Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್ ಭವಿಷ್ಯ
ಬಿಜೆಪಿ ನಾಯಕರ ವಿರುದ್ದ ಚುನಾವಣಾ ಬಾಂಡ್ ದೂರು ದಾಖಲಿಸಿ ಸಿಎಂ ಸಿದ್ದರಾಮಯ್ಯರಿಂದ ಸೇಡಿನ ರಾಜಕಾರಣ: ವಿಪಕ್ಷ ಉಪನಾಯಕ
Team Udayavani, Sep 30, 2024, 9:52 PM IST
ಧಾರವಾಡ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಭ್ರಷ್ಟಾಚಾರ ರಾಜ್ಯದ ಜನತೆಗೆ ಗೊತ್ತಿದ್ದು, ಹೀಗಾಗಿ ಕೆಲವೇ ದಿನಗಳಲ್ಲಿ ನಮ್ಮ ರಾಜ್ಯಕ್ಕೆ ಹೊಸ ಸಿಎಂ ಬರುತ್ತಾರೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಭವಿಷ್ಯ ನುಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಭ್ರಷ್ಟಾಚಾರದಲ್ಲಿಯೇ ಮುಳುಗಿರುವ ಕಾಂಗ್ರೆಸ್ ನಾಯಕರೇ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಬೇಡಿ. ಸಿಎಂ ಹಾಗೂ ಇಡೀ ಕಾಂಗ್ರೆಸ್ ಪರಿವಾರವೇ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಅದಕ್ಕಾಗಿಯೇ ಸಿಎಂ ಅವರಿಗೆ ಈಗ ಇಂತಹ ಸ್ಥಿತಿ ಬಂದಿದೆ ಎಂದರು.
ಚುನಾವಣಾ ಬಾಂಡ್ ಎಫ್ಐಆರ್ ಸೇಡಿನ ರಾಜಕಾರಣ:
ಚುನಾವಣಾ ಬಾಂಡ್ ಮುಂದಿಟ್ಟು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ರಾಜ್ಯದ ಬಿಜೆಪಿ ನಾಯಕರ ವಿರುದ್ದ ದೂರು ದಾಖಲು ಮಾಡಿರುವ ಸಿಎಂ ಸಿದ್ದರಾಮಯ್ಯ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಅಷ್ಟೇ. ಕಾನೂನು ಅಡಿಯ ವ್ಯವಸ್ಥೆಯಲ್ಲಿಯೇ ಹಣ ಪಡೆಯಲಾಗಿದೆ. ಇದರಡಿ ಕಾಂಗ್ರೆಸ್ 1,500 ಕೋಟಿ, ಟಿಎಂಸಿ 1600, ಡಿಎಂಕೆ 1,100 ಕೋಟಿ ಪಡೆದಿದ್ದು, ಹಾಗಾದರೆ ಈ ಪಕ್ಷಗಳ ಮೇಲೆ ಏಕೆ ದೂರು ದಾಖಲಿಸಿಲ್ಲ ಎಂದು ಪ್ರಶ್ನಿಸಿದರು.
ಉದ್ಯಮಿಗಳು ಕಾನೂನು ಅಡಿ ಪಕ್ಷಗಳಿಗೆ ದೇಣಿಗೆ ನೀಡಿದ್ದು, ಆದರೆ ಸಿಎಂ ಹಾಗೂ ಕಾಂಗ್ರೆಸ್ ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಸಿಎಂಗೆ ನಾನು ವಿನಂತಿ ಮಾಡುತ್ತೇನೆ. ಮೊದಲು ನೀವು ಹೋಗಿ ರಾಹುಲ್ ಗಾಂಧಿ ಮೇಲೆ ದೂರು ದಾಖಲಿಸಿರಿ. ಅವರೂ ರೂ.1500 ಕೋಟಿ ದೇಣಿಗೆ ಪಡೆದಿದ್ದಾರೆ. ಇವರ ಜತೆಗೆ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರ ಮೇಲೂ ಹಾಕಿ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: 14 ನಿವೇಶನ ಹಿಂದಿರುಗಿಸುವುದಾಗಿ ಮುಡಾ ಆಯುಕ್ತರಿಗೆ ಸಿಎಂ ಪತ್ನಿ ಪತ್ರ!
Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ
Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್ ಸೇರಿ ಹಲವರ ವಿರುದ್ಧದ ಎಫ್ಐಆರ್ಗೆ ತಡೆ
Belgavi: ಹೊಟೇಲ್ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್ಎಫ್ ಯೋಧ ಅರೆಸ್ಟ್
Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.