Dharmasthala: ಇಂದು ಡಾ.ಡಿ.ವೀರೇಂದ್ರ ಹೆಗ್ಗಡೆಯವರ 57ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಅಧ್ಯಕ್ಷತೆಯಲ್ಲಿ ಮಹೋತ್ಸವ ಸಭಾಭವನದಲ್ಲಿ ಅಭಿನಂದನಾ ಸಭೆ

Team Udayavani, Oct 24, 2024, 4:56 AM IST

Dharmasthala

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಇಂದು (ಅ.24) 57ನೇ ವಸಂತದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಹೊಸ್ತಿಲಲ್ಲಿದ್ದಾರೆ.

ಧರ್ಮಸ್ಥಳದ ನೆಲ್ಯಾಡಿ ಬೀಡಿನಲ್ಲಿ ಡಿ. ವೀರೇಂದ್ರ ಕುಮಾರ್‌ 1968ರ ಅ. 24ರಂದು 21ನೇ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತ ರಾಗಿದ್ದರು. ಶ್ರೀ ಕ್ಷೇತ್ರದಲ್ಲಿ ಪಾರಂಪರಿಕವಾಗಿ ನಡೆದುಕೊಂಡು ಬರುತ್ತಿರುವ ಚತುರ್ವಿಧ ದಾನ ಪರಂಪರೆಗೆ ಕಾಲದ ಆದ್ಯತೆಗೆ ಅನುಗುಣವಾಗಿ ಕ್ಷೇತ್ರದ ಹಾಗೂ ಸಮಾಜದ ಸರ್ವತೋಮುಖ ಪ್ರಗತಿಗೆ ಪೂರಕವಾಗಿ ಹೊಸ ರೂಪುರೇಷೆ ನೀಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಪರಂಪರೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾದರಿ ಕ್ಷೇತ್ರವಾಗಿ ಜನಮನ್ನಣೆಗೆ ಪಾತ್ರವಾಗಿಸಿದವರು ಡಾ.ವೀರೇಂದ್ರ ಹೆಗ್ಗಡೆಯವರು.

57ನೇ ವರ್ಧಂತಿಯು ಸಂಭ್ರಮದ ವಾತಾವರಣ ಮೂಡಿಸಿದೆ. ಊರಿನ ನಾಗರಿಕರು ದೇಗುಲ ನೌಕರರು ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆಗಳ ನೌಕರರು, ಆಪ್ತರು, ಬಂಧುಗಳು, ಅಭಿಮಾನಿಗಳು ಹಾಗೂ ಧರ್ಮಸ್ಥಳದ ಭಕ್ತರು ಹೆಗ್ಗಡೆಯವರಿಗೆ ಶ್ರದ್ಧಾಭಕ್ತಿಯಿಂದ ಗೌರವಾರ್ಪಣೆ ಮಾಡುವರು. ಈ ಪ್ರಯುಕ್ತ ಗುರುವಾರ ಬೆಳಗ್ಗೆ 10ರಿಂದ ಅಮೃತವರ್ಷಿಣಿ ಸಭಾಭವನದಲ್ಲಿ ದೇಗುಲದ ನೌಕರರಿಗೆ ಛದ್ಮವೇಷ ಸ್ಪರ್ಧೆ ಆಯೋಜಿಸಲಾಗಿದೆ.

ಸಂಜೆ 4 ಗಂಟೆಗೆ ಮಹೋತ್ಸವ ಸಭಾಭವನದಲ್ಲಿ ನಡೆಯುವ ಅಭಿನಂದನ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ| ಸಿ.ಎನ್‌.ಮಂಜುನಾಥ್‌ ಅಧ್ಯಕ್ಷತೆ ವಹಿಸುವರು. ಶಾಸಕರಾದ ಹರೀಶ್‌ ಪೂಂಜ ಮತ್ತು ಕೆ. ಪ್ರತಾಪಸಿಂಹ ನಾಯಕ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌ ಶುಭಾಶಂಸನೆ ಮಾಡುವರು.

ಚಂದ್ರನಾಥ, ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ
ಈ ಪ್ರಯುಕ್ತ ಅ.24ರಂದು ಬೆಳಗ್ಗೆ ಭಗವಾನ್‌ ಚಂದ್ರನಾಥ ಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆಗಳು ಜರಗಲಿವೆ. ಗಣ್ಯರು, ಹೆಗ್ಗಡೆಯವರ ಅಭಿಮಾನಿಗಳು, ಕ್ಷೇತ್ರದ ಭಕ್ತರು, ಸಂಘ-ಸಂಸ್ಥೆಯವರು, ನಾಗರಿಕರು ಸಹಿತ ಅನೇಕ ಮಂದಿ ಹೆಗ್ಗಡೆ ಯವರಿಗೆ ಭಕ್ತಿಪೂರ್ವಕ ಅಭಿನಂದನೆ ಹಾಗೂ ಗೌರವ ಸಲ್ಲಿಸಲಿದ್ದಾರೆ.

ಟಾಪ್ ನ್ಯೂಸ್

Karnataka: ಈ ತಿಂಗಳಲ್ಲಿ ವಾಡಿಕೆಗಿಂತ ಶೇ. 66 ಹೆಚ್ಚು ಮಳೆ

Karnataka: ಈ ತಿಂಗಳಲ್ಲಿ ವಾಡಿಕೆಗಿಂತ ಶೇ. 66 ಹೆಚ್ಚು ಮಳೆ

Crackers

Mangaluru: ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

Forest

Mangaluru: ಲೋಕೋಪಯೋಗಿ ನಿರೀಕ್ಷಣ ಮಂದಿರದ ಆವರಣದಿಂದ ಮರ ಸಾಗಾಟ: ಪ್ರಕರಣ ದಾಖಲು

ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

India: ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

MLC-Counting

Council By Election: ವಿಧಾನ ಪರಿಷತ್‌ ಉಪ ಚುನಾವಣೆ; ಇಂದು ಮತ ಎಣಿಕೆ

Kadaba-Rain

Heavy Rain: ಕಡಬ ಪರಿಸರದಲ್ಲಿ ಭಾರೀ ಮಳೆ: ರಸ್ತೆ ಜಲಾವೃತ

Manipal Marathon: ಮಾಹೆ ವಿ.ವಿ: ಮಣಿಪಾಲ ಮ್ಯಾರಥಾನ್‌ ನೋಂದಣಿ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba-Rain

Heavy Rain: ಕಡಬ ಪರಿಸರದಲ್ಲಿ ಭಾರೀ ಮಳೆ: ರಸ್ತೆ ಜಲಾವೃತ

Puuturu-VHP

Putturu: ವಿಶ್ವ ಹಿಂದೂ ಪರಿಷತ್‌ನಿಂದ ಸಾಮಾಜಿಕ ಸಮರಸದ ಭಾವ: ಗೋಪಾಲ್‌ ಜಿ

15

Belthangady: ಆಮ್ನಿ ಕಾರು ಬೆಂಕಿಗಾಹುತಿ

de

Gerukatte: ಕೆರೆಯಲ್ಲಿ ಅಪರಿಚಿತ ಶವ ಪತ್ತೆ

6

Belthangady: ಕಡೆಗೂ ಕಜಕ್ಕೆ ಶಾಲೆಯವರೆಗೆ ಬಂತು ಸರಕಾರಿ ಬಸ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Karnataka: ಈ ತಿಂಗಳಲ್ಲಿ ವಾಡಿಕೆಗಿಂತ ಶೇ. 66 ಹೆಚ್ಚು ಮಳೆ

Karnataka: ಈ ತಿಂಗಳಲ್ಲಿ ವಾಡಿಕೆಗಿಂತ ಶೇ. 66 ಹೆಚ್ಚು ಮಳೆ

Crackers

Mangaluru: ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

Forest

Mangaluru: ಲೋಕೋಪಯೋಗಿ ನಿರೀಕ್ಷಣ ಮಂದಿರದ ಆವರಣದಿಂದ ಮರ ಸಾಗಾಟ: ಪ್ರಕರಣ ದಾಖಲು

ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

India: ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

MLC-Counting

Council By Election: ವಿಧಾನ ಪರಿಷತ್‌ ಉಪ ಚುನಾವಣೆ; ಇಂದು ಮತ ಎಣಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.