ಮೆಟ್ರೋ ಪ್ರವೇಶಕ್ಕೆ ಶಂಕಿತನ ಯತ್ನ

ಕೇರಳ ಮೂಲದ ಬಗ್ಗೆ ತನಿಖೆ; ಎನ್‌ಐಎ, ಐಬಿಗೆ ಮಾಹಿತಿ

Team Udayavani, May 11, 2019, 6:00 AM IST

aaaaaa

ಬೆಂಗಳೂರು: ಮೆಜೆಸ್ಟಿಕ್‌ ಮೆಟ್ರೋನಿಲ್ದಾಣ ಪ್ರವೇಶದ್ವಾರದಲ್ಲಿ ಅನುಮಾನಸ್ಪದ ನಡೆತೋರಿ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಪರಾರಿಯಾದ ಶಂಕಾಸ್ಪದ ವ್ಯಕ್ತಿ ಮತ್ತೂಮ್ಮೆ ಮೆಟ್ರೋ ಒಳಗೆ ಹೋಗಲು ಪ್ರಯತ್ನಿಸಿದ್ದ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಅಪರಿಚಿತ ವ್ಯಕ್ತಿಯ ನಡೆಗಳು ತೀರಾ ಅನುಮಾನಾಸ್ಪದವಾಗಿದ್ದು ಹೊರರಾಜ್ಯದ ವ್ಯಕ್ತಿ ಇರಬಹುದೇ ಎಂಬ ಶಂಕೆಯೂ ಪೊಲೀಸರಿಗೆ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ನೆರೆ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಜತೆಗೆ, ರಾಷ್ಟ್ರೀಯ ತನಿಖಾ ತಂಡ ( ಎನ್‌ಐಎ), ಕೇಂದ್ರ ಗುಪ್ತದಳ ಸೇರಿದಂತೆ ಇನ್ನಿತರೆ ತನಿಖಾ ತಂಡಗಳಿಗೆ ಮಾಹಿತಿ ರವಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಸಾಮಾನ್ಯ ವ್ಯಕ್ತಿಗಳಾದರೆ ಬಹುತೇಕ ಭದ್ರತಾ ಸಿಬ್ಬಂದಿಗೆ ಸಹಕರಿಸುತ್ತಿದ್ದರು. ಇಲ್ಲವೇ ತುರ್ತಾಗಿ ಆತ ತೆರಳಬೇಕಾಗಿದ್ದರೂ ಮಾಹಿತಿ ನೀಡಿಯೇ ಹೋಗುತ್ತಿದ್ದರು. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರು ವರ್ತಿಸುವ ರೀತಿ ನಡೆ ತೋರಿ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಹೀಗಾಗಿ ಹಲವು ಆಯಾಮಗಳಿಂದ ಈ ಪ್ರಕರಣವನ್ನು ನೋಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮೇ 6ರಂದು ರಾತ್ರಿ 7.30ರ ಸುಮಾರಿಗೆ ಮೆಜೆಸ್ಟಿಕ್‌ ಮೆಟ್ರೋನಿಲ್ದಾಣದ ಪೂರ್ವ ಗೇಟ್ ಬಳಿ ಆಗಮಿಸಿದ ವ್ಯಕ್ತಿ ಲೋಹಶೋಧಕ ಯಂತ್ರ ಪರಿಶೀಲನೆ ವೇಳೆ ಅಲಾರಂ (ಬೀಪ್‌) ಸದ್ದು ಹೊಡೆದುಕೊಂಡಿತ್ತು. ಆ ವ್ಯಕ್ತಿ ಜುಬ್ಟಾದ ಒಳಗಡೆ ಬೆಲ್r ಹಾಕಿದ್ದು, ಅದನ್ನು ತೆಗೆದು ತೋರಿಸುವಂತೆ ಭದ್ರತಾ ಸಿಬ್ಬಂದಿ ಕೇಳಿದ್ದರು. ಆದರೆ, ಆ ವ್ಯಕ್ತಿ ‘ಮನಿ.. ಮನಿಯಿದೆ’ ಎಂದು ಹೇಳಿ ಬೆಲ್r ತೆರೆಯುವ ಹಾಗೆ ಕೆಲಕಾಲ ನಟಿಸಿದ್ದಾನೆ. ಬಳಿಕ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಅಲ್ಲಿಂದ ತೆರಳಿದ್ದ. ಇದಾದ 10 ನಿಮಿಷಗಳ ಬಳಿಕ ಪಶ್ಚಿಮ ಗೇಟ್ ಬಳಿ ಬಂದು ಕೆಲಕಾಲ ನೋಡಿ ಪುನ: ವಾಪಾಸ್‌ ಹೊರಟುಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಅಪರಿಚಿತ ವ್ಯಕ್ತಿ ಮಾಹಿತಿಯಿದ್ದಲ್ಲಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.

