ಜ್ವಲಂತ ಸಮಸ್ಯೆ ನಿವಾರಣೆಗೆ ಗಮನ ಹರಿಸಿ: ಸುಗ್ರಾಮ ಸಮಾವೇಶದಲ್ಲಿ ಜಿಲ್ಲಾಧಿಕಾರಿ ಕರೆ


Team Udayavani, Apr 26, 2022, 6:25 AM IST

ಜ್ವಲಂತ ಸಮಸ್ಯೆ ನಿವಾರಣೆಗೆ ಗಮನ ಹರಿಸಿ: ಸುಗ್ರಾಮ ಸಮಾವೇಶದಲ್ಲಿ ಜಿಲ್ಲಾಧಿಕಾರಿ ಕರೆ

ಮಂಗಳೂರು: ಗ್ರಾಮ ಪಂಚಾಯತ್‌ ಸದಸ್ಯರು ತಮ್ಮ ಕ್ಷೇತ್ರದ ಅಭಿವೃದ್ಧಿ ಚಟುವಟಿಕೆ ಜತೆಗೆ ಸಮಾಜದ ಇತರ ಜ್ವಲಂತ ಸಮಸ್ಯೆಗಳ ನಿವಾರಣೆಯ ಕಡೆಗೂ ಗಮನ ಹರಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಸಲಹೆ ನೀಡಿದ್ದಾರೆ.

“ಜಾಗೃತ ನಾರಿ- ಪ್ರಗತಿಗೆ ದಾರಿ’ ಎಂಬ ಧ್ಯೇಯ ವಾಕ್ಯದಡಿ ಜನ ಶಿಕ್ಷಣ ಟ್ರಸ್ಟ್‌, ದಕ್ಷಿಣ ಕನ್ನಡ ಜಿ.ಪಂ., ಹಂಗರ್‌ ಪ್ರಾಜೆಕ್ಟ್ ಮತ್ತು ಎಪಿಪಿಐ ಸಹಯೋಗದಲ್ಲಿ ಸೋಮವಾರ ಉರ್ವಸ್ಟೋರ್‌ನಲ್ಲಿರುವ ದ.ಕ. ಜಿ.ಪಂ.ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಬಂಟ್ವಾಳ, ಉಳ್ಳಾಲ, ಪುತ್ತೂರು, ಕಡಬ ತಾಲೂಕುಗಳ ಗ್ರಾ.ಪಂ. ಚುನಾಯಿತ ಮಹಿಳಾ ಸದಸ್ಯರ ಜಿಲ್ಲಾ ಮಟ್ಟದ “ಸುಗ್ರಾಮ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳು, ವಿಶೇಷವಾಗಿ ಪ.ಜಾತಿ, ಪ. ಪಂಗಡದವರು ಇದ್ದಾರೆ. ಉತ್ತರ ಕರ್ನಾಟಕ ಮತ್ತು ಉತ್ತರ ಭಾರತದಿಂದ ಆಗಮಿಸಿದ ವಲಸೆ ಕಾರ್ಮಿಕರ ಗಣನೀಯ ಸಂಖ್ಯೆಯ ಮಕ್ಕಳು ಶಾಲೆಯಿಂದ ಹೊರಗೆ ಉಳಿದಿದ್ದಾರೆ. ಬಾಲ್ಯ ವಿವಾಹ ಪ್ರಕರಣಗಳು ಕೆಲವು ಕಡೆ ವರದಿಯಾಗುತ್ತವೆ. ಮುಟ್ಟಿಗೆ ಸಂಬಂಧಿಸಿದ ಸಮಸ್ಯೆಯಿಂದ ಶೇ. 50 ಅಧಿಕ ಮಹಿಳೆಯರು ಬಳಲುತ್ತಿದ್ದಾರೆ. ಅಧಿಕ ರಕ್ತಸ್ರಾವದಿಂದ ಅನೇಕ ಹೆಣ್ಮಕ್ಕಳು ತೊಂದರೆಗೆ ಸಿಲುಕಿರುವುದನ್ನು ವೈದ್ಯನಾಗಿ ನಾನು ಅರ್ಥ ಮಾಡಿಕೊಳ್ಳಬಲ್ಲೆ. ಮುಟ್ಟಿನಂತಹ ಸಮಸ್ಯೆಗಳ ಬಗ್ಗೆ ಕೂಡ ಮಹಿಳೆಯರು ಮುಜುಗರವಿಲ್ಲದೆ ಮಾತನಾಡುವ ಪರಿಸ್ಥಿತಿ ನಿರ್ಮಾಣ ವಾಗಬೇಕು ಎಂದು ಡಿ.ಸಿ. ಹೇಳಿದರು.

ಪಂ.ರಾಜ್‌ ಕಾಯ್ದೆಯಡಿ ಮಹಿಳೆ ಯರಿಗೆ ಹೆಚ್ಚಿನ ಜವಾಬ್ದಾರಿಗಳಿವೆ. ಕುಟುಂಬ ನಡೆಸುವುದರ ಜತೆಗೆ ಸಮಾಜ ಸ್ವಾಸ್ಥ್ಯ ಮತ್ತು ಅಭಿವೃದ್ಧಿಯಲ್ಲಿ ಏಕಕಾಲ ದಲ್ಲಿ ಶ್ರಮಿಸುವ ಮಹಿಳೆಯರಿಗೆ ದೇವರ ಸ್ಥಾನವಿದೆ. ಜನಶಿಕ್ಷಣ ಟ್ರಸ್ಟ್‌ ಸಮಾಜದ ಜ್ವಲಂತ ಸಮಸ್ಯೆಗಳ ಬಗ್ಗೆ ಜನ ಜಾಗೃತಿ ಮೂಡಿಸುವಲ್ಲಿ ನಿರಂತರವಾಗಿ ತೊಡಗಿಸಿ ಕೊಂಡಿರುವುದು ಶ್ಲಾಘನೀಯ ಎಂದರು.

ಗ್ರಾ.ಪಂ. ಸದಸ್ಯರ ಗೌರವಧನ ದುಪ್ಪಟ್ಟು ಮಾಡುವ ಬಗ್ಗೆ ಮತ್ತು ಅಧ್ಯಕ್ಷ, ಉಪಾಧ್ಯಕ್ಷರ ಗೌರವಧನ ಹೆಚ್ಚಳದ ಕುರಿತು ವಿಧಾನಸಭೆಯಲ್ಲಿ ಪ್ರಸ್ತಾವಿಸುವುದಾಗಿ ಮುಖ್ಯ ಅತಿಥಿ ಯು.ಟಿ. ಖಾದರ್‌ ಹೇಳಿದರು.

ಗ್ರಾ.ಪಂ. ಮಟ್ಟದಲ್ಲಿ ಶೇ. 50 ಮಹಿಳಾ ಮೀಸಲಾತಿ ಕಲ್ಪಿಸಿದ್ದರಿಂದ ಇಡೀ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಯಾಗಿದೆ ಎಂದು ಜಿ.ಪಂ. ಸಿಇಒ ಡಾ| ಕುಮಾರ್‌ ಅಭಿನಂದಿಸಿದರು.

ಶೀನ ಶೆಟ್ಟಿ ಮತ್ತು ಕೃಷ್ಣ ಮೂಲ್ಯ ಸಂವಾದ ನಡೆಸಿಕೊಟ್ಟರು. ಚೇತನ್‌ ಕಾರ್ಯಕ್ರಮ ನಿರ್ವಹಿಸಿದರು. ಪುತ್ತೂರು ಮತ್ತು ಕಡಬ ತಾಲೂಕು ಸುಗ್ರಾಮ ಸಂಘದ ಅಧ್ಯಕ್ಷೆ ಮಾಲತಿ ಎನ್‌.ಕೆ. ಹಾಗೂ ಬಂಟ್ವಾಳ ಮತ್ತು ಉಳ್ಳಾಲ ತಾಲೂಕು ಸುಗ್ರಾಮ ಸಂಘದ ಅಧ್ಯಕ್ಷೆ ಶಕೀಲಾ, ಸೋಮಶೇಖರ್‌ ವೇದಿಕೆಯಲ್ಲಿದ್ದರು.

ಲಿಂಗ ಸಮಾನತೆ, ಸಾಮಾಜಿಕ ನ್ಯಾಯ, ಗ್ರಾಮ ಸಭೆಗಳ ಬಲವರ್ಧನೆ, ಸ್ವಚ್ಛ, ಕಸಮುಕ್ತ ಗ್ರಾಮ, ಸುಸ್ಥಿರ ಅಭಿವೃದ್ಧಿ ಬಗ್ಗೆ ಮಹಿಳಾ ಸದಸ್ಯರು ಸಂಕಲ್ಪ ಕೈಗೊಂಡರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.