ಪವಿತ್ರ ಧನುರ್ಮಾಸ ಆಚರಣೆಯ ಮಹತ್ವ, ಪೌರಾಣಿಕ ಹಿನ್ನೆಲೆ ಏನು?

ಈ ದಿನ ದೇವಾಲಯದ ಏಳು ಬಾಗಿಲುಗಳನ್ನು ಹಾದು ಹೋದರೆ ಮೋಕ್ಷ ದೊರಕಿದಂತೆ ಎಂಬುದು ನಂಬಿಕೆ.

Team Udayavani, Dec 18, 2021, 4:40 PM IST

ಪವಿತ್ರ ಧನುರ್ಮಾಸ ಆಚರಣೆಯ ಮಹತ್ವ, ಪೌರಾಣಿಕ ಹಿನ್ನೆಲೆ ಏನು?

ಹಿಂದೂ ಧರ್ಮದಲ್ಲಿ ಹಲವಾರು ಆಚರಣೆಗಳು ಇವೆ. ಹಿಂದೂಗಳನ್ನು ಭಕ್ತಿ ಭಾವದಲ್ಲಿ ಮಿಂದೇಳುವಂತೆ ಮಾಡುತ್ತದೆ. ಅಂಥ ಪವಿತ್ರ ಆಚರಣೆಗಳಲ್ಲಿ ಧನುರ್ಮಾಸವೂ ಒಂದು. ಧನುರ್ ಸಂಕ್ರಮಣವೆಂದರೆ ಸೂರ್ಯನು ಧನುರ್ ರಾಶಿಯನ್ನು ಪ್ರವೇಶಿಸುತ್ತಾನೆ. ಆದ್ದರಿಂದ ಈ ಮಾಸವನ್ನು ಧನುರ್ಮಾಸವೆಂದು ಕರೆಯುತ್ತಾರೆ. ಈ ತಿಂಗಳ ಪ್ರಾರಂಭದಲ್ಲಿ ಸೂರ್ಯನು ಧನುರ್ ರಾಶಿಯನ್ನು ಪ್ರವೇಶಿಸಲು ಪ್ರಾರಂಭಿಸಿ ತಿಂಗಳ ಕೊನೆಗೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸುವ ದಿನವೇ ಮಕರ ಸಂಕ್ರಮಣ.

ಧನುರ್ಮಾಸದ ಆಚರಣೆ ಎಂದರೆ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು , ಸ್ನಾನ-ನಿತ್ಯ ಕರ್ಮಾದಿಗಳನ್ನು ಮುಗಿಸಿ ನಕ್ಷತ್ರಗಳು ಹೊಳೆಯುತ್ತಿರುವಾಗಲೇ ದೇವಾಲಯಗಳು ಬಾಗಿಲು ತೆರೆದು ಬೆಳಗಿನ ಪೂಜೆ ಆರಂಭಿಸಿ, ಸೂರ್ಯೋದಯಕ್ಕಿಂತ ಮುನ್ನವೇ ಮುಕ್ತಾಯವಾಗಬೇಕು. ಇದನ್ನು ಧನುಪೂಜೆ ಎಂದು ಕರೆಯುತ್ತಾರೆ. ಈ ಬಾರಿಯ ಧನುರ್ಮಾಸ ಡಿ.16ರಿಂದ ಪ್ರಾರಂಭವಾಗಿದ್ದು, ಜ. 14ರಂದು ಪೂರ್ಣಗೊಳ್ಳಲಿದೆ.

ಧನುರ್ಮಾಸದ ಪೂಜೆಗೆ “ಹುಗ್ಗಿ’’ ಪ್ರಸಾದ ವಿಶೇಷ ನೈವೇದ್ಯ. ಹುಗ್ಗಿ ಎಂದರೆ “ಹೆಸರು ಕಾಳು’’ ಹಾಗೂ ಅಕ್ಕಿ, ಬೆಲ್ಲ ಸೇರಿಸಿ ಮಾಡುವ ನೈವೇದ್ಯ ಇದು ಧನು ಪೂಜೆಗೆ ವಿಶೇಷ ಪ್ರಸಾದ ಈ ನೈವೇದ್ಯವನ್ನು “ಪೊಂಗಲ್‌’’ ಎಂದು ಕರೆಯುತ್ತಾರೆ. ದೇವತೆಗಳಿಗೆ ದಕ್ಷಿಣಾಯನವು ರಾತ್ರಿಯ ಕಾಲ ಮತ್ತು ಉತ್ತರಾಯಣವು ಬೆಳಗಿನ ಕಾಲ. ಆದರೆ ಧನುರ್ಮಾಸವು ರಾತ್ರಿ ಮತ್ತು ಹಗಲಿನಿಂದ ಕೂಡಿದ ಕಾಲವೆಂಬುದು ಪ್ರತೀತಿ. ಧನುರ್ಮಾಸದಲ್ಲಿ ವಿಶೇಷವಾಗಿ ಚಂದ್ರನ ಬೆಳವಣಿಗೆಯ ಹಂತದಲ್ಲಿ ಬರುವ ಏಕಾದಶಿಯು ಮೋಕ್ಷ ದ್ವಾರಂ ಎಂದು ಹೆಸರುವಾಸಿಯಾಗಿದೆ. ಈ ದಿನ ದೇವಾಲಯದ ಏಳು ಬಾಗಿಲುಗಳನ್ನು ಹಾದು ಹೋದರೆ ಮೋಕ್ಷ ದೊರಕಿದಂತೆ ಎಂಬುದು ನಂಬಿಕೆ.

