Dharwad: ಪರ್ಸ್ ಮಾರಾಟ ನೆಪದಲ್ಲಿ ಡ್ರಗ್ಸ್ ಸಾಗಾಟ; ನೈಜೀರಿಯಾ ಪ್ರಜೆ ಬಂಧನ
ದೇಶದ ವಿವಿಧೆಡೆ ಕೊಕೇನ್ ಮಾರಾಟ ಜಾಲ ಹೊಂದಿದ್ದ ವ್ಯಕ್ತಿ, ರೈಲ್ವೆ ನಿಲ್ದಾಣ ಬಳಿಯಲ್ಲೇ ಬಾಡಿಗೆ ಮನೆಯಲ್ಲಿ ವಾಸ
Team Udayavani, Sep 14, 2024, 10:53 PM IST
ಧಾರವಾಡ: ಮಾದಕ ವಸ್ತು ಮಾರಾಟ ಜಾಲದ ಕೊಂಡಿಯಾಗಿ ಕೆಲಸ ಮಾಡುತ್ತಿದ್ದ ನೈಜೀರಿಯಾ ಪ್ರಜೆಯೊಬ್ಬನನ್ನು ಧಾರವಾಡದ ಮಾಳಮಡ್ಡಿಯಲ್ಲಿ ಕೇಂದ್ರ ಗೃಹ ಇಲಾಖೆ ಅಧೀನದ ನಾರ್ಕೋಟಿಕ್ ಕಂಟ್ರೊಲ್ ಬೆಂಗಳೂರು ಬ್ಯುರೋದ ಅಧಿಕಾರಿಗಳು ಬಂಧಿಸಿದ್ದಾರೆ.
ಧಾರವಾಡ ಮಾಳಮಡ್ಡಿ 3ನೇ ಕ್ರಾಸ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನೈಜೀರಿಯಾ ಪ್ರಜೆ, ಬಾಡಿಗೆ ಮನೆಯಲ್ಲಿದ್ಧೇ ಕೊಕೇನ್ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ದೇಶದ ವಿವಿಧೆಡೆ ಕೊಕೇನ್ ಮಾರಾಟ ಜಾಲ ಹೊಂದಿದ್ದ ವ್ಯಕ್ತಿ ರೈಲ್ವೆ ನಿಲ್ದಾಣ ಬಳಿಯಲ್ಲಿಯೇ ಬಾಡಿಗೆ ಮನೆ ಮಾಡಿದ್ದ. ಅಧಿಕಾರಿಗಳಿಗೆ ಈತನ ಮನೆಯಲ್ಲಿ ಅಪಾರ ಪ್ರಮಾಣದ ಲೇಡಿಸ್ ವ್ಯಾನಿಟಿ ಬ್ಯಾಗ್, ಪರ್ಸ್ ಗಳು ಪತ್ತೆಯಾಗಿವೆ.
ಪರ್ಸ್ ಮಾರಾಟದ ನೆಪದಲ್ಲಿ ಕೊಕೇನ್ ಸಾಗಿಸುತ್ತಿದ್ದ ಶಂಕೆ ತೂಕದ ಯಂತ್ರ, ಪ್ಯಾಕಿಂಗ್ ಯಂತ್ರಗಳೂ ಪತ್ತೆಯಾಗಿವೆ. ಬಾಡಿಗೆ ಮನೆಯಲ್ಲಿಯೇ ಕೊಕೇನ್ ಪ್ಯಾಕ್ ಮಾಡಿ, ಪರ್ಸ್ ಗಳಲ್ಲಿ ಹಾಕಿ ಸಾಗಿಸುತ್ತಿದ್ದ ಶಂಕೆ ಇದ್ದು, ಕಳೆದ ಐದಾರು ವರ್ಷಗಳಿಂದ ಧಾರವಾಡದಲ್ಲಿ ವಾಸವಾಗಿದ್ದರೂ ಕೊಕೇನ್ ಸಾಗಾಟ ಗೋಪ್ಯವಾಗಿ ನಡೆಸುತ್ತಿದ್ದ ಎನ್ನಲಾಗಿದೆ.
ಮಾರ್ಟಿನ್, ಮ್ಯಾಥೂ, ಟೀಮ್ ಎಂದು ವಿವಿಧ ಹೆಸರುಗಳಲ್ಲಿ ಗುರುತಿಸಿಕೊಂಡಿದ್ದ ವ್ಯಕ್ತಿ, ಉನ್ನತ ವ್ಯಾಸಂಗಕ್ಕಾಗಿ ಬಂದಿರೋದಾಗಿ ಹೇಳಿ ಬಾಡಿಗೆ ಮನೆ ಪಡೆದಿದ್ದ. ಬೇರೆ ಬೇರೆ ರಾಜ್ಯಗಳಲ್ಲಿ ಕೊಕೇನ್ ಮಾರಾಟ ಜಾಲದ ತನಿಖೆ ನಡೆಸುವಾಗ ನೈಜೀರಿಯಾ ಪ್ರಜೆಯ ಪಾತ್ರ ಪತ್ತೆಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Minister ಕೆ.ಎನ್. ರಾಜಣ್ಣಗೆ ಪ್ರಾಸಿಕ್ಯೂಷನ್ ಸಂಕಷ್ಟ?
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.