![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 2, 2019, 6:00 AM IST
ಬೆಂಗಳೂರು: ಸತತ ಬರದಿಂದ ಬರಿದಾಗಿರುವ ರಾಜ್ಯದ ಜಲಾಶಯಗಳು ಈ ಬಾರಿಯೂ ಭರ್ತಿಯಾಗುವುದು ಅನುಮಾನವಾಗಿದ್ದು, ಇದು ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
‘ಉದಯವಾಣಿ’ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಮಂಕಾದ ಮುಂಗಾರು; ಕೃಷಿ ಚಟುವಟಿಕೆಗಳ ಮೇಲಿನ ಪರಿಣಾಮ’ ಕುರಿತ ಸಂವಾದದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ)ದ ನಿರ್ದೇಶಕ ಡಾ.ಜಿ.ಎಸ್. ಶ್ರೀನಿವಾಸ ರೆಡ್ಡಿ, ಈ ಬಾರಿ ಮುಂಗಾರು ಪೂರ್ವ ಉತ್ತಮ ಮಳೆಯಾಗಿದ್ದರೆ, ಮುಂಗಾರು ಮಳೆಯಿಂದ ಒಳಹರಿವು ಹೆಚ್ಚಳ ಆಗುತ್ತಿತ್ತು. ಆದರೆ, ಜೂನ್ 14ಕ್ಕೆ ಮುಂಗಾರು ಮಳೆ ಪ್ರವೇಶ ಆಗಿದೆ. ಅದೂ ನಿರೀಕ್ಷಿತ ಮಟ್ಟದಲ್ಲಿ ಪ್ರಬಲವಾಗಿಲ್ಲ. ಇದರಿಂದ ಕೆಆರ್ಎಸ್ಗೆ ಕೇವಲ 2.85 ಟಿಎಂಸಿ ನೀರು ಬಂದಿದೆ. ವಾಡಿಕೆಯಂತೆ ಜೂನ್ನಲ್ಲಿ ಅಣೆಕಟ್ಟೆಗೆ 31.57 ಟಿಎಂಸಿ ನೀರು ಬರಬೇಕಿತ್ತು ಎಂದರು. ಕಳೆದ ವರ್ಷ ಈ ಹೊತ್ತಿಗೆ 76 ಟಿಎಂಸಿ ಒಳಹರಿವು ಇತ್ತು.
ಜೂನ್ನಲ್ಲಿ ಶೇ. 27ರಷ್ಟು ಮಳೆ ಕೊರತೆ ಆಗಿದೆ. ಜುಲೈನಲ್ಲಿ ವಾಡಿಕೆ ಮಳೆಯಾದರೂ ಎಂದಿನಂತೆ ಒಳಹರಿವು ಬರುವುದು ಅನುಮಾನ. ಹಾಗಾಗಿ, ಜಲಾಶಯಗಳ ಸ್ಥಿತಿ ಆಶಾದಾಯಕವಾಗಿರುವುದಿಲ್ಲ. ಆದ್ದರಿಂದ ರೈತರು ಅದಕ್ಕೆ ಪೂರಕವಾಗಿ ಬೆಳೆಗಳ ಬಿತ್ತನೆ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕೆಆರ್ಎಸ್ಗೆ ಜುಲೈನಲ್ಲಿ 92 ಟಿಎಂಸಿ ಹಾಗೂ ಆಗಸ್ಟ್ನಲ್ಲಿ 90 ಟಿಎಂಸಿ ನೀರು ಬರಬೇಕಿದೆ. ಆಗಸ್ಟ್ನಲ್ಲಿ ಮತ್ತೆ ಕೊಂಚ ಮಳೆ ಕೊರತೆ ನಿರೀಕ್ಷೆ ಇದೆ. ಹೀಗಾಗಿ ಡ್ಯಾಂಗಳ ಸ್ಥಿತಿ ಆಶಾದಾಯಕವಾಗಿಲ್ಲ ಎಂದರು.
ಆಗಸ್ಟ್ 4ರವರೆಗೆ ಅವಕಾಶ ಇದೆ: ಹವಾಮಾನ ತಜ್ಞ ಹಾಗೂ ಬೆಂಗಳೂರು ಕೃಷಿ ವಿವಿ ಕುಲಸಚಿವ ಪ್ರೊ.ಎಂ.ಬಿ. ರಾಜೇಗೌಡ ಮಾತನಾಡಿ, ಮುಂಗಾರು ತಡವಾಗಿದ್ದರೂ ರೈತರು ಆತಂಕ ಪಡುವ ಅಗತ್ಯವಿಲ್ಲ. ಯಾಕೆಂದರೆ, ಆಗಸ್ಟ್ 4ರವರೆಗೂ ದೀರ್ಘಾವಧಿ ಬೆಳೆಗಳ ಬಿತ್ತನೆಗೆ ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.
ಇತ್ತೀಚಿನ ವರ್ಷಗಳಲ್ಲಿ ಮಳೆ ಪ್ರಮಾಣ ಶೇ. 1ರಿಂದ 1.5ರಷ್ಟು ಹೆಚ್ಚಳ ಆಗಿದೆ. ಆದರೆ, ಅದರ ಹಂಚಿಕೆ ಸರಿಯಾಗಿ ಆಗುತ್ತಿಲ್ಲ. ಇದರಿಂದಾಗಿ ಕೃಷಿ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ವೈಜ್ಞಾನಿಕವಾಗಿ ಮಳೆ ಹಂಚಿಕೆಯನ್ನು ವಿಶ್ಲೇಷಿಸಿ, ಲಭ್ಯತೆಗೆ ತಕ್ಕಂತೆ ಕೃಷಿ ಪದ್ಧತಿ ಮಾರ್ಪಾಡು ಮಾಡಿಕೊಳ್ಳಬೇಕು ಎಂದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.