
Love: ಗೆಳೆಯನನ್ನು ವಿವಾಹವಾಗಲು ಪಾಕ್ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್
ನಸ್ರುಲ್ಲಾ ಜತೆ ವಿವಾಹವಾಗಿರುವುದಕ್ಕೆ ಯಾವುದೇ ಸಾಕ್ಷ್ಯವನ್ನು ಅಂಜು ನೀಡಿಲ್ಲ.
Team Udayavani, Nov 30, 2023, 3:42 PM IST

ನವದೆಹಲಿ: ಕಳೆದ ಮಾರ್ಚ್ ನಲ್ಲಿ ಫೇಸ್ ಬುಕ್ ಗೆಳೆಯನನ್ನು ವಿವಾಹವಾಗಲು ಪಾಕಿಸ್ತಾನಕ್ಕೆ ತೆರಳಿದ್ದ ಮಹಿಳೆ ಅಂಜು ಅಲಿಯಾಸ್ ಫಾತಿಮಾ ಐದು ತಿಂಗಳ ಬಳಿಕ ಭಾರತಕ್ಕೆ ವಾಪಸ್ ಬಂದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Karnataka; ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿದ್ದರಾಮಯ್ಯ
ವಾಘಾ ಗಡಿ ಮೂಲಕ ಭಾರತಕ್ಕೆ ಆಗಮಿಸಿರುವ ಅಂಜುವನ್ನು ಐಬಿ ಮತ್ತು ಪಂಜಾಬ್ ಗುಪ್ತಚರ ಇಲಾಖೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಅಂಜು ತಾನು ಭಾರತದಲ್ಲಿರುವ ಪತಿ ಅರವಿಂದ್ ಗೆ ವಿಚ್ಛೇದನ ನೀಡಿ, ತನ್ನಿಬ್ಬರು ಮಕ್ಕಳನ್ನು ಪಾಕಿಸ್ತಾನಕ್ಕೆ ಕರೆದೊಯ್ಯಲು ಭಾರತಕ್ಕೆ ಬಂದಿರುವುದಾಗಿ ತಿಳಿಸಿದ್ದಾಳೆ.
ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ನಸ್ರುಲ್ಲಾ ಎಂಬಾತನನ್ನು ವಿವಾಹವಾಗುವ ನಿಟ್ಟಿನಲ್ಲಿ ಅಂಜು ಪಾಕಿಸ್ತಾನದ ಖೈಬರ್ ಫಖ್ತುಂಕ್ವಾಕ್ಕೆ ತೆರಳಿದ್ದಳು. ಅಲ್ಲಿ ಕ್ರಿಶ್ಚಿಯನ್ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡ ಅಂಜು ಫಾತಿಮಾ ಎಂದು ಹೆಸರನ್ನು ಬದಲಾಯಿಸಿಕೊಂಡು ನಸ್ರುಲ್ಲಾನನ್ನು ವಿವಾಹವಾಗಿದ್ದಳು.
ವಿಚಾರಣೆ ವೇಳೆ ಪಾಕ್ ಪ್ರಜೆ ನಸ್ರುಲ್ಲಾ ಜತೆ ವಿವಾಹವಾಗಿರುವುದಕ್ಕೆ ಯಾವುದೇ ಸಾಕ್ಷ್ಯವನ್ನು ಅಂಜು ನೀಡಿಲ್ಲ. ಅಲ್ಲದೇ ತನಗೆ ಪಾಕ್ ನ ಸೇನಾಪಡೆಯ ಜತೆ ಯಾವುದೇ ಸಂಪರ್ಕ ಇಲ್ಲ ಎಂದು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಅಂಜು ಅಳ್ವಾರ್ ನಿವಾಸಿಯಾಗಿದ್ದು, ಭಿವಾಡಿಯಲ್ಲಿ ಪತಿ ಅರವಿಂದ್ ಹಾಗೂ ಇಬ್ಬರು ಮಕ್ಕಳ ಜತೆ ವಾಸವಾಗಿದ್ದಳು. ಪಾಕಿಸ್ತಾನಕ್ಕೆ ತೆರಳಿ ಅಂಜು ನಸ್ರುಲ್ಲಾನನ್ನು ವಿವಾಹವಾದ ನಂತರ ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ಫೋಟೋ ವೈರಲ್ ಆಗಿತ್ತು.
ಬುಧವಾರ ಸಂಜೆ ವಿಚಾರಣೆ ಬಳಿಕ ಅಂಜುಗೆ ನವದೆಹಲಿಗೆ ತೆರಳಲು ಪೊಲೀಸರು ಅನುಮತಿ ನೀಡಿದ್ದು, ಆಕೆ ಭಿವಾಡಿಗೆ ತೆರಳಿರುವ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ

BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.