದು, ಪತ್ನಿ ಅನಿತಾ ಮೆಹಂದಿ ಆರ್ಟಿಸ್ಟ್‌ ಆಗಿರುವುದಾಗಿ ವರದಿ ತಿಳಿಸಿದೆ. ಮಗುವಿನ ತಾಯಿಗೆ ಎರಡೂ ಕೈ ಮತ್ತು ಕಾಲುಗಳಿಲ್ಲ. ತಂದೆ ಚಿಂದಿ ಆಯುವ ಕೆಲಸ ಮಾಡುತ್ತಿದ್ದು, ದಂಪತಿಗೆ ಮನೆ ಇಲ್ಲದಿದ್ದರಿಂದ ಫುಟ್‌ ಪಾತ್‌ ನಲ್ಲೇ ಆಶ್ರಯ ಪಡೆದಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

China: ಗರ್ಭಿಣಿ ಮೇಲೆ ನೆಗೆದು ಹಾರಿದ ಶ್ವಾನ-ಗರ್ಭಪಾತ: ಮಾಲೀಕನಿಗೆ 10 ಲಕ್ಷ ರೂ. ದಂಡ

China: ಗರ್ಭಿಣಿ ಮೇಲೆ ನೆಗೆದು ಹಾರಿದ ಶ್ವಾನ-ಗರ್ಭಪಾತ: ಮಾಲೀಕನಿಗೆ 10 ಲಕ್ಷ ರೂ. ದಂಡ

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

IAS officer stuns for Sarpanch woman’s English speech in barmar

Jaipur: ಸರಪಂಚ್‌ ಮಹಿಳೆಯ ಇಂಗ್ಲೀಷ್‌ ಭಾಷಣಕ್ಕೆ ಐಐಎಸ್‌ ಅಧಿಕಾರಿ ಫಿದಾ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

4-mc-sudhakar

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.