ಧನುರ್ಮಾಸ ಪುಣ್ಯ ಪೂರ್ಣ ಮಾಸ :-
ಬೃಹತ್‌ ಸಾಮ ತಥಾ ಸಾಮ್ನಾಂ
ಗಾಯತ್ರೀ ಛಂದ ಸಾಮಹಮ್‌|
ಮಾಸಾನಾಂ ಮಾರ್ಗಶೀರ್ಷೋಹಂ
ಋತೂನಾಂ ಕುಸುಮಾಕರಃ||
ಅಂದರೆ, ವೇದಗಳಲ್ಲಿ ‘ಪ್ರಧಾನವಾದ ಬೃಹತ್‌ ಸಾಮವು ನಾನು, ಛಂದಸ್ಸುಗಳಲ್ಲಿ ಅತಿ ವಿಶಿಷ್ಟವಾದ ಗಾಯತ್ರಿ ಛಂದಸ್ಸು ನಾನು, ಮಾಸಗಳಲ್ಲಿ ಮಾರ್ಗಶೀರ್ಷ ಮಾಸವು ನಾನು, ಋತುಗಳಲ್ಲಿ ಚಿಗುರೊಡೆಯುವ ಋತು ವಸಂತವೂ ನಾನೇ ಆಗಿದ್ದೇನೆ’ ಎಂದು ಶ್ರೀಕೃಷ್ಣನು ಭಗವದ್ಗೀತೆಯಲ್ಲಿ ಹೇಳಿದ್ದಾನೆ.

ಧನುರ್ಮಾಸದ ಪೌರಾಣಿಕ ಹಿನ್ನೆಲೆ
ಒಮ್ಮೆ ಸೃಷ್ಟಿಕರ್ತರಾದ ಬ್ರಹ್ಮದೇವನು ಹಂಸ ಪಕ್ಷಿಯ ಅವತಾರದಲ್ಲಿ ಲೋಕ ಸಂಚಾರ ಮಾಡುತ್ತಿರುವಾಗ ಸೂರ್ಯದೇವನು ಹಂಸರೂಪಿ ಬ್ರಹ್ಮದೇವನ ಮೇಲೆ ಹೆಚ್ಚಿನ ಶಾಖ ಮತ್ತು ಬೆಳಕನ್ನು ಬಿಡುತ್ತಾನೆ. ಇದರಿಂದ ಕೋಪಗೊಂಡ ಹಂಸ ಸ್ವರೂಪಿ ಬ್ರಹ್ಮದೇವನು ನಿನ್ನ ತೇಜಸ್ಸು ಕ್ಷೀಣಿಸಲಿ ಎಂದು ಶಾಪ ಕೊಡುತ್ತಾನೆ.

ಸೂರ್ಯ ದೇವ ಕಾಂತಿಹೀನನಾಗಿ ತನ್ನ ಪ್ರಕಾಶ ಕಳೆದುಕೊಂಡನು. ಇದರಿಂದಾಗಿ ಭೂಮಂಡಲವೇ ಅಲ್ಲೋಲ ಕಲ್ಲೋಲವಾಯಿತು. ದೇವಾನುದೇವತೆಗಳು ಹಾಗೂ ಮುನಿವೃಂದವು ನಿತ್ಯ-ಪೂಜೆ ಹಾಗೂ ಹೋಮ ಹವನಾದಿಗಳನ್ನು ನಡೆಸದಂತಾಯಿತು. ಆಗ ಎಲ್ಲರೂ ಸೇರಿ ಬ್ರಹ್ಮ ದೇವರ ಕುರಿತು ತಪಸ್ಸು ಆಚರಿಸಿದರು. ಬ್ರಹ್ಮದೇವನು ಪ್ರತ್ಯಕ್ಷನಾಗಿ ಸ್ಥಿತಿ ಅರಿತು ಪರಿಹಾರ ಸೂಚಿಸುತ್ತಾನೆ.

