![1-india](https://www.udayavani.com/wp-content/uploads/2024/06/1-india-415x277.jpg)
Denmark’s ಪ್ರಧಾನಮಂತ್ರಿ ಮ್ಯಾಟೆ ಫ್ರೆಡೆರಿಕ್ಸನ್ ಮೇಲೆ ಹಲ್ಲೆ, ಆರೋಪಿ ಬಂಧನ
Team Udayavani, Jun 8, 2024, 11:05 AM IST
![Denmark’s ಪ್ರಧಾನಮಂತ್ರಿ ಮ್ಯಾಟೆ ಫ್ರೆಡೆರಿಕ್ಸನ್ ಮೇಲೆ ಹಲ್ಲೆ, ಆರೋಪಿ ಬಂಧನ](https://www.udayavani.com/wp-content/uploads/2024/06/Attack-620x349.jpg)
ಕೋಪನ್ ಹೇಗ್: ಡೆನ್ಮಾರ್ಕ್ ಪ್ರಧಾನಿ ಮ್ಯಾಟೆ ಫ್ರೆಡೆರಿಕ್ಸನ್ ಅವರ ಮೇಲೆ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ(ಜೂನ್ 07) ನಡೆದಿದ್ದು, ಮ್ಯಾಟೆ ಅವರು ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ ಎಂದು ರಾಯಟರ್ಸ್ ವರದಿ ತಿಳಿಸಿದೆ.
ಇದನ್ನೂ ಓದಿ:Elephant: ಪಥ ಬದಲಿಸಿದ ಕಾಡಾನೆ… ಕುಚ್ಚೆಜಾಲಿನಲ್ಲಿ ಕೃಷಿ ಹಾನಿಗೈದು ಸವಣೂರಿಗೆ ಎಂಟ್ರಿ!
ಸೆಂಟ್ರಲ್ ಕೋಪನ್ ಹೇಗ್ ನಲ್ಲಿ ಪ್ರಧಾನಿ ಮ್ಯಾಟೆ ಫ್ರೆಡೆರಿಕ್ಸನ್ ಅವರ ಮೇಲೆ ಹಲ್ಲೆ ನಡೆಸಿರುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಘಟನೆಯಿಂದ ಪ್ರಧಾನಿ ಮ್ಯಾಟೆ ಆಘಾತಕ್ಕೊಳಗಾಗಿರುವುದಾಗಿ ಪ್ರಧಾನಿ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.
ದಾಳಿ ನಡೆಸಿದ ಆರೋಪಿಯನ್ನು ಬಂಧಿಸಿದ್ದು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದು, ಬಂಧಿತನ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿರುವುದಾಗಿ ವರದಿ ವಿವರಿಸಿದೆ.
ಪ್ರಧಾನಿಯವರ ಮೇಲೆ ಹಲ್ಲೆ ನಡೆಯುತ್ತಿದ್ದಂತೆಯೇ ಭದ್ರತಾ ಸಿಬಂದಿಗಳು ಅವರನ್ನು ಎಸ್ಕಾರ್ಟ್ ನಲ್ಲಿ ಕರೆದೊಯ್ದಿದ್ದರು. ಯುರೋಪಿಯನ್ ಚುನಾವಣೆಗೆ ಎರಡು ದಿನ ಇರುವಾಗಲೇ ಈ ಘಟನೆ ನಡೆದಿದೆ.
ಮೂರು ವಾರಗಳ ಹಿಂದಷ್ಟೇ ಸ್ಲೋವಕಿಯಾ ಪ್ರಧಾನಮಂತ್ರಿ ರೋಬರ್ಟ್ ಫಿಕೋ ಅವರ ಮೇಲೆ ಮಾರಣಾಂತಿಕ ದಾಳಿ ನಡೆದಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
![1-india](https://www.udayavani.com/wp-content/uploads/2024/06/1-india-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![9](https://www.udayavani.com/wp-content/uploads/2024/06/9-18-150x90.jpg)
Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ
![1-india](https://www.udayavani.com/wp-content/uploads/2024/06/1-india-150x100.jpg)
Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ
![priyanka gandhi (2)](https://www.udayavani.com/wp-content/uploads/2024/06/priyanka-gandhi-2-150x83.jpg)
Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ
![1-wtr](https://www.udayavani.com/wp-content/uploads/2024/06/1-wtr-150x88.jpg)
Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!
![1-wwewwewewe](https://www.udayavani.com/wp-content/uploads/2024/06/1-wwewwewewe-150x94.jpg)
BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.