ರಕ್ತ ಎಲ್ಲಿಂದ ಬಂತು…ಶ್ರೀ ಕೋರ್ದಬ್ಬು ದೈವಸ್ಥಾನ ಅಪವಿತ್ರಗೊಳಿಸಿದ ವ್ಯಕ್ತಿಯ ಬಂಧನ
ಆತನ ಮೇಲೆ ಧಾರ್ಮಿಕ ಕ್ಷೇತ್ರವನ್ನು ಅಪವಿತ್ರಗೊಳಿಸಿದ ಪ್ರಕರಣ ದಾಖಲಿಸಲಾಗಿದೆ
Team Udayavani, Mar 22, 2022, 12:59 PM IST
ಕೈಕಂಬ, ಮಾ. 21: ಇಲ್ಲಿನ ಕಂದಾವರಪದವು ಶ್ರೀ ಕೋರ್ದಬ್ಬು ದೈವಸ್ಥಾನವನ್ನು ರವಿವಾರ ರಾತ್ರಿ ಅಪವಿತ್ರಗೊಳಿಸಿದ ಗುರುಪುರ ಕೈಕಂಬದ ನಿವಾಸಿ ಸಾಹುಲ್ ಹಮೀದ್ (27) ನನ್ನು ಬಜಪೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಾ.20ರಂದು ರಾತ್ರಿ 10.45ರ ವೇಳೆಗೆ ಸಾಹುಲ್ ಹಮೀದ್ ದೈವಸ್ಥಾನಕ್ಕೆ ಬಂದಿರುವುದು ಸಿಸಿ ಕೆಮರಾದಲ್ಲಿ ದಾಖಲಾಗಿದೆ. ದೈವಗಳಿಗೆ ಇಟ್ಟ ದೀಪ ವನ್ನು ನಂದಿಸುವುದು, ಇನ್ನೊಂದೆಡೆ ರಾಹು ಗುಳಿಗ ದೈವಗಳ ದೀಪವನ್ನು ನಂದಿಸುವುದು, ಆವರಣ ಗೋಡೆ ಯಲ್ಲಿ ಸ್ವಲ್ಪ ಹೊತ್ತು ಕುಳಿತು ಬಳಿಕ ದೀಪವನ್ನು ಬೆಳಗಿಸುವುದು, ಬಳಿಕ ಕಟ್ಟೆಗೆ ಅಪ್ರದಕ್ಷಿಣೆ ಬರುವುದು ಕಂಡು ಬಂದಿದೆ. ಆ ಸಮಯದಲ್ಲಿ ಆ ಪ್ರದೇಶ ರಕ್ತಸಿಕ್ತವಾಗಿರುವುದೂ ದೃಶ್ಯದಲ್ಲಿ ಕಾಣಿಸುತ್ತದೆ. ಸುಮಾರು
45 ನಿಮಿಷ ಸಾಹುಲ್ ಹಮೀದ್ ದೈವಸ್ಥಾನದಲ್ಲಿದ್ದ.
ಈ ಘಟನೆ ಸೋಮವಾರ ಬೆಳಗ್ಗೆ ಗ್ರಾಮದವರಿಗೆ ವಿಷಯ ತಿಳಿದು ಅಲ್ಲಿ ಒಟ್ಟು ಸೇರಿ ಆಕ್ರೋಶ ವ್ಯಕ್ತಪಡಿಸಿದ್ದರು. ಬಜಪೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ., ಸಿಬಂದಿ ಆಗಮಿಸಿ, ಸ್ಥಳ ಪರಿಶೀಲನೆ ಹಾಗೂ ಸಿಸಿ ಕೆಮರಾದಲ್ಲಿ ಸೆರೆಯಾದ ದೃಶ್ಯವನ್ನು ವೀಕ್ಷಿಸಿ ಬಳಿಕ ಸಾಹುಲ್ನನ್ನು ಬಂಧಿಸಿದ್ದಾರೆ. ದೈವಸ್ಥಾನದ ಆಡಳಿತ ಮಂಡಳಿಯ ದೂರಿನಂತೆ ಆತನ ಮೇಲೆ ಧಾರ್ಮಿಕ ಕ್ಷೇತ್ರವನ್ನು ಅಪವಿತ್ರಗೊಳಿಸಿದ ಪ್ರಕರಣ ದಾಖಲಿಸಲಾಗಿದೆ.
ರಕ್ತ ಎಲ್ಲಿಂದ ಬಂತು
ದೈವಸ್ಥಾನದ ಆವರಣದಲ್ಲಿ ರಕ್ತಸಿಕ್ತವಾದ ಬೆಂಕಿಪೆಟ್ಟಿಗೆ, 200 ರೂ. ನೋಟು ಪತ್ತೆಯಾಗಿದೆ. ಕುಂಕುಮವನ್ನು ಚೆಲ್ಲಲಾಗಿದೆ. ಸಾಹುಲ್ಗೆ ಗುರುಪುರ ಕೈಕಂಬದಲ್ಲಿ ಕೈಗೆ ಗಾಜು ತಾಗಿ ಗಾಯವಾಗಿ ರಕ್ತ ಸುರಿಯುತ್ತಿತ್ತು. ಅದೇ ಸ್ಥಿತಿಯಲ್ಲಿ ದೈವಸ್ಥಾನಕ್ಕೆ ಬಂದಿದ್ದ. ಇದರಿಂದ ದೈವಸ್ಥಾನದ ಅವರಣದಲ್ಲಿ ರಕ್ತಕಲೆಗಳು ಕಾಣಿಸಿಕೊಂಡಿವೆ ಎಂದು ಹೇಳಲಾಗುತ್ತದೆ.
ಆಡಳಿತ ಮಂಡಳಿ ಯಿಂದ ಸೋಮವಾರ ಸಂಜೆ ಕೋರ್ದಬ್ಬು ದೈವದ ದರ್ಶನ ನಡೆಸಿ, ಈ ವೇಳೆ ಆರೋಪಿ ಹಾಗೂ ಸಂಬಂಧಿಕರಿಗೆ ಹಾಜರಿರುವಂತೆ ಹೇಳಿದ್ದರು. ಆದರೆ ಯಾರೂ ಬಾರದ ಕಾರಣ ದೈವವು ಯಾರೂ ಅವರಿಗೆ ಗಂಧ ಪ್ರಸಾದ ನೀಡದಂತೆಯೂ ನಾವೇ ಈ ಕೃತ್ಯಕ್ಕೆ ಶಿಕ್ಷೆ ನೀಡಲಿದ್ದೇವೆ ಎಂದೂ ದೈವಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.