![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 25, 2019, 10:36 PM IST
ಬೆಳಗಾವಿ: ನೆರೆ ಸಂತ್ರಸ್ತರಿಗೆ ಪರಿಹಾರಕ್ಕಾಗಿ ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ರಾಣಿ ಚನ್ನಮ್ಮನ ಪುತ್ಥಳಿ ಎದುರು ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ಮರಾಠಿಯಲ್ಲಿ ಮಾತನಾಡಿದ್ದನ್ನು ವಿರೋಧಿಸಿ ಪೋಸ್ಟ್ ಹಾಕಿದ್ದ ಯುವಕನಿಗೆ ಹೆಬ್ಬಾಳ್ಕರ್ ಪುತ್ರ ಬೆದರಿಕೆ ಹಾಕಿದ್ದು ಚರ್ಚೆಗೆ ಗ್ರಾಸವಾಗಿದೆ.
ಫೇಸ್ ಬುಕ್ ನಲ್ಲಿ ಗ್ರಾಮೀಣ ಶಾಸಕಿ ಹೆಬ್ಬಾಳ್ಕರ್ ಅವರು ತಾವು ಭಾಷಣ ಮಾಡಿದ ವಿಡಿಯೋ ತುಣುಕು ಅಪ್ ಲೋಡ್ ಮಾಡಿದ್ದರು. ಆಗ ಇದನ್ನು ವಿರೋಧಿಸಿದ ಗೋಕಾಕ್ ನ ಪವನ್ ಮಹಾಲಿಂಗಪುರ ಎಂಬ ಯುವಕ ಕನ್ನಡದಲ್ಲಿ ಮಾತನಾಡಿ, ಇಲ್ಲದಿದ್ದರೆ ಮುಂದೆ ನಿಮಗೆ ಜನ ಪಾಠ ಕಲಿಸುತ್ತಾರೆ ಎಂದು ಪೋಸ್ಟ್ ಮಾಡಿದ್ದಾನೆ.
ಆಗ ಪವನ್ ಮಹಾಲಿಂಗಪುರನ ಫೇಸ್ ಬುಕ್ ಗೆ ಮೆಸೆಂಜ್ ಮಾಡಿರುವ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರು, ಮೇಡಂ ವಿರುದ್ದ ಇನ್ನೊಮ್ಮೆ ಪೋಸ್ಟ್ ಮಾಡಿದರೆ ನಾನು ಸುಮ್ಮನೆ ಬಿಡೋದಿಲ್ಲ. ನಿಮ್ಮ ಮನೆಗೆ ನೇರವಾಗಿ ಬರುತ್ತೇನೆ. ನೋಡುತ್ತಾ ಇರು ಇನ್ನೂ ಬಿಸಿ ಮಾಡುವುದಿದೆ ಎಂದು ಬೆದರಿಕೆ ಹಾಕಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್ ಗಳು ಹರಿದಾಡುತ್ತಿವೆ.
ಪ್ರತಿಭಟನೆ ವೇಳೆ ಶಾಸಕಿ ಹೆಬ್ಬಾಳ್ಕರ್ ಅವರು ಕನ್ನಡ ಮಾತನಾಡುತ್ತಿದ್ದಂತೆ ಮರಾಠಿಯಲ್ಲಿಯೂ ಭಾಷಣ ಮಾತನಾಡಿದ್ದರು. ಆಗ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಕನ್ನಡ ಮಾತನಾಡುವಂತೆ ಒತ್ತಾಯಿಸಿದಾಗ ಕೂಡಲೇ ಹೆಬ್ಬಾಳ್ಕರ್ ಕನ್ನಡ ಮಾತು ಆರಂಭಿಸಿದ್ದರು. ಜತೆಗೆ ಮರಾಠಿ ಮಾತನಾಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.