ದ.ಕ.: ಇಂದಿನಿಂದ ಸಣ್ಣ ಯಾಂತ್ರೀಕೃತ ಮೀನುಗಾರಿಕೆಗೆ ಷರತ್ತುಬದ್ಧ ಅನುಮತಿ


Team Udayavani, May 14, 2020, 5:45 AM IST

ದ.ಕ.: ಇಂದಿನಿಂದ ಸಣ್ಣ ಯಾಂತ್ರೀಕೃತ ಮೀನುಗಾರಿಕೆಗೆ ಷರತ್ತುಬದ್ಧ ಅನುಮತಿ

ಸಾಂದರ್ಭಿಕ ಚಿತ್ರ.

ಮಂಗಳೂರು: ಕೋವಿಡ್- 19 ಲಾಕ್‌ಡೌನ್‌ನಿಂದಾಗಿ ಮೀನುಗಾರಿಕಾ ಕ್ಷೇತ್ರಕ್ಕೆ ಪೆಟ್ಟು ಬಿದ್ದಿದ್ದು, ಮೀನುಗಾರರನ್ನು ಉತ್ತೇಜಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲೆಯೊಳಗೆ 110 ಅಶ್ವಶಕ್ತಿ ಸಾಮರ್ಥ್ಯದ ಸಣ್ಣ ಯಾಂತ್ರೀಕೃತ ಮೀನುಗಾರಿಕೆ ನಡೆಸಬಹುದು ಎಂದು ಮೀನುಗಾರಿಕಾ ಇಲಾಖೆಯು ಕೆಲವೊಂದು ಷರತ್ತುಗಳೊಂದಿಗೆ ಬುಧವಾರ ಆದೇಶಿಸಿದೆ.

ಮೀನುಗಾರಿಕಾ ಇಲಾಖೆ ಹೊರಡಿಸಿದ ಆದೇಶದಂತೆ, ತೋಟ ಬೆಂಗ್ರೆ, ಉಳ್ಳಾಲ ಕೋಡಿಯಲ್ಲಿ ನಿಗದಿತ ದಿನ ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯ ಒಳಗೆ ಮೀನುಗಾರಿಕಾ ಬೋಟುಗಳು ಬಂದು ತಲುಪಬೇಕು. ನಿಗದಿತ ಮೀನುಗಾರಿಕಾ ಇಳಿದಾಣಗಳಿಗೆ ಹಂತ ಹಂತವಾಗಿ 5 ಬೋಟುಗಳು ಮೀರದಂತೆ ಹಿಂದಿರುಗಬೇಕು. ಬೇರೆ ರಾಜ್ಯದ ಮೀನುಗಾರಿಕಾ ಬಂದರು/ಇಳಿದಾಣ ಕೇಂದ್ರಗಳಿಗೆ ಪ್ರವೇಶಿಸಬಾರದು. ಜೂನ್‌ 1ರಿಂದ ಜುಲೈ 31ರ ವರೆಗೆ ಮೀನುಗಾರಿಕಾ ನಿಷೇಧ ಅವಧಿ ಇರುವುದರಿಂದ ಎಲ್ಲ ಯಾಂತ್ರೀಕೃತ ಬೋಟ್‌ಗಳು ಮೇ 31ರೊಳಗೆ ಬಂದರು/ಇಳಿದಾಣಗಳಿಗೆ ಮರಳಬೇಕು ಎಂದು ಆದೇಶ ನೀಡಿದೆ.

ಮೀನುಗಾರಿಕೆ ಬಂದರು/ಇಳಿದಾಣ ಕೇಂದ್ರಗಳಲ್ಲಿ ಮೀನು ಹಿಡುವಳಿಯ ಹರಾಜು ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ. ಮೀನುಗಳ ಚಿಲ್ಲರೆ ಮಾರಾಟಕ್ಕೆ ಅವಕಾಶವಿಲ್ಲ. ಇಳಿಸಲಾದ ಮೀನುಗಳನ್ನು ಸಾಗಾಟ ವಾಹನಗಳಿಗೆ ತುಂಬಿಸಿ ಬಂದರು/ಇಳಿದಾಣ ಕೇಂದ್ರಗಳಿಂದ ಆದಷ್ಟು ಬೇಗ ಹೊರಸಾಗಿಸಬೇಕು. ಮೀನುಗಾರಿಕಾ ದೋಣಿ ಮಾಲಕರು ಸ್ಥಳೀಯವಾಗಿ ಮೀನು ಮಾರಾಟ ಮಾಡಿ ಬಾಕಿ ಉಳಿದಿರುವ ಮೀನನ್ನು ರಾಜ್ಯದಲ್ಲಿರುವ, ಹೊರ ರಾಜ್ಯದಲ್ಲಿರುವ ಸಂಸ್ಕರಣಾ ಘಟಕಗಳಿಗೆ ಸಾಗಿಸಬಹುದಾಗಿದೆ.

ಪ್ರತೀ ದೋಣಿಯ ಮಾಲಕರು ಎಲ್ಲ ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್‌, ಸೋಪ್‌, ಹ್ಯಾಂಡ್‌ವಾಶ್‌ ವ್ಯವಸ್ಥೆ ಮಾಡಿಕೊಳ್ಳ ಬೇಕು. ಮೀನುಗಾರಿಕಾ ಬಂದರು ಇಳಿದಾಣಗಳಲ್ಲಿ ಸಾಮಾಜಿಕ ಅಂತರ, ಶುಚಿತ್ವ ಕಾಪಾಡಿಕೊಳ್ಳಬೇಕು. ಒಂದು ಬೋಟಿನ ಕಾರ್ಮಿಕರು ಸಮುದ್ರದ ಇನ್ನೊಂದು ಬೋಟಿನ ಕಾರ್ಮಿಕರೊಂದಿಗೆ ಸಂಪರ್ಕ/ವಸ್ತುಗಳ ಬದಲಾವಣೆ ಮಾಡಬಾರದು.

ಮೀನುಗಾರಿಕೆಯಲ್ಲಿ ತೊಡಗಿದಾಗ ಕೆಮ್ಮು, ತಲೆನೋವು, ಕ್ವರ, ಮೈ-ಕೈನೋವು, ಉಸಿರಾಟದ ಸಮಸ್ಯೆ ಇತ್ಯಾದಿ ಕಂಡುಬಂದಲ್ಲಿ ಕೂಡಲೇ ಸ್ಥಳೀಯ ಮೀನುಗಾರಿಕಾ ಅಧಿಕಾರಿಗೆ/ವೈದ್ಯಾಧಿಕಾರಿಗಳಿಗೆ ತಿಳಿಸಿ ಕೂಡಲೇ ಬೋಟುಗಳು ಹಿಂದಿರುಗಬೇಕು. ಇಂತಹ ಸಂದರ್ಭದಲ್ಲಿ ಹಿಡಿದ ಮೀನು ಸಮುದ್ರಕ್ಕೆ ಎಸೆಯಬಾರದು.

ಸಣ್ಣ ಯಾಂತ್ರೀಕೃತ ಮೀನುಗಾರಿಕೆಗೆ ಅವಕಾಶ ನೀಡಬೇಕು ಎನ್ನುವುದು ಮೀನುಗಾರರ ಬೇಡಿಕೆಯಾಗಿತ್ತು. ಈ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ, ಅವಕಾಶ ನೀಡಲಾಗಿದೆ.
– ಹರೀಶ್‌ ಕುಮಾರ್‌, ಮೀನುಗಾರಿಕಾ ಉಪ ನಿರ್ದೇಶಕರು, ದ.ಕ.

ದ.ಕ. ಜಿಲ್ಲೆಯಲ್ಲಿ ಸುಮಾರು 150 ಸಣ್ಣ ಯಾಂತ್ರೀಕೃತ ಬೋಟ್‌ಗಳಿಗೆ.ಮೀನು ಗಾರಿಕಾ ಇಲಾಖೆಯ ಈ ನಿರ್ಧಾರದಿಂದ ನೂರಾರು ಮೀನುಗಾರರಿಗೆ ಅನುಕೂಲವಾಗಲಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ನಿರ್ವಹಿಸಬೇಕು.
– ನಿತಿನ್‌ ಕುಮಾರ್‌, ಮೀನುಗಾರರ ಮುಖಂಡರು

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.