ಹೊಸ ವೈರಾಣು ಪತ್ತೆಗೆ ಜೀನೋಮ್ ಸೀಕ್ವೆನ್ಸ್ : ಗಡಿಭಾಗಗಳಲ್ಲಿ ಹೆಚ್ಚಿನ ಪರೀಕ್ಷೆ : ಸುಧಾಕರ್


Team Udayavani, Jun 27, 2021, 8:28 PM IST

ಹೊಸ ವೈರಾಣು ಪತ್ತೆಗೆ ಜೀನೋಮ್ ಸೀಕ್ವೆನ್ಸ್ : ಗಡಿಭಾಗಗಳಲ್ಲಿ ಹೆಚ್ಚಿನ ಪರೀಕ್ಷೆ : ಸುಧಾಕರ್

ಬೆಂಗಳೂರು/ಚಿಕ್ಕಬಳ್ಳಾಪುರ : ಕೋವಿಡ್ ಹೊಸ ವೈರಾಣು ನಿಯಂತ್ರಣಕ್ಕೆ ಜೀನೋಮ್ ಸೀಕ್ವೆನ್ಸ್ ಮಾಡುತ್ತಿದ್ದು, 600 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡೆಲ್ಟಾ ಪ್ಲಸ್ ವೈರಾಣು ಸೋಂಕಿನ ಇಬ್ಬರು ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನೂ 600 ಮಾದರಿಗಳನ್ನು ಜಿನೋಮ್ ಸೀಕ್ವೆನ್ಸ್ ಗೆ ಕಳುಹಿಸಲಾಗಿದೆ. ಈ ವರದಿ ಬರಲಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ರಾಜ್ಯಗಳಲ್ಲಿ ಇರುವಂತಹ ಕೊರೊನಾ ಆತಂಕ ನಮ್ಮಲ್ಲಿ ಇನ್ನೂ ಬಂದಿಲ್ಲ. ಆದರೆ ಮಹಾರಾಷ್ಟ್ರ ಮತ್ತು ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ. ರಾಜ್ಯಕ್ಕೆ ಪ್ರವೇಶಿಸುವವರಿಗೆ ರಾಂಡಮ್ ಆಗಿ ಪರೀಕ್ಷೆ ಮಾಡಲು ಸೂಚಿಸಲಾಗಿದೆ ಎಂದರು.

ಬೆಂಗಳೂರಿನಲ್ಲಿ 50 ಲಕ್ಷಕ್ಕೂ ಅಧಿಕ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ದೇಶದ ಯಾವುದೇ ನಗರದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಿಲ್ಲ. ಹೀಗಾಗಿ ಇದೊಂದು ದಾಖಲೆಯಾಗಿದೆ. ರಾಜ್ಯದಲ್ಲಿ ಮೊದಲನೇ ಡೋಸ್ ಪಡೆದವರ ಪ್ರಮಾಣ ಶೇ.40 ರಷ್ಟಿದೆ (1.85 ಕೋಟಿ). 45 ಲಕ್ಷಕ್ಕೂ ಹೆಚ್ಚು ಜನರು ಎರಡೂ ಡೋಸ್ ಪಡೆದಿದ್ದಾರೆ. ಲಸಿಕೆ ನೀಡಲು ಆದ್ಯತೆಯಲ್ಲಿ ಕೆಲ ಗುಂಪುಗಳನ್ನು ರಚಿಸಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯಡಿ ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಯ ಕುಟುಂಬದವರು, ಪೊಲೀಸರ ಕುಟುಂಬದವರು, ಮಾಧ್ಯಮದವರು, ಹೀಗೆ ಜನಸಂಪರ್ಕ ಹೆಚ್ಚು ಇರುವವರನ್ನು ರಕ್ಷಣೆ ಮಾಡಲು ಆದ್ಯತೆ ನೀಡಲಾಗಿದೆ. 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪಾಲಕರಿಗೆ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುವುದು ಎಂದರು.

ಇದನ್ನೂ ಓದಿ :ಒಲಿಂಪಿಕ್ಸ್‌: ಭಾರತ ಸೇರಿ ಇತರ 5 ದೇಶಗಳ ಕ್ರೀಡಾಳುಗಳಿಗೆ ಹೆಚ್ಚಿನ ಕೋವಿಡ್‌ ಟೆಸ್ಟ್‌

ಬೇರೆ ರಾಜ್ಯಗಳಿಂದ ಬರುವವರನ್ನು ನೂರಕ್ಕೆ ನೂರು ವೈದ್ಯಕೀಯ ತಪಾಸಣೆ ಮಾಡಲು ಸಾಧ್ಯವಾಗುತ್ತಿಲ್ಲ. ಆದರೂ ಸಾಧ್ಯವಾದಷ್ಟು ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಕೇರಳ ಒಂದರಿಂದಲೇ ಕೆಲವು ಲಕ್ಷ ಜನರು ರಾಜ್ಯದೊಳಗೆ ಬರುತ್ತಿದ್ದಾರೆ. ಆದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಸಾಧ್ಯವಾದಷ್ಟು ಜನರಿಗೆ ಪರೀಕ್ಷೆ ಮಾಡಲಾಗುತ್ತಿದೆ. ಜನರು ಲಸಿಕೆ ಪಡೆಯಲೇಬೇಕು. ಪಡೆದ ನಂತರವೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಇದರಿಂದಲೇ ಕೋವಿಡ್ ನಿಂದ ದೂರವಿರಲು ಸಾಧ್ಯ ಎಂದರು.

ಮಕ್ಕಳ ದತ್ತು

ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಚಿಕ್ಕಬಳ್ಳಾಪುರ ಜಿಲ್ಲೆಯ 9 ಮಕ್ಕಳನ್ನು ಸಚಿವರು ದತ್ತು ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಜಿಲ್ಲಾಡಳಿತಕ್ಕೆ ಈ ಕುರಿತು ಮಾಹಿತಿ ನೀಡಲಾಗಿದೆ. ಈ ಮಕ್ಕಳ ಶೈಕ್ಷಣಿಕ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಪ್ರತಿ ಮಕ್ಕಳಿಗೆ ತಲಾ 1 ಲಕ್ಷ ರೂ. ನೀಡಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಈ ರೀತಿ ದತ್ತು ಪಡೆಯುವ ಅಗತ್ಯವಿದೆ. ಮುಖ್ಯಮಂತ್ರಿಗಳು ಇದಕ್ಕಾಗಿ ಯೋಜನೆಯನ್ನು ಈಗಾಗಲೇ ಜಾರಿ ಮಾಡಿದ್ದಾರೆ ಎಂದರು.

ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವಿಗೀಡಾದ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಲಾಗುವುದು ಎಂದರು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.