ಸೂರ್ಯ ದೇವನು ಧನು ಮಾಸದ ಮೊದಲ ಜಾವದಲ್ಲಿ ಜಗದೊಡೆಯ ಶ್ರೀ ಮಹಾವಿಷ್ಣುವನ್ನು ಪೂಜಿಸುವಂತೆ ಸಲಹೆ ನೀಡಲಾಯಿತು. ಅಂತೆಯೇ ಸೂರ್ಯದೇವ ಧನುರ್ಮಾಸದ ಪೂಜೆಯನ್ನು ಬೆಳಗ್ಗಿನ ಜಾವದಲ್ಲಿ ಸತತ ಹದಿನಾರು ವರುಷಗಳ ಕಾಲ ನೇರವೆರಿಸಿದನು. ಶ್ರೀ ಮಾಹಾವಿಷ್ಣುವಿನ ಪೂರ್ಣಾನುಗ್ರಹದಿಂದ ಎಂದಿನಂತೆ ತೇಜಸ್ಸು ಹಾಗೂ ಕಾಂತಿಯಿಂದ ಜಗತ್ತನ್ನು ಬೆಳಗತೊಡಗಿದನು ಎಂದು ಪುರಾಣಗಳಿಂದ ತಿಳಿದುಬಂದಿದೆ. ಸೂರ್ಯದೇವ ಈ ಧನುರ್ಮಾಸದ ಪೂಜೆ ಮಾಡಿ ಜಗತ್ತಿಗೆ ಈ ಆಚರಣೆಯ ಮಹತ್ವ ತಿಳಿಯುವಂತೆ ಮಾಡಿದನು. ಈ ಮಾಸದ ಪುಣ್ಯ ಫ‌ಲ ಎಲ್ಲರಿಗೂ ಪ್ರಾಪ್ತಿಯಾಗಲಿ.

– ಸುಮುಖ ಪಂಡಿತ್‌

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರುಚಿ ಹೆಚ್ಚಿಸುವ ವಿಷ: ತಿಂಡಿಗಳಿಗೆ ಬಳಸುವ ಕೃತಕ ಬಣ್ಣ, ರುಚಿಕಾರಕಗಳಿಂದ ಪ್ರಾಣಕ್ಕೆ ಕುತ್ತು

ರುಚಿ ಹೆಚ್ಚಿಸುವ ವಿಷ: ತಿಂಡಿಗಳಿಗೆ ಬಳಸುವ ಕೃತಕ ಬಣ್ಣ, ರುಚಿಕಾರಕಗಳಿಂದ ಪ್ರಾಣಕ್ಕೆ ಕುತ್ತು

When will American astronauts return from space?

NASA; ಅಂತರಿಕ್ಷದಲ್ಲೇ ಅತಂತ್ರ! ಬಾಹ್ಯಾಕಾಶದಿಂದ ಅಮೆರಿಕದ ಗಗನಯಾತ್ರಿಗಳು ಮರಳೋದು ಯಾವಾಗ?

Bajaj Bruzer is the world’s first CNG bike

Bajaj Bruzer; ವಿಶ್ವದ ಮೊದಲ ಸಿಎನ್‌ಜಿ ಬೈಕ್‌ ಬಜಾಜ್‌ ಬ್ರೂಝರ್‌

ಸಾಂಪ್ರದಾಯಿಕ ಪ್ರಯೋಗಾಲಯ ಮೀರಿ ಬಹು-ಶಿಸ್ತಿನ ವಿದ್ಯಾಸಂಸ್ಥೆಗಳ ಮೂಲಕ ಶೈಕ್ಷಣಿಕ ಕ್ರಾಂತಿ

ಸಾಂಪ್ರದಾಯಿಕ ಪ್ರಯೋಗಾಲಯ ಮೀರಿ ಬಹು-ಶಿಸ್ತಿನ ವಿದ್ಯಾಸಂಸ್ಥೆಗಳ ಮೂಲಕ ಶೈಕ್ಷಣಿಕ ಕ್ರಾಂತಿ

Ajit Doval is India’s James Bond!

Spy Master; ಅಜಿತ್‌ ದೋವಲ್‌ ಭಾರತದ ಜೇಮ್ಸ್‌ಬಾಂಡ್‌!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.