ಟಿ20 ವಿಶ್ವಕಪ್ಗೆ ಧೋನಿ ಅನುಮಾನ!
Team Udayavani, Apr 14, 2020, 5:30 AM IST
ಹೊಸದಿಲ್ಲಿ: ಪ್ರಸಕ್ತ ವರ್ಷ ಐಪಿಎಲ್ ನಡೆಯದಿದ್ದರೆ ವಿಕೆಟ್ ಕೀಪರ್ ಕಮ್ ಬ್ಯಾಟ್ಸ್ ಮನ್ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾಗೆ ಮರಳುವುದು ಕ್ಷೀಣವಾಗಲಿದೆ ಎಂದು ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.
ಸ್ಟಾರ್ ನ್ಪೋರ್ಟ್ಸ್ ಸಂದರ್ಶನದಲ್ಲಿ ಮಾತನಾಡಿದ ಗಂಭೀರ್, ಒಂದು ವೇಳೆ ಈ ವರ್ಷ ಐಪಿಎಲ್ ನಡೆಯದಿದ್ದರೆ, ಧೋನಿ ತಂಡಕ್ಕೆ ಮರಳುವುದು ತುಂಬಾ ಕಠಿನ. ಏಕೆಂದರೆ ಸುಮಾರು ಒಂದೂವರೆ ವರ್ಷದಿಂದ ಧೋನಿ ಕ್ರಿಕೆಟ್ನಲ್ಲಿ ಪಾಲ್ಗೊಂಡಿರದ ಕಾರಣ ಅವರ ಆಯ್ಕೆ ಕಷ್ಟ. ಹೀಗಾಗಿ ಅವರ ಸ್ಥಾನಕ್ಕೆ ಕೆ.ಎಲ್ ರಾಹುಲ್ ಸೂಕ್ತ ಸಂಭಾವ್ಯ ಆಟಗಾರರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಧೋನಿಗಿಂತ ರಾಹುಲ್ಗೆ ಮೊದಲ ಆದ್ಯತೆ
ನಾನು ಭಾರತೀಯ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥನಾಗಿದ್ದರೆ ಧೋನಿಯನ್ನು ಟಿ20 ವಿಶ್ವಕಪ್ಗೆ ಆಯ್ಕೆ ಮಾಡುತ್ತಿರಲಿಲ್ಲ ಎಂದು ಆಯ್ಕೆ ಸಮಿತಿಯ ಮಾಜಿ ಪ್ರಧಾನ ಮುಖ್ಯಸ್ಥ ಕೃಷ್ಣಮಾಚಾರಿ ಶ್ರೀಕಾಂತ್ ಅಭಿಪ್ರಾಯ ಪಟ್ಟಿದ್ದಾರೆ.
ಸದ್ಯದ ಮಟ್ಟಿಗೆ ಟೀಮ್ ಇಂಡಿಯಾದ ವಿಕೆಟ್ ಕೀಪಿಂಗ್ಗೆ ಕೆ.ಎಲ್. ರಾಹುಲ್ ಸೂಕ್ತ ಆಟಗಾರ. ಕಳೆದ ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಲ್ಲಿ ರಾಹುಲ್ ಉತ್ತಮವಾಗಿ ಕೀಪಿಂಗ್ ನಡೆಸಿದ್ದಾರೆ. ಆದ್ದರಿಂದ ಅವರನ್ನು ನಾನು ಆಯ್ಕೆ ಮಾಡುವೆ. ಉಳಿದಂತೆ ರಿಷಭ್ ಪಂತ್ ಅವರಲ್ಲಿ ಅಪಾರ ಪ್ರತಿಭೆ ಇದೆ. ಅವರನ್ನು ಕಡೆಗಣಿಸಲು ಸಾಧ್ಯವಿಲ್ಲ. ಆದರೆ ಅವರನ್ನು ತಂಡದ ಒಂದು ಭಾಗವಾಗಿ ಆಯ್ಕೆಮಾಡಿದರೂ ಕೀಪಿಂಗ್ ಜವಾಬ್ದಾರಿಯನ್ನು ರಾಹುಲ್ಗೆ ವಹಿಸಲಿದ್ದೇನೆ ಎಂದು ಅವರು ಹೇಳಿದ್ದಾರೆ.
ಇದರಲ್ಲಿ ಯಾವುದೇ ತರದ ರಾಜಕೀಯವಿಲ್ಲ. ಐಪಿಎಲ್ ನಡೆಯದೇ ಇದ್ದರೆ ವಿಶ್ವಕಪ್ ತಂಡಕ್ಕೆ ಧೋನಿ ಆಯ್ಕೆ ಖಂಡಿತಾ ಸಾಧ್ಯವಿಲ್ಲ. ಅವರ ಫಿಟ್ನೆಸ್ ಬಗ್ಗೆ ನನಗೆ ಅನುಮಾನವಿಲ್ಲ. ಅವರೊಬ್ಬ ದಿಗ್ಗಜ ಹಾಗೂ ಅದ್ಭುತ ಆಟಗಾರ ಕೂಡ ಹೌದು. ನಾನು ಧೋನಿಯ ಬಹುದೊಡ್ಡ ಅಭಿಮಾನಿ. ಆದರೆ ವಿಶ್ವಕಪ್ನಂತಹ ಮಹತ್ವದ ಟೂರ್ನಿ ವೇಳೆ ವೈಯಕ್ತಿಕ ಅಭಿಪ್ರಾಯವನ್ನು ದೂರವಿಟ್ಟು ತಂಡದ ಒಳಿತಿನ ಬಗ್ಗೆ ಯೋಚಿಸಬೇಕು ಎಂದು ಶ್ರೀಕಾಂತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್ ಪ್ರವೇಶಿಸಿದ ಭಾರತ ಹಾಕಿ ತಂಡ
International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು
ENGvsAUS: ಏಕದಿನ ಸರಣಿಗೂ ಬಟ್ಲರ್ ಅಲಭ್ಯ; ಎಸ್ಆರ್ಎಚ್ ಆಟಗಾರನಿಗೆ ನಾಯಕತ್ವ
B–G Trophy: ಈತನೇ ಭಾರತದ ಮುಂದಿನ ಸೂಪರ್ ಸ್ಟಾರ್ ಎಂದ ಸ್ಟೀವ್ ಸ್ಮಿತ್, ಸ್ಟಾರ್ಕ್
Asian Champions Trophy ಸೆಮಿಫೈನಲ್ : ಕೊರಿಯಾ ವಿರುದ್ಧ ಭಾರತ ಫೇವರಿಟ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.