Desi Swara: ಹೊನ್ನುಡಿ- ಕೊಟ್ಟಿದ್ದೇ ಸಿಗುವುದು !

"ನೀನಲ್ಲದೆ ನನ್ನನ್ನು ಈ ವಿಪತ್ತಿನಿಂದ ಪಾರು ಮಾಡುವವರು ಯಾರು?'

Team Udayavani, Jul 27, 2024, 1:05 PM IST

“ನೀನಲ್ಲದೆ ನನ್ನನ್ನು ಈ ವಿಪತ್ತಿನಿಂದ ಪಾರು ಮಾಡುವವರು ಯಾರು?’

ದುರ್ಯೋಧನನ ಸಭೆ. ದ್ರೌಪದಿಯ ಕೂದಲನ್ನು ಎಳೆದುಕೊಂಡು ಬಂದ ದುಶ್ಯಾಸನ ಅವಳ ಸೀರೆಯನ್ನು ಎಳೆಯುವ ಪ್ರಯತ್ನದಲ್ಲಿದ್ದ. ಅವಳು ಮೊಟ್ಟಮೊದಲು ಸಹಾಯಕ್ಕಾಗಿ ನೋಡಿದ್ದು ತನ್ನ ಪತಿಗಳಾದ ಪಂಚಪಾಂಡವರ ಕಡೆ. ಆದರೆ ಆಗಲೇ ಗುಲಾಮರಾಗಿಬಿಟ್ಟಿದ್ದ ಅವರಿಂದ ತಲೆ ತಗ್ಗಿಸಿ ನಿಲ್ಲುವುದರ ಹೊರತು ಬೇರೇನು ಮಾಡಲಾಗಲಿಲ್ಲ. ಅಂತೆಯೇ ಸಭೆಯಲ್ಲಿದ್ದ ಗುರುಹಿರಿಯರು ಯಾರೂ ಮಿಸುಕಾಡಲಿಲ್ಲ. ಕೊನೆಯದಾಗಿ ಶ್ರೀಕೃಷ್ಣನನ್ನು ಸ್ತುತಿಸಿ, “ನೀನಲ್ಲದೆ ನನ್ನನ್ನು ಈ ವಿಪತ್ತಿನಿಂದ ಪಾರು ಮಾಡುವವರು ಯಾರು?’ ಎಂದು ಮನಪೂರ್ವಕವಾಗಿ ಬೇಡಿಕೊಳ್ಳುತ್ತಾಳೆ.

ಶ್ರೀಕೃಷ್ಣನ ದಯೆ ಇಲ್ಲವಾಗಿ, ದೌಪದೀ ತನ್ನ ಎರಡೂ ಕೈಗಳನ್ನು ಮೇಲೆತ್ತಿ ಬೇಡಿಕೊಳ್ಳುತ್ತಾಳೆ. ಆಗ ಶ್ರೀಕೃಷ್ಣನೇ ಅವಳಿಗೆ ಅನುಗ್ರಹ ಮಾಡುತ್ತಾನೆ. ದ್ರೌಪದೀ ಸೀರೆ ಅಕ್ಷಯವಾಗುತ್ತದೆ. “ಶ್ರೀಕೃಷ್ಣ ಸ್ವಾಮಿಯೇ, ನೀನೇ ನನ್ನ ಮಾನವನ್ನು ರಕ್ಷಿಸಿದೆ. ನಿನಗೆ ನಾನು ಹೇಗೆ ಕೃತಜ್ಞತೆ ಸಲ್ಲಿಸಲಿ?’ ಎಂದು ಬೇಡಿಕೊಳ್ಳುತ್ತಾಳೆ.

ಆಗ ಅದೃಶ್ಯದಲ್ಲಿ ಶ್ರೀಕೃಷ್ಣ ಅವಳ ಕಿವಿಯ ಬಳಿ ಬಂದು ಹೇಳುತ್ತಾನೆ, “ದೇವರೆಂದು ನೀನು ನಂಬಿದ ನನ್ನ ದಯೆಯೇನೋ ನಿಜವೇ. ಆದರೆ ಅದಷ್ಟೇ ಅಲ್ಲ. ನೀನು ಮಾಡಿದ ಪುಣ್ಯ ಕಾರ್ಯದ ಫಲವೂ ಇದಕ್ಕೆ ಕಾರಣ. ನೀನು ಈ ಹಿಂದೆ ಯಾರಿಗಾದರೂ ಬಟ್ಟೆಯನ್ನು ದಾನ ಮಾಡಿದ್ದೀಯಾ, ಹೇಳು?’

ಮಹಾರಾಣಿಯಾದ ದ್ರೌಪದೀ ಎಷ್ಟೇಷ್ಟೋ ಜನರಿಗೆ ವಸ್ತ್ರದಾನ ಮಾಡಿರಬಹುದು. ಅದನ್ನು ಅವಳು ಲೆಕ್ಕವಿಟ್ಟಿದ್ದಾಳೆಯೆ? ಶ್ರೀಕೃಷ್ಣ ಹೇಳುತ್ತಾನೆ, “ಕೇವಲ ದಾನವಾದರೆ ಸಾಲದು. ಸತ್ಪಾತ್ರ ದಾನವಾಗಬೇಕು. ತೀರಾ ಅಗತ್ಯವಿರುವವರಿಗೆ ನೀನು ಅಂಬರವನ್ನು ದಾನ ಮಾಡಿರಬೇಕು. ನೆನಪು ಮಾಡು’ ದ್ರೌಪದೀ ತನ್ನ ಬಾಲ್ಯದ ದಿನಗಳೆಡೆಗೆ ಹೋಗುತ್ತಾಳೆ.

ಪಾಂಚಾಲ ದೇಶದ ನದಿಯ ಬದಿಯಲ್ಲಿ ಆಟವಾಡುತ್ತಿರುವಾಗ ಆ ನದಿಯಲ್ಲಿ ಓರ್ವ ಸನ್ಯಾಸಿ ಸ್ನಾನ ಮಾಡಿಕೊಂಡಿರುತ್ತಾನೆ. ಅವನ ಕೌಪೀನ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿರುತ್ತದೆ. ಎಲ್ಲರೂ ನಗುತ್ತಾರೆ. ಆದರೆ ದ್ರೌಪದೀ ಹಾಸ್ಯ ಮಾಡುವುದಿಲ್ಲ. ನನ್ನ ಪೀತಾಂಬರವನ್ನು ಹರಿದು ಒಂದು ಅಂಶವನ್ನು ಸನ್ಯಾಸಿಯೆಡೆಗೆ ಎಸೆಯುತ್ತಾಳೆ ! ಸನ್ಯಾಸಿ, “ನಿನಗೆ ಒಳ್ಳೆಯದಾಗಲಿ ಮಗಳೇ’ ಎಂದು ಆಶೀರ್ವಾದ ಮಾಡುತ್ತಾನೆ. ದ್ರೌಪದೀ ತನ್ನ ಮನಸ್ಸಿನಲ್ಲಿ ಅದನ್ನು ನೆನಪಿಸಿಕೊಂಡಾಗ ಶ್ರೀಕೃಷ್ಣ ನಗುತ್ತ ಹೇಳುತ್ತಾನೆ, “ಕೊಟ್ಟಿದ್ದೇ ಸಿಗುವುದು, ಕೊಡದಿರುವುದು ಅಲ್ಲ’ ಎಂದು.

ಟಾಪ್ ನ್ಯೂಸ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

8-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕದಿಯುತ್ತಿದ್ದ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.