Department of School Education: ಶಾಲೆಗಳ ಉಚಿತ ವಿದ್ಯುತ್: ಅನುಷ್ಠಾನಕ್ಕೆ ಸೂಚನೆ
ಆನ್ಲೈನ್ನಲ್ಲಿ ವಿದ್ಯುತ್ ಸಂಪರ್ಕ ಮಾಹಿತಿ ನೀಡಲು ಆದೇಶ
Team Udayavani, Oct 3, 2024, 2:09 AM IST
ಬೆಂಗಳೂರು: ವಿದ್ಯುನ್ಮಾನ ನಾಗರಿಕ ಸೇವಾ ವಿತರಣ ನಿರ್ದೇಶನಾಲಯ (ಇಡಿಸಿಎಸ್) ಬಿಡುಗಡೆ ಮಾಡಿರುವ ತಂತ್ರಾಂಶವನ್ನು ಬಳಸಿಕೊಂಡು ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನೀಡುತ್ತಿರುವ ಉಚಿತ ವಿದ್ಯುತ್ ಸೌಲಭ್ಯವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.
ಈಗಾಗಲೇ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ. ಯೋಜನೆಯನ್ನು ನಿಖರವಾಗಿ ಅನುಷ್ಠಾನ ಮಾಡುವುದಕ್ಕಾಗಿ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ತಂತ್ರಾಂಶದ ಮೂಲಕ ಶಾಲಾ ಮುಖ್ಯ ಶಿಕ್ಷಕರು ವಿದ್ಯುತ್ ಸಂಪರ್ಕದ ವಿವರಗಳನ್ನು ಆನ್ಲೈನ್ನಲ್ಲಿ ದಾಖಲಿಸಬಹುದು ಎಂದು ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಜಾಲತಾಣದಲ್ಲಿ ಉಚಿತ ವಿದ್ಯುತ್ ಸಂಪರ್ಕಕ್ಕೆ ಮಾಹಿತಿ ನಮೂದಿಸಲು ಅರ್ಜಿ ಸಲ್ಲಿಸಬಹುದು. ಲಿಂಕ್ ಕ್ಲಿಕ್ ಮಾಡಿದರೆ ಸೇವಾ ಸಿಂಧು ಪೋರ್ಟಲ್ ವೆಬ್ಪೇಜ್ ತೆರೆದುಕೊಳ್ಳಲಿದೆ. ಅಲ್ಲಿ ಶಾಲೆಯ ಯು-ಡೈಸ್ ಸಂಖ್ಯೆಯನ್ನು ನಮೂದಿಸಿದರೆ, ಶಾಲೆಯ ಹೆಸರು, ವಿಳಾಸ, ಮುಖ್ಯಶಿಕ್ಷಕರ ಮೊಬೈಲ್ ನಂಬರ್ ಹಾಗೂ ಶಾಲೆಗೆ ಸಂಬಂಧಿಸಿದ ವಿವರಗಳು ಪ್ರದರ್ಶನವಾಗಲಿವೆ. ಈ ಮಾಹಿತಿಗಳನ್ನು ಖಚಿತ ಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ.
ಶಾಲಾ ಮುಖ್ಯ ಶಿಕ್ಷಕರ ಮೊಬೈಲ್ ನಂಬರ್ಗೆ ಬರುವ ಒಟಿಪಿಯನ್ನು ನಮೂದಿಸಿ ದಾಖಲೆಗಳನ್ನು ಪರಿಶೀಲಿಸಿ ವ್ಯಾಲಿಡೇಟ್ ಬಟನ್ ಕ್ಲಿಕ್ ಮಾಡಬೇಕು. ವಿದ್ಯುತ್ ಬಿಲ್ ಅಕೌಂಟ್ ನಂಬರ್ ಅನ್ನು ನಿಖರವಾಗಿ ನಮೂದಿಸಬೇಕು. ಬಳಿಕ ಸಬ್ಮಿಟ್ ಬಟನ್ ಒತ್ತಬೇಕು. ಎಲ್ಲ ಶಿಕ್ಷಕರು ಅ.10ರೊಳಗೆ ನೋಂದಣಿ ಕಾರ್ಯವನ್ನು ಪೂರ್ಣಗೊಳಿಸುವಂತೆ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gandhi Jayanthi: ಬಿಜೆಪಿ ಷಡ್ಯಂತ್ರ ಸೋಲಿಸಲು ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿ: ಸಿಎಂ
Rani Chennamma: ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು
Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…
Gandhi Jayanthi:ರಾಷ್ಟ್ರಧ್ವಜ ಹಿಡಿದೇ ಸಿಎಂ ಸಿದ್ದರಾಮಯ್ಯ ಶೂ ಲೇಸ್ ಬಿಚ್ಚಿದ ಕಾರ್ಯಕರ್ತ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gandhi Jayanthi: ಬಿಜೆಪಿ ಷಡ್ಯಂತ್ರ ಸೋಲಿಸಲು ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿ: ಸಿಎಂ
Department of School Education: ಶಾಲೆಗಳ ಉಚಿತ ವಿದ್ಯುತ್: ಅನುಷ್ಠಾನಕ್ಕೆ ಸೂಚನೆ
Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ
Rani Chennamma: ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
Karkala: ಕಾರು ಹರಿದು ಪಾದಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.