ಆದರೆ, ಶಂಕಾಸ್ಪದ ವ್ಯಕ್ತಿ ಮೊದಲಬಾರಿ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ತೆರಳಿ, ಮತ್ತೂಮ್ಮೆ ಒಳಪ್ರವೇಶಿಸಲು ಯತ್ನಿಸಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಈ ಬೆನ್ನಲ್ಲೇ ವಿಶೇಷ ತನಿಖಾ ತಂಡಗಳು ಆತನ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆಸುತ್ತಿವೆ.

ರೇಖಾಚಿತ್ರ ನೆರವು?
ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ವರ್ತನೆ ತೋರಿ ಪರಾರಿಯಾದ ಶಂಕಾಸ್ಪದ ವ್ಯಕ್ತಿಯ ಪತ್ತೆಗಾಗಿ ಸಿಸಿಟಿವಿಯಲ್ಲಿ ಸೆರೆಯಾಗಿರುವ ಆತನ ಅಸ್ಪಷ್ಟ ಮುಖ ಗುರುತು ಆಧರಿಸಿ ರೇಖಾಚಿತ್ರಗಳನ್ನು ಬಿಡಿಸಲು ಸಿದ್ಧತೆ ನಡೆಸಿದ್ದಾರೆ. ಮೆಟ್ರೋ, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ರೈಲ್ವೇನಿಲ್ದಾಣ ಸುತ್ತಮುತ್ತಲ ಸಿಸಿಟಿವಿ ಪೂಟೇಜ್‌ಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಕೆಲವು ಫ‌ೂಟೇಜ್‌ಗಳಲ್ಲಿ ಆತನ ಅಸ್ಪಷ್ಟ ಮು ಖಚಿತ್ರಣ ಮಾತ್ರವಿದೆ. ಈಗಾಗಲೇ ಸಂಗ್ರಹಿಸಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಶಂಕಾಸ್ಪದ ವ್ಯಕ್ತಿಯೊಬ್ಬನೇ ಕಾಣಿಸಿಕೊಂಡಿದ್ದಾನೆ. ಆತನ ಜತೆಗೆ ಯಾರೂ ಇಲ್ಲ. ಮೆಜೆಸ್ಟಿಕ್‌ ಕಡೆಯಿಂದ ಒಬ್ಬನೇ ಬಂದಿದ್ದಾನೆ. ಮೆಟ್ರೋ ನಿಲ್ದಾಣದಿಂದ ವಾಪಸ್‌ ಆದ ಬಳಿಕ ಆತ ಎಲ್ಲಿಗೆ ತೆರಳಿದ ಎಂಬುದು ಖಚಿತವಾಗಿಲ್ಲ. ಹಲವು ಆಯಾಮಗಳಲ್ಲಿ ಪತ್ತೆಕಾರ್ಯ ನಡೆ ಯುತ್ತಿದ್ದರೂ ಆತನ ಸುಳಿವು ದೊರೆತಿಲ್ಲ. ಆತ ರಾಜ್ಯದವನೇ ಅಥವಾ ಹೊರರಾಜ್ಯದವನೇ ಎಂಬುದು ಖಚಿತವಾಗಬೇಕಿದೆ ಎಂದು ಮೂಲಗಳು ತಿಳಿಸಿವೆ.

ಸಾರ್ವಜನಿಕರು ಮಾಹಿತಿ ನೀಡಲು ಸಂಪರ್ಕಿಸಿ
ಉಪ್ಪಾರಪೇಟೆ ಪೊಲೀಸ್‌ ಠಾಣೆ: 08022942503
ಉಪ್ಪಾರ ಪೇಟೆ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ -9480801716
ಪಶ್ಚಿಮ ನಿಯಂತ್ರಣ ಕೊಠಡಿ – 080 22943232, 9480801700

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.