ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

ಯುವ ಪೀಳಿಗೆ ಕೃಷಿಯಿಂದ ಲಾಭವಿಲ್ಲ, ಇದರಿಂದ ಉಪಯೋಗವಿಲ್ಲ ಎನ್ನುತ್ತಾರೆ..

Team Udayavani, Sep 24, 2024, 6:03 PM IST

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

ಉದಯವಾಣಿ ಸಮಾಚಾರ
ಧಾರವಾಡ: ಕಬ್ಬಿನ ರಸ ಕಾಮಾಲೆ ರೋಗಕ್ಕೆ ರಾಮಬಾಣ. ಆದರೆ ವರ್ಷವಿಡೀ ಕಬ್ಬಿನ ಹಾಲು ಸಿಗುವುದು ಕಷ್ಟ. ಆದರೆ ಇದೀಗ ರೈತರೊಬ್ಬರು ತಮ್ಮ ಸಂಬಂಧಿಗೆ ಕಾಮಾಲೆ ರೋಗಕ್ಕೆ ಕಬ್ಬಿನ ಹಾಲು ಸಿಗದೇ ನಿಧನರಾಗಿದ್ದನ್ನೇ ಸವಾಲಾಗಿ ಸ್ವೀಕರಿಸಿ ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರಜ್ಞಾನ ಶೋಧಿಸಿ ಸೈ ಎನಿಸಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕೆರವಾಡ ಗ್ರಾಮದ ಆರ್‌.ಐ. ಪಾಟೀಲ ಎಂಬ ರೈತರು ವರ್ಷಪೂರ್ತಿ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿ, ಕಬ್ಬಿನ ಹಾಲಿಗೆ ಮತ್ತಷ್ಟು ಬೆಲೆ ಬರುವಂತೆ ಮಾಡಿದ್ದಾರೆ. ಕಳೆದ ಐದಾರು ವರ್ಷಗಳಿಂದ ಈ ನಿಟ್ಟಿನಲ್ಲಿ ಶೋಧನೆ ಮತ್ತು ಪ್ರಯೋಗ ನಡೆಸಿಕೊಂಡು ಬಂದಿದ್ದ ಅವರು, 2024ರಲ್ಲಿ ಕಬ್ಬಿನ ಹಾಲನ್ನು ಗಾಜಿನ ಬಾಟಲಿಯಲ್ಲಿ ಒಂದು ವರ್ಷ ಕೆಡದಂತೆ ಇರಿಸುವ ತಂತ್ರಜ್ಞಾನ ಕಂಡುಹಿಡಿದಿದ್ದಾರೆ.

ನಂದಿನ ಹಾಲು ಮಾದರಿ: ಈಗಾಗಲೇ ಕೆಎಂಎಫ್‌ ಬಾದಾಮಿ, ಪಿಸ್ತಾ ಹಾಲನ್ನು ಗಾಜಿನ ಬಾಟಲಿಯಲ್ಲಿ ಕೆಡದಂತೆ ಇಟ್ಟು ಮಾರಾಟ ಮಾಡುತ್ತ ಬಂದಿದೆ. ಇದೇ ಮಾದರಿಯ ಬಾಟಲಿಗಳಲ್ಲಿ 200 ಎಂಎಲ್‌ ಕಬ್ಬಿನ ರಸವನ್ನು ಕೆಡದಂತೆ ಇರಿಸಿ ಪ್ಯಾಕ್‌ ಮಾಡುವ ಶುಗರ್‌ ಅಲೈಡ್‌ ಪ್ರೊಡಕ್ಟ್ ಪ್ರೈವೇಟ್‌ ಲಿಮಿಟೆಡ್‌ ಎಂಬ ಘಟಕವನ್ನು ಪಾಟೀಲ ಅವರು ಆರಂಭಿಸಿದ್ದಾರೆ.

ಇಲ್ಲಿ ಸಿದ್ಧಗೊಳ್ಳುವ 200 ಎಂಎಲ್‌ ಕಬ್ಬಿನ ಹಾಲಿನ ದರ 40 ರೂ.ಗಳಾಗಿದೆ. ಇದರಲ್ಲಿ ಯಾವುದೇ ರಾಸಾಯನಿಕ ಮಿಶ್ರಣ ಮಾಡಿಲ್ಲ. ಶೂನ್ಯ ಬ್ಯಾಕ್ಟೀರಿಯಾ, ನೈರ್ಮಲ್ಯದಲ್ಲೂ ಪ್ರಮಾಣೀಕರಣ, ಶುದ್ಧ ಔಷಧೀಯ ಗುಣವುಳ್ಳ ಕಬ್ಬಿನ ಹಾಲು ಉತ್ಪಾದನೆ ನಡೆಯುತ್ತಿದೆ.

ಏನು ಲಾಭ?:ಕಬ್ಬಿನ ಹಾಲು ಕೆಡದಂತೆ ಉಳಿಯಬೇಕಾದರೆ ಸಾವಯವ ಪದ್ಧತಿಯಲ್ಲಿ ಬೆಳೆದ ಕಬ್ಬು ಅತ್ಯಂತ ಅಗತ್ಯ. ಹೀಗಾಗಿ ಈ ಕಬ್ಬಿನ ಹಾಲು ಉತ್ಪಾದನಾ ಘಟಕಕ್ಕೆ ಇದೀಗ ವರ್ಷವಿಡಿ ಕಬ್ಬು ಪೂರೈಕೆ ಮಾಡಲು ಖಾನಾಪುರ ತಾಲೂಕಿನ ಸಾವಯವ ರೈತರು ಮುಂದೆ ಬಂದಿದ್ದಾರೆ. ಕಬ್ಬಿನ ರಸದಿಂದ ಕಾಮಾಲೆ ರೋಗ ಗುಣವಾಗುತ್ತದೆ. ಜೀರ್ಣಕ್ರಿಯೆಗೆ ಪ್ರೇರಕ ಶಕ್ತಿ ಒದಗಿಸುತ್ತದೆ. ತೂಕ ಇಳಿಸಲು ಸಹಕಾರಿ, ಎಲುಬು-ಕೀಲು-ದಂತ ಬಲಪಡಿಸುತ್ತದೆ. ತುರ್ತು ಶಕ್ತಿವರ್ಧಕವಾಗಿ ಕೆಲಸ ಮಾಡುತ್ತದೆ. ಆಯುರ್ವೇದ ಪದ್ಧತಿಯಲ್ಲಿ ಈಗಾಗಲೇ ಕಬ್ಬಿನ ಹಾಲು ಕಾಮಾಲೆ ರೋಗಕ್ಕೆ ದಿವ್ಯ ಔಷಧಿ ಎಂಬುದು ಸಾಬೀತಾಗಿರುವ ವಿಚಾರ. ಇದನ್ನು ಇನ್ನಷ್ಟು ಗಟ್ಟಿಗೊಳಿಸಿ ದೇಶಿ ಆಹಾರ ಮತ್ತು ದೇಶಿ ಔಷಧಿಯನ್ನಾಗಿ ಕಬ್ಬಿನ ಹಾಲು ಉತ್ಪಾದನೆಯಾಗಿ ರೈತರ ಕೈ ಹಿಡಿಯಬೇಕು ಎನ್ನುತ್ತಾರೆ ಪಾಟೀಲರು.

ಉತ್ಪನ್ನಕ್ಕೆ ಪೇಟೆಂಟ್‌: ಕಬ್ಬಿನ ಹಾಲು ವರ್ಷವಿಡೀ ಕೆಡದಂತೆ ಇಡುವ ತಂತ್ರಜ್ಞಾನ ಮತ್ತು ಉತ್ಪಾದನೆ ವಿಚಾರಕ್ಕೆ ಸಂಬಂಧಿಸಿ ಪಾಟೀಲ ದಂಪತಿಗೆ ಕಬ್ಬಿನ ಹಾಲಿನ ಹಕ್ಕುಸ್ವಾಮ್ಯ (ಪೇಟೆಂಟ್‌)ಲಭಿಸಿದೆ. 20 ವರ್ಷಗಳ ಕಾಲ ಇದರ ಮೇಲೆ ಯಾವುದೇ ಉತ್ಪಾದನೆ ಮಾಡಿದರೂ ಈ ದಂಪತಿಗೆ ಧನಸಹಾಯ ಪ್ರಾಪ್ತವಾಗಲಿದೆ. ಅಷ್ಟೇಯಲ್ಲ, ಸಾವಯವ ಬೆಲ್ಲ ಮತ್ತು ಪುಡಿಯನ್ನು ಕೂಡ ಇವರು ಉತ್ಪಾದನೆ ಮಾಡುತ್ತಿದ್ದು, ಪುಣೆ, ಮುಂಬೈನಲ್ಲಿ ಉತ್ತಮ ಮಾರುಕಟ್ಟೆ ಲಭಿಸಿದೆ.

ಸಾವಯವ ಕೃಷಿ ಜಾಗೃತಿ ಬೀಡಿ, ಖಾನಾಪುರ ಸುತ್ತಲಿನ ರೈತರಲ್ಲಿ ಸಾವಯವ ಕೃಷಿ ಜಾಗೃತಿ ಕಳೆದ ಎರಡು ದಶಕದಿಂದ ನಡೆಯುತ್ತಿದೆ. ಈಗಾಗಲೇ ಸಾವಯವ ಅಕ್ಕಿ, ಅರಿಷಿಣ, ಬೆಲ್ಲ ಸೇರಿದಂತೆ ಅನೇಕ ಆಹಾರ ಉತ್ಪನ್ನಗಳನ್ನು ಸುತ್ತಲಿನ ರೈತರು ಉತ್ಪಾದನೆ ಮಾಡುತ್ತಿದ್ದಾರೆ. ರಾಜ್ಯ-ಹೊರ ರಾಜ್ಯಕ್ಕೂ ಕಳಿಸುತ್ತಿದ್ದಾರೆ. ಇದೀಗ ಅತ್ಯಂತ ಕುಗ್ರಾಮವಾದ ಕೆರವಾಡದಲ್ಲಿಯೇ ತಾವು ಬೆಳೆದ ಕಬ್ಬಿಗೆ ಮೌಲ್ಯವರ್ಧನೆ ಮಾಡುವ ಮತ್ತೊಂದು ಹೊಸ ವಿಧಾನ ಶೋಧಿಸಿದ ಈ ರೈತರು ಇತರರಿಗೆ ಮಾದರಿಯಾಗಿ ನಿಂತಿದ್ದಾರೆ.

ಯುವ ಪೀಳಿಗೆ ಕೃಷಿಯಿಂದ ಲಾಭವಿಲ್ಲ, ಇದರಿಂದ ಉಪಯೋಗವಿಲ್ಲ ಎನ್ನುತ್ತ ಕಾಲಹರಣ ಮಾಡುತ್ತಿದ್ದಾರೆ. ಹೊಸ ವಿಚಾರಗಳನ್ನು ನಮ್ಮಷ್ಟಕ್ಕೆ ನಾವೇ ಶೋಧಿಸಿಕೊಂಡು ಕೆಲಸ ಮಾಡುತ್ತ ಹೋದರೆ ಖಂಡಿತವಾಗಿಯೂ ಕೃಷಿ ನಮ್ಮನ್ನು ಉತ್ತುಂಗಕ್ಕೆ ಒಯ್ಯುತ್ತದೆ.
●ಆರ್‌.ಐ. ಪಾಟೀಲ
ಪ್ರಗತಿಪರ ರೈತೋದ್ಯಮಿ, ಕೆರವಾಡ

*ಬಸವರಾಜ್‌ ಹೊಂಗಲ್‌

ಟಾಪ್ ನ್ಯೂಸ್

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

CM-preess

MUDA Scam: ಹೈಕೋರ್ಟ್‌ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮೌಲ್ಯಮಾಪನ ಬಹಿಷ್ಕರಿಸಿ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಪ್ರತಿಭಟನೆ

Belagavi: ಮೌಲ್ಯಮಾಪನ ಬಹಿಷ್ಕರಿಸಿ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಪ್ರತಿಭಟನೆ

1

Belagavi: ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

Balachandra

Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

21

Saligrama: ಚತುಷ್ಪಥ ರಸ್ತೆಯ ಅನಧಿಕೃತ  ಒತ್ತುವರಿ ತೆರವಿಗೆ ಅಂತಿಮ ಹಂತದ ಸಿದ್ಧತೆ

18(1)

Udupi: ಕತ್ತಲಲ್ಲಿ ಶೀಂಬ್ರಾ ಸೇತುವೆ: ಅಕ್ರಮಗಳ ಅಡ್ಡೆ!

3 ಡಿ ಮ್ಯೂರಲ್ ಹೃದಯಗಳೊಂದಿಗೆ ಕೆಂಪಾದ ಬೆಂಗಳೂರು ನಗರ

3 ಡಿ ಮ್ಯೂರಲ್ ಹೃದಯಗಳೊಂದಿಗೆ ಕೆಂಪಾದ ಬೆಂಗಳೂರು ನಗರ

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.