ಕಣ್ಣೀರ ಸರದಿ ಈಗ ಡಿಕೆಶಿ

ದಿ.ಸಿ.ಎಸ್‌. ಶಿವಳ್ಳಿ ನೆನೆದು ಪ್ರಭಾವಿ ನಾಯಕ ಭಾವುಕ

Team Udayavani, May 10, 2019, 6:00 AM IST

9hub-33d

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ಕಣ್ಣೀರು ಹಾಕುವ ಸರದಿ ಮುಂದುವರೆದಿದೆ. ಈ ಬಾರಿ ಸಚಿವ ಡಿ. ಕೆ. ಶಿವಕುಮಾರ ಅವರದ್ದು. ಕುಂದಗೋಳ ಉಪಚುನಾವಣೆಯ ಉಸ್ತುವಾರಿ ಹೊತ್ತಿರುವ ಸಚಿವರು, ಮಾಜಿ ಸಚಿವ ದಿ. ಸಿ.ಎಸ್‌. ಶಿವಳ್ಳಿ ಅವರನ್ನು ನೆನೆದು ಬಹಿರಂಗ ಸಭೆಯಲ್ಲಿ ಕಣ್ಣೀರು ಹಾಕಿದರು.

ಗುರುವಾರ ಇಂಗಳಗಿ ಗ್ರಾಮದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಡಿ.ಕೆ. ಶಿವಕುಮಾರ, ಗೆಳೆಯ ಶಿವಳ್ಳಿ ಅವರನ್ನು ನೆನೆದು ಕಣ್ಣೀರು ಹಾಕಿದರು. ”ಶಿವಳ್ಳಿಗೆ ಹೃದಯಾಘಾತವಾಗಿದೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆ ಡಾ. ಮಂಜುನಾಥ ಅವರಿಗೆ ಕರೆ ಮಾಡಿ ಚಿಕಿತ್ಸೆ ಕುರಿತು ಮಾತನಾಡಿದೆ. ಮಾತು ಮುಗಿಸಿ ಒಂದೆರಡು ನಿಮಿಷ ಕಳೆದಿರಲಿಲ್ಲ. ಶಿವಳ್ಳಿ ಇನ್ನಿಲ್ಲ” ಎನ್ನುವ ಸುದ್ದಿ ಕೇಳಿ ಆಘಾತವಾಯಿತು ಎಂದು ಕಣ್ಣೀರು ಸುರಿಸಿದರು.

ಶಿವಳ್ಳಿಗಾಗಿ ನಾನು ಬಂದಿದ್ದೇನೆ. ಅವರಿಗೆ ಆಶೀರ್ವಾದ ಮಾಡಬೇಕು ಎಂದು ಬಂದಿದ್ದೀರಿ. ನಿಮ್ಮ ಪಾದಗಳಿಗೆ ನನ್ನ ನಮಸ್ಕಾರ ಹೇಳಲಿಕ್ಕೆ ನಿಮ್ಮ ಮುಂದೆ ನಿಂತಿದ್ದೇನೆ. ಈ ಚುನಾವಣೆ ಶಿವಳ್ಳಿ ಎಲೆಕ್ಷನ್‌ ಅಲ್ಲ. ಇದು ನಿಮ್ಮ ಚುನಾವಣೆ ಎಂದು ಹೇಳಲು ಬಂದಿದ್ದೇನೆ. ನೀವು ಹಗಲು-ರಾತ್ರಿ ಶಿವಳ್ಳಿ ಅವರೊಂದಿಗೆ ಬದುಕಿದ್ದೀರಿ, ಪರಸ್ಪರ ಕಷ್ಟ-ಸುಖ ಹೇಳಿಕೊಂಡಿದ್ದೀರಿ. ಪಂಚಾಯ್ತಿಯಿಂದ ಮಂತ್ರಿಯಾಗಿ ಮಾಡಿದ ಕೀರ್ತಿ ಈ ಕ್ಷೇತ್ರದ ಜನರಿಗೆ ಸಲ್ಲುತ್ತದೆ ಎಂದರು.

ನಿಮ್ಮ ಮಡಿಲಿಗೆ ಹಾಕಿದ್ದೇವೆ: ಆ ಹೆಣ್ಣು ಮಗಳು ಟಿಕೆಟ್ ಕೊಡಿ ಎಂದು ನಮ್ಮ ಮನೆಗಾಗಲಿ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾಯರ ಮನೆಗಾಗಲಿ ಬಂದವರಲ್ಲ. ಕುಸುಮಕ್ಕ ಒಳ್ಳೆಯ ವ್ಯಕ್ತಿತ್ವ ಹೊಂದಿದ್ದಾರೆ.

ಶಿವಳ್ಳಿ ಸಾಹೇಬರ ಸ್ಥಾನ ತುಂಬಲಿದ್ದಾರೆ ಎಂದು ಪಕ್ಷದ ಕಾರ್ಯಕರ್ತರು ಒತ್ತಡ ಹಾಕಿದ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್ ನೀಡಲಾಗಿದೆ. ಕುಸುಮಾವತಿ ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇವೆ. ಅವರನ್ನು ವಿಧಾನಸೌಧಕ್ಕೆ ಕಳುಹಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಶಿವಳ್ಳಿ ಅವರ ಸ್ಥಾನ ತುಂಬಲು ನಮ್ಮ ಒತ್ತಡಕ್ಕೆ ಮಣಿದು ಸ್ಪರ್ಧಿಸಿರುವ ಕುಸುಮಾವತಿ ಅವರಿಗೆ ಈ ಕ್ಷೇತ್ರದ ಜನರು ಬೆಂಬಲಿಸಬೇಕು.

ನನ್ನ ಕ್ಷೇತ್ರದಂತೆ ಈ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು. ನನ್ನೊಂದಿಗೆ ನಿಕಟ ಸಂಪರ್ಕವಿದ್ದ ಶಿವಳ್ಳಿ ಎಂದಿಗೂ ತನ್ನ ವೈಯಕ್ತಿಕ ಬದುಕಿಗಾಗಿ ಏನನ್ನೂ ಮಾಡಿಕೊಂಡವನಲ್ಲ. ಕ್ಷೇತ್ರ, ಬಡವರು, ರೈತರ ಪರವಾಗಿ ಸಾಕಷ್ಟು ಕಾಳಜಿಯಿತ್ತು. ಕ್ಷೇತ್ರದ ಅಭಿವೃದ್ಧಿಗಾಗಿ ಸಚಿವರೆಲ್ಲರನ್ನೂ ಕಾಡಿ ಬೇಡಿಯಾ ದರೂ ಅನುದಾನ ತರುತ್ತಿದ್ದರು. ಅನುದಾನ ಮಂಜೂರು ಮಾಡದ ಹೊರತು ಕದಲುತ್ತಿರಲಿಲ್ಲ. ಅಷ್ಟೊಂದು ಕಾಳಜಿ ಅವರಲ್ಲಿತ್ತು. ಅವರಲ್ಲಿದ್ದ ಬದ್ಧತೆಯಿಂದ ಈ ಕ್ಷೇತ್ರ ಇಷ್ಟೊಂದು ಅಭಿವೃದ್ಧಿಯಾಗಿದೆ. ಅವರು ಬದುಕಿದ್ದರೆ ಅವರಲ್ಲಿದ್ದ ಚಿಂತನೆಯಿಂದ ಕ್ಷೇತ್ರದ ಚಿತ್ರಣವೇ ಬದಲಾಗುತ್ತಿತ್ತು. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಶಿವಳ್ಳಿ ಅವರು ಹೊಂದಿದ್ದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕುಸುಮಾವತಿಗೆ ಆಶೀರ್ವಾದ ಮಾಡಿ ಎಂದು ಭಾವುಕರಾದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.