Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
138.18 ಕೋ. ರೂ. ವೆಚ್ಚದ ಕಾಮಗಾರಿ ಉದ್ಘಾಟನೆ; 58.34 ಕೋ. ವೆಚ್ಚದಲ್ಲಿ ಶಿಲಾನ್ಯಾಸ
Team Udayavani, Sep 18, 2024, 12:52 AM IST
ಮಂಗಳೂರು: ಮಹಾ ನಗರ ಪಾಲಿಕೆಯಲ್ಲಿ 138.18 ಕೋ. ರೂ. ವೆಚ್ಚದಲ್ಲಿ ಕೈಗೊಂಡ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ 58.34 ಕೋ. ರೂ. ವೆಚ್ಚದಲ್ಲಿ ಕೈಗೊಳ್ಳುವ ವಿವಿಧ ಅಭಿವೃದ್ಧಿ ಯೋಜನೆಗೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಂಗಳವಾರ ಚಾಲನೆ ನೀಡಿದರು.
ಮೇಯರ್ ಮಾತನಾಡಿ, ಪಾಲಿಕೆಯ ಒಂದು ವರ್ಷದ ಅವ ಧಿಯಲ್ಲಿ ಪಾರದರ್ಶಕ ಆಡಳಿತ ನಡೆಸಿರುವ ಸಂತೃಪ್ತಿ ಇದೆ. ಪಕ್ಷ ನೀಡಿದ ಹೊಣೆಯನ್ನು ನಿಭಾಯಿಸಿದ್ದೇನೆ. ತನ್ನ ಅಧಿಕಾರಾವಧಿಯಲ್ಲಿ ಅಭಿವೃದ್ಧಿಗೆ ಸಂಬಂಧಿಸಿ ಜಾತಿ, ಧರ್ಮ ಭೇದವಿ ಲ್ಲದೆ ಎಲ್ಲರನ್ನೂ ಸಮಾನವಾಗಿ ಪರಿ ಗಣಿಸಲಾಗಿದೆ. ಆಡಳಿತ ಪಕ್ಷ, ವಿಪಕ್ಷಗಳು ಹಾಗೂ ಪಾಲಿಕೆ ಅಧಿಕಾರಿಗಳು ಪಾರದರ್ಶಕ ಆಡಳಿತಕ್ಕೆ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸುಧೀರ್ ಶೆಟ್ಟಿ ಮೇಯರ್ ಅವಧಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಉತ್ತಮ ಕಾರ್ಯಗಳಾಗಿವೆ. ಪಾಲಿಕೆ ಯ ಆದಾಯ ಹೆಚ್ಚಿಸುವ ಕಾರ್ಯ ಸೇರಿದಂತೆ ಜನಪರ ಕಾರ್ಯ ಗಳು ನೆರವೇರಿವೆ ಎಂದು ಶ್ಲಾಘಿಸಿದರು.
ಶಾಸಕ ಡಾ| ವೈ. ಭರತ್ ಶೆಟ್ಟಿ ಮಾತನಾಡಿ, ಪಾಲಿಕೆಯಲ್ಲಿ ಸುಧೀರ್ ಶೆಟ್ಟಿ ಮೇಯರ್ ಅವಧಿ ಗಮನಾರ್ಹ. ಕಾರ್ಪೊರೇಟರ್ಗಳು ಹಾಗೂ ಅಧಿಕಾರಿ ವಲಯದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ನಿಭಾಯಿಸಿ ಎಲ್ಲರ ಸಹಕಾರ ಪಡೆದು ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಈಗ ಶಿಲಾನ್ಯಾಸ ಆಗಿರುವ ಕಾಮಗಾರಿಗಳು ತ್ವರಿಗತಿಯಲ್ಲಿ ಪೂರ್ಣಗೊಳಿಸಲು ಮುಂದಿನ ಮೇಯರ್ ಶ್ರಮಿಸಬೇಕು ಎಂದು ಹೇಳಿದರು.
ಪಾಲಿಕೆ ವಿಪಕ್ಷ ನಾಯಕ ಪ್ರವೀಣ್ಚಂದ್ರ ಆಳ್ವ ಮಾತನಾಡಿ, ನಗರದ ಅಭಿವೃದ್ಧಿ ವಿಚಾರದಲ್ಲಿ ಹಾಗೂ ಜನರ ಸಮಸ್ಯೆಗಳ ಬಗ್ಗೆ ಎಚ್ಚರಿಸುವ ಕೆಲಸವನ್ನು ವಿಪಕ್ಷವಾಗಿ ಮಾಡಿದ್ದೇವೆ. ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿದ್ದೇವೆ. ಸುಧೀರ್ ಶೆಟ್ಟಿ ಅವರಿಂದ ಉತ್ತಮ ಕಾರ್ಯಗಳು ನಡೆದಿವೆ ಎಂದರು.
ಉಪಮೇಯರ್ ಸುನೀತಾ, ಪಾಲಿಕೆ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಮಾಜಿ ಮೇಯರ್ಗಳಾದ ದಿವಾಕರ್ ಪಾಂಡೇಶ್ವರ, ಎಂ. ಶಶಿಧರ್ ಹೆಗ್ಡೆ, ಭಾಸ್ಕರ್ ಮೊಲಿ, ಜಯಾನಂದ್ ಅಂಚನ್ ಮುಂತಾದವರು ಉಪಸ್ಥಿತರಿದ್ದರು.
ಬೀದಿಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ವಲಯ
ನನ್ನ ಅವಧಿಯಲ್ಲಿ ಶ್ರೀ ನಾರಾಯಣ ಗುರು ಜಯಂತಿಗಾಗಿ ಗುರು ಮಂದಿರಗಳಿಗೆ ತಲಾ 15 ಸಾವಿರ ರೂ. ನೀಡಲಾಗಿದೆ. ಅಂಬೇಡ್ಕರ್ ಪ್ರತಿಮೆ ಸಹಿತ ವೃತ್ತ ನಿರ್ಮಾಣಕ್ಕೆ ಶಾಸಕರು ಹಾಗೂ ವಿಪಕ್ಷದವರು ಸಹಕಾರ ನೀಡಿದ್ದಾರೆ. ಮೃತ ಯೋಧರ ಕುಟುಂಬಗಳಿಗೆ ತಲಾ 5 ಲಕ್ಷ ರೂ., 75 ಮೀ. ಎತ್ತರದ ಧ್ವಜಸ್ತಂಭ ನಿರ್ಮಾಣ, 10 ಸಾವಿರ ಗಿಡ ನೆಡುವ ಕಾರ್ಯಕ್ರಮ, ಪ್ರಕೃತಿ ವಿಕೋಪದಲ್ಲಿ ಮಡಿದವರ ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರ, ಪ್ರತಿಭಾನ್ವಿತ ಕನ್ನಡ ಮಾಧ್ಯಮ ಶಾಲೆ ಮಕ್ಕಳಿಗೆ ಪ್ರೋತ್ಸಾಹಧನ, ಟೈಗರ್ ಕಾರ್ಯಾಚರಣೆ ಜತೆಗೆ ಬೀದಿ ವ್ಯಾಪಾರಿಗಳಿಗೆ ವ್ಯಾಪಾರಿ ವಲಯ ನಿರ್ಮಾಣ, ಜನಸ್ಪಂದನ ಕಾರ್ಯಕ್ರಮಗಳು ಹೀಗೆ ಹಲವು ಕಾರ್ಯಗಳು ನಡೆದಿವೆ. ಎಲ್ಲದಕ್ಕೂ ಸರ್ವರೂ ಉತ್ತಮ ಸಹಕಾರ ನೀಡಿದ್ದಾರೆ ಎಂದು ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.