Deepavali 2023; ಹಳ್ಳಿಗಳಲ್ಲಿ ಆಚರಿಸುವ ಪಾಂಡವರ ಪೂಜೆ
ಶೆಗಣಿಯಿಂದ ಕೋಟೆಯನ್ನು ಮಾಡಿ ಅದರಲ್ಲಿಐದು ಜನ ಪಂಚರನ್ನು ಪ್ರತಿಷ್ಠಾಪಿಸುತ್ತಾರೆ
Team Udayavani, Nov 13, 2023, 4:35 PM IST
ದೀಪಾವಳಿ ಕೂಡ ತನ್ನದೇ ಆದ ವಿಶೇಷತೆ ಹೊಂದಿದೆ. ಹಿಂದೂಗಳು ತಮ್ಮ ಧಾರ್ಮಿಕ ನಂಬಿಕೆ ಮತ್ತು ತಣ್ತೀಗಳಿಗೆ ಅನುಸಾರವಾಗಿ ದೀಪಾವಳಿ ಆಚರಿಸುತ್ತಾರೆ. ಕತ್ತಲೆಯು ನಮ್ಮಲ್ಲಿ ಅಧೈರ್ಯ ತುಂಬುತ್ತದೆ. ನಮ್ಮ ಆತ್ಮವಿಶ್ವಾಸ ಕುಗ್ಗಿಸುತ್ತದೆ. ಆದ್ದರಿಂದ ಜನರು ಹಣತೆಗಳನ್ನು ಹಚ್ಚಿ ಭರವಸೆಯ ಬೆಳಕು ಸ್ವಾಗತಿಸುತ್ತಾರೆ.
ಹಬ್ಬಗಳ ಆಚರಣೆ ಒಂದು ಪ್ರದೇಶದಿಂದ ಮತ್ತೂಂದು ಪ್ರದೇಶಕ್ಕೆ ಭಿನ್ನವಾಗಿರುತ್ತವೆ. ಇಂದು ಹಳ್ಳಿಗಳಲ್ಲಿ ಕಾಣುವ ಈ ಪಾಂಡವರ ಪೂಜೆ ಇಂದು ಗ್ರಾಮೀಣ ಹೆಣ್ಣು ಮಕ್ಕಳ ಭಾಷೆಯಲ್ಲಿ ಅದು ಪಾಂಡ್ರವ್ವ ಪೂಜೆ ಎಂದು ರೂಢಿಯಲ್ಲಿ ಬಂದಿದೆ. ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಸಗಣಿಯಿಂದ ಪಾಂಡ್ರವ್ವರ ಮಾಡಿ ಪೂಜಿಸುವ ಹಿಂದಿರುವ ಕಾರಣ ಉತ್ತಮ ಬೆಳೆ ಬೆಳೆಯಲು ಅಗತ್ಯವಾಗಿರುವ ಗೊಬ್ಬರವನ್ನು ಪೂಜಿಸುವುದೇ ಆಗಿದೆ. ಸಗಣಿಯಿಂದ ಸಾಂಕೇತಿಕವಾಗಿ ಪಾಂಡವರನ್ನು ಮಾಡಿ ಪೂಜಿಸುವ ಸಂಪ್ರದಾಯ ಅನೇಕ ವರ್ಷಗಳಿಂದ ಆಚರಿಸಲ್ಪಡುತ್ತಿದೆ.
ಅಂತೆಯೇ ದೀಪಾವಳಿ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಹಾಕುವ ಪಾಂಡವರು (ಪಾಂಡ್ರವ್ವ)ಗಳು ಆಚರಣೆ ನಾಗರೀಕತೆ
ಬೆಳೆದಂತೆ ಕಡಿಮೆಯಾಗುತ್ತ ಬರುತ್ತಿದೆ. ಇದು ಹಳ್ಳಿಗಳಲ್ಲಿ ಮಾತ್ರ ಹೆಚ್ಚಾಗಿ ಕಂಡು ಬರುವ ಆಚರಣೆಯಾಗಿದೆ.
ಕೆಲವು ಭಾಗದಲ್ಲಿ ಶೆಗಣಿಯಿಂದ ಕೋಟೆಯನ್ನು ಮಾಡಿ ಅದರಲ್ಲಿಐದು ಜನ ಪಂಚರನ್ನು ಪ್ರತಿಷ್ಠಾಪಿಸುತ್ತಾರೆ. ಇದು ಪಂಚರ ಪೂಜೆ ಹಾಗೂ ರಕ್ಷಣೆಯ ಸಂಕೇತ. ಜನರು ಪಂಚರ ರಕ್ಷಣೆ ಮಾಡಿದರೆ ಪಂಚರು ಜನರ ರಕ್ಷಣೆ ಮಾಡುತ್ತಾರೆ ಎಂಬುದು ವಿಶ್ವಾಸ. ಇನ್ನು ಪಂಚರು ಅಂದರೆ ಐದು ಜನ. ಪಾಂಡವರು ಕೂಡಾ ಐದು ಜನ ಆದ್ದರಿಂದ ಸಾಮಾನ್ಯವಾಗಿ ಯಾವುದೇ ಪ್ರದೇಶದಲ್ಲಿ ಐದು ಜನ ಇದ್ದರೆ ಅವರನ್ನು ಪಂಚ ಪಾಂಡವರು ಎಂದು ಕರೆಯುತ್ತಾರೆ. ಇದೇ ಕಾರಣಕ್ಕೆ ಇದಕ್ಕೆ ಪಾಂಡವರು (ಪಾಂಡ್ರವ್ವ) ಎಂಬ ಹೆಸರೂ ಬಂದಿರಬಹುದು.
ದೀಪಾವಳಿ ಹಬ್ಬಕ್ಕೂ ಪೂರ್ವ ಮೊದಲೆರಡು ದಿನ ಮಹಿಳೆಯರು ಕೈ ಬುಟ್ಟಿಯನ್ನು ತೆಗೆದುಕೊಂಡು ಹೋಗಿ ಆಕಳ ಸಗಣಿಯನ್ನು ತುಂಬಿಕೊಂಡು ಬಂದು ಅದನ್ನು ಮನೆಯಲ್ಲಿಟ್ಟು ಹಬ್ಬದ ಮೊದಲ ದಿನ ನರಕ ಚತುರ್ದಶಿಯಂದು 5, ಅಮಾವಾಸ್ಯೆಯಂದು 9 ಹಾಗೂ ದೀಪಾವಳಿ ಪಾಡ್ಯದಂದು 11 ಪಾಂಡವರನ್ನು ತಂದಿಟ್ಟ ಸೆಗಣಿಯಿಂದ ರೂಪಿಸಿ ಅದಕ್ಕೊಂದು ಮೂರ್ತಿ ರೂಪ ಕೊಟ್ಟು, ಮನೆಯ ಪಡಸಾಲೆಯ ಒಂದು ಕಡೆಗೆ ಪ್ರತಿಷ್ಠಾಪಿಸಲಾಗುತ್ತದೆ.
ನಂತರ ಅವುಗಳನ್ನು ಕಣಗಲದ ಹಳದಿ ಹೂಗಳನ್ನು ತಂದು ಇದಕ್ಕೆ ಪೂಜೆ ಸಲ್ಲಿಸುತ್ತಾರೆ. ಮೂರು ದಿವಸಗಳ ಕಾಲ ಮನೆಯಲ್ಲಿ
ಮಾಡಿದ ಸಿಹಿ ಅಡುಗೆಯನ್ನು ಇದಕ್ಕೆ ನೈವೇದ್ಯ ಮಾಡುತ್ತಾರೆ. ಪಾಡ್ಯದಂದು ಎಲ್ಲ ಪಾಂಡವರನ್ನು ಮತ್ತೊಮ್ಮೆ ಪೂಜಿಸಿ, ನೈವೇದ್ಯ ಮಾಡಿ ಸೂರ್ಯ ಮುಳಗುವ ಮುಂಚೆ ಮನೆಯ ಮಾಳಿಗೆಯ ಮೇಲಿಡುತ್ತಾರೆ. ಕೆಲವು ಕಡೆ ಪಾಡ್ಯದ ದಿನವೇ ಪಾಂಡವರನ್ನು ಪೂಜಿಸುವ ಸಂಪ್ರದಾಯವಿದೆ.
ಪಂಚರ ಪ್ರಾಮುಖ್ಯತೆ
ಪಾಂಡವರು ಎಂದರೆ ಗ್ರಾಮೀಣ ಭಾಗದಲ್ಲಿ ಗ್ರಾಮದ ಪ್ರಮುಖರು ಪಂಚರು. ಯಾವುದೇ ಕಾರ್ಯ ಮಾಡಬೇಕಾದರೂ ಈ ಪಂಚರು ಬೇಕೇ ಬೇಕು. ಯಾವುದೇ ಬೆಳೆಯನ್ನು ಕೊಯ್ಲು ಮಾಡಬೇಕೆಂದರೂ ಪಂಚ ಮುತ್ತೈದೆಯರಿಗೆ ಉಡಿ ತುಂಬುತ್ತಾರೆ. ರಾಶಿ ಮಾಡುವ ಸಂದರ್ಭದಲ್ಲಿ ಐದು ಜನರಿಗೆ ದವಸ- ಧಾನ್ಯಗಳನ್ನು ದಾನವಾಗಿ ನೀಡುತ್ತಾರೆ.
ಆಧುನಿಕತೆಗೆ ತಕ್ಕಂತೆ ಆಚರಣೆ ಮಾಯ
ಪಂಚರನ್ನು ಪೂಜಿಸುವುದರ ಸಲುವಾಗಿ ಸೆಗಣಿಯಿಂದ ಮೂರ್ತಿಗಳನ್ನು ಮಾಡಿ ದೀಪಾವಳಿಯ ಸಂದರ್ಭದಲ್ಲಿಅವರನ್ನು ಗೌರವಿಸಲಾಗುತ್ತದೆ.ಇಂತಹ ಇತಿಹಾಸವಿರುವ ಈ ಆಚರಣೆ ಆಧುನಿಕತೆಗೆ ತಕ್ಕಂತೆ ಮಾಯವಾಗುತ್ತಿದೆ. ಇದರ ಆಚರಣೆ ಪ್ರದೇಶದಿಂದ ಪ್ರದೇಶಕ್ಕೆ ಭಿನ್ನವಾಗಿದ್ದು, ಗ್ರಾಮೀಣ ಪ್ರದೇಶದ ಸಂಪ್ರದಾಯಸ್ತ ಕುಟುಂಬಗಳಲ್ಲಿ ಮಾತ್ರ ಈ ಆಚರಣೆ ಇಂದಿಗೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.