ಮೆಟ್ರೋ ಪ್ರವೇಶಕ್ಕೆ ಶಂಕಿತನ ಯತ್ನ

ಕೇರಳ ಮೂಲದ ಬಗ್ಗೆ ತನಿಖೆ; ಎನ್‌ಐಎ, ಐಬಿಗೆ ಮಾಹಿತಿ

Team Udayavani, May 11, 2019, 6:00 AM IST

aaaaaa

ಬೆಂಗಳೂರು: ಮೆಜೆಸ್ಟಿಕ್‌ ಮೆಟ್ರೋನಿಲ್ದಾಣ ಪ್ರವೇಶದ್ವಾರದಲ್ಲಿ ಅನುಮಾನಸ್ಪದ ನಡೆತೋರಿ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಪರಾರಿಯಾದ ಶಂಕಾಸ್ಪದ ವ್ಯಕ್ತಿ ಮತ್ತೂಮ್ಮೆ ಮೆಟ್ರೋ ಒಳಗೆ ಹೋಗಲು ಪ್ರಯತ್ನಿಸಿದ್ದ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.


ಅಪರಿಚಿತ ವ್ಯಕ್ತಿಯ ನಡೆಗಳು ತೀರಾ ಅನುಮಾನಾಸ್ಪದವಾಗಿದ್ದು ಹೊರರಾಜ್ಯದ ವ್ಯಕ್ತಿ ಇರಬಹುದೇ ಎಂಬ ಶಂಕೆಯೂ ಪೊಲೀಸರಿಗೆ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ನೆರೆ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಜತೆಗೆ, ರಾಷ್ಟ್ರೀಯ ತನಿಖಾ ತಂಡ ( ಎನ್‌ಐಎ), ಕೇಂದ್ರ ಗುಪ್ತದಳ ಸೇರಿದಂತೆ ಇನ್ನಿತರೆ ತನಿಖಾ ತಂಡಗಳಿಗೆ ಮಾಹಿತಿ ರವಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಸಾಮಾನ್ಯ ವ್ಯಕ್ತಿಗಳಾದರೆ ಬಹುತೇಕ ಭದ್ರತಾ ಸಿಬ್ಬಂದಿಗೆ ಸಹಕರಿಸುತ್ತಿದ್ದರು. ಇಲ್ಲವೇ ತುರ್ತಾಗಿ ಆತ ತೆರಳಬೇಕಾಗಿದ್ದರೂ ಮಾಹಿತಿ ನೀಡಿಯೇ ಹೋಗುತ್ತಿದ್ದರು. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರು ವರ್ತಿಸುವ ರೀತಿ ನಡೆ ತೋರಿ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಹೀಗಾಗಿ ಹಲವು ಆಯಾಮಗಳಿಂದ ಈ ಪ್ರಕರಣವನ್ನು ನೋಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮೇ 6ರಂದು ರಾತ್ರಿ 7.30ರ ಸುಮಾರಿಗೆ ಮೆಜೆಸ್ಟಿಕ್‌ ಮೆಟ್ರೋನಿಲ್ದಾಣದ ಪೂರ್ವ ಗೇಟ್ ಬಳಿ ಆಗಮಿಸಿದ ವ್ಯಕ್ತಿ ಲೋಹಶೋಧಕ ಯಂತ್ರ ಪರಿಶೀಲನೆ ವೇಳೆ ಅಲಾರಂ (ಬೀಪ್‌) ಸದ್ದು ಹೊಡೆದುಕೊಂಡಿತ್ತು. ಆ ವ್ಯಕ್ತಿ ಜುಬ್ಟಾದ ಒಳಗಡೆ ಬೆಲ್r ಹಾಕಿದ್ದು, ಅದನ್ನು ತೆಗೆದು ತೋರಿಸುವಂತೆ ಭದ್ರತಾ ಸಿಬ್ಬಂದಿ ಕೇಳಿದ್ದರು. ಆದರೆ, ಆ ವ್ಯಕ್ತಿ ‘ಮನಿ.. ಮನಿಯಿದೆ’ ಎಂದು ಹೇಳಿ ಬೆಲ್r ತೆರೆಯುವ ಹಾಗೆ ಕೆಲಕಾಲ ನಟಿಸಿದ್ದಾನೆ. ಬಳಿಕ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಅಲ್ಲಿಂದ ತೆರಳಿದ್ದ. ಇದಾದ 10 ನಿಮಿಷಗಳ ಬಳಿಕ ಪಶ್ಚಿಮ ಗೇಟ್ ಬಳಿ ಬಂದು ಕೆಲಕಾಲ ನೋಡಿ ಪುನ: ವಾಪಾಸ್‌ ಹೊರಟುಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಅಪರಿಚಿತ ವ್ಯಕ್ತಿ ಮಾಹಿತಿಯಿದ್ದಲ್ಲಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.

ಆದರೆ, ಶಂಕಾಸ್ಪದ ವ್ಯಕ್ತಿ ಮೊದಲಬಾರಿ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ತೆರಳಿ, ಮತ್ತೂಮ್ಮೆ ಒಳಪ್ರವೇಶಿಸಲು ಯತ್ನಿಸಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಈ ಬೆನ್ನಲ್ಲೇ ವಿಶೇಷ ತನಿಖಾ ತಂಡಗಳು ಆತನ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆಸುತ್ತಿವೆ.

ರೇಖಾಚಿತ್ರ ನೆರವು?
ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ವರ್ತನೆ ತೋರಿ ಪರಾರಿಯಾದ ಶಂಕಾಸ್ಪದ ವ್ಯಕ್ತಿಯ ಪತ್ತೆಗಾಗಿ ಸಿಸಿಟಿವಿಯಲ್ಲಿ ಸೆರೆಯಾಗಿರುವ ಆತನ ಅಸ್ಪಷ್ಟ ಮುಖ ಗುರುತು ಆಧರಿಸಿ ರೇಖಾಚಿತ್ರಗಳನ್ನು ಬಿಡಿಸಲು ಸಿದ್ಧತೆ ನಡೆಸಿದ್ದಾರೆ. ಮೆಟ್ರೋ, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ರೈಲ್ವೇನಿಲ್ದಾಣ ಸುತ್ತಮುತ್ತಲ ಸಿಸಿಟಿವಿ ಪೂಟೇಜ್‌ಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಕೆಲವು ಫ‌ೂಟೇಜ್‌ಗಳಲ್ಲಿ ಆತನ ಅಸ್ಪಷ್ಟ ಮು ಖಚಿತ್ರಣ ಮಾತ್ರವಿದೆ. ಈಗಾಗಲೇ ಸಂಗ್ರಹಿಸಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಶಂಕಾಸ್ಪದ ವ್ಯಕ್ತಿಯೊಬ್ಬನೇ ಕಾಣಿಸಿಕೊಂಡಿದ್ದಾನೆ. ಆತನ ಜತೆಗೆ ಯಾರೂ ಇಲ್ಲ. ಮೆಜೆಸ್ಟಿಕ್‌ ಕಡೆಯಿಂದ ಒಬ್ಬನೇ ಬಂದಿದ್ದಾನೆ. ಮೆಟ್ರೋ ನಿಲ್ದಾಣದಿಂದ ವಾಪಸ್‌ ಆದ ಬಳಿಕ ಆತ ಎಲ್ಲಿಗೆ ತೆರಳಿದ ಎಂಬುದು ಖಚಿತವಾಗಿಲ್ಲ. ಹಲವು ಆಯಾಮಗಳಲ್ಲಿ ಪತ್ತೆಕಾರ್ಯ ನಡೆ ಯುತ್ತಿದ್ದರೂ ಆತನ ಸುಳಿವು ದೊರೆತಿಲ್ಲ. ಆತ ರಾಜ್ಯದವನೇ ಅಥವಾ ಹೊರರಾಜ್ಯದವನೇ ಎಂಬುದು ಖಚಿತವಾಗಬೇಕಿದೆ ಎಂದು ಮೂಲಗಳು ತಿಳಿಸಿವೆ.

ಸಾರ್ವಜನಿಕರು ಮಾಹಿತಿ ನೀಡಲು ಸಂಪರ್ಕಿಸಿ
ಉಪ್ಪಾರಪೇಟೆ ಪೊಲೀಸ್‌ ಠಾಣೆ: 08022942503
ಉಪ್ಪಾರ ಪೇಟೆ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ -9480801716
ಪಶ್ಚಿಮ ನಿಯಂತ್ರಣ ಕೊಠಡಿ – 080 22943232, 9480801700

ಟಾಪ್ ನ್ಯೂಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.