Shankar Nethralaya: ಶಂಕರ ನೇತ್ರಾಲಯ ಸಂಸ್ಥಾಪಕ ಡಾ.SS ಬದ್ರಿನಾಥ್‌ ವಿಧಿವಶ

1970ರಲ್ಲಿ ಡಾ.ಬದ್ರಿನಾಥ್‌ ಅವರು ಕುಟುಂಬದ ಜತೆ ಭಾರತಕ್ಕೆ ವಾಪಸ್‌ ಆಗಿದ್ದರು.

Team Udayavani, Nov 22, 2023, 1:18 PM IST

Shankar Nethralaya:ಶಂಕರ ನೇತ್ರಾಲಯ ಸಂಸ್ಥಾಪಕ ಡಾ.SS ಬದ್ರಿನಾಥ್‌ ವಿಧಿವಶ

ಚೆನ್ನೈ: ಪ್ರಸಿದ್ಧ ಶಂಕರ ನೇತ್ರಾಲಯದ ಸಂಸ್ಥಾಪಕ, ವಿಟ್ರೋರೆಟಿನಲ್‌ ಸರ್ಜನ್‌ ಡಾ.ಎಸ್.ಎಸ್.ಬದ್ರಿನಾಥ್‌ (83ವರ್ಷ) ಅವರು ತಮ್ಮ ನಿವಾಸದಲ್ಲಿ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:DK Shivakumar: ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವಿಗೆ ಬದ್ಧ

ಶಂಕರ ನೇತ್ರಾಲಯದ ಅಧಿಕೃತ ವೆಬ್‌ ಸೈಟ್‌ ನಲ್ಲಿರುವ ಮಾಹಿತಿ ಪ್ರಕಾರ, ಡಾ.ಬದ್ರಿನಾಥ್‌ ಅವರು 1940ರ ಫೆಬ್ರವರಿ 24ರಂದು ಚೆನ್ನೈನ ಟ್ರಿಪ್ಲಿಕೇನ್‌ ನಲ್ಲಿ ಜನಿಸಿದ್ದರು. ಮದ್ರಾಸ್‌ ಮೆಡಿಕಲ್‌ ಕಾಲೇಜಿನಲ್ಲಿ ಪದವಿ ಪಡೆದ ನಂತರ 1963ರಿಂದ 1968ರವರೆಗೆ ನ್ಯೂಯಾರ್ಕ್‌ ಯೂನಿರ್ವಸಿಟಿ ಹಾಗೂ ಬ್ರೂಕ್ಲೈನ್‌ ಮೆಡಿಕಲ್‌ ಕಾಲೇಜಿನಲ್ಲಿ ನೇತ್ರವಿಜ್ಞಾನ ಪದವಿ ಪಡೆದಿದ್ದರು.

ಡಾ.ಬದ್ರಿನಾಥ್‌ ಅವರು ಅಮೆರಿಕದಲ್ಲಿದ್ದಾಗ ಡಾ.ವಸಂತಿ ಅವರನ್ನು ಭೇಟಿಯಾಗಿದ್ದರು. ಒಂದು ವರ್ಷದ ಬಳಿಕ ಬದ್ರಿನಾಥ್‌ ಅವರು ಮೆಸಾಚುಸೆಟ್ಸ್‌ ನಲ್ಲಿ ಡಾ.ಚಾರ್ಲ್ಸ್‌ ಎಲ್‌ ಸ್ಕೇಪೆನ್ಸ್‌ ಅವರ ಕೈಕೆಳಗೆ ವೈದ್ಯರಾಗಿ 1970ರವರೆಗೆ ಕಾರ್ಯನಿರ್ವಹಿಸಿದ್ದರು.

ಈ ಸಂದರ್ಭದಲ್ಲಿ ಡಾ.ಬದ್ರಿನಾಥ್‌ ಅವರು ಏಕಕಾಲದಲ್ಲೇ ಕೆನಡಾದ ರಾಯಲ್‌ ಕಾಲೇಜ್‌ ಆಫ್‌ ಸರ್ಜನ್ಸ್‌ ಮತ್ತು ಓಪ್ತಾಮೋಲಾಜಿ ಅಮೆರಿಕನ್‌ ಬೋರ್ಡ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು.

1970ರಲ್ಲಿ ಡಾ.ಬದ್ರಿನಾಥ್‌ ಅವರು ಕುಟುಂಬದ ಜತೆ ಭಾರತಕ್ಕೆ ವಾಪಸ್‌ ಆಗಿದ್ದರು. ತದನಂತರ ಚೆನ್ನೈನ ಅಡ್ಯಾರ್‌ ನಲ್ಲಿ ಸುಮಾರು ಆರು ವರ್ಷಗಳ ಕಾಲ ಕಣ್ಣಿನ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಆ ನಂತರ 1970ರಿಂದ 1972ರವರೆಗೆ ಎಚ್.ಎಂ.ಆಸ್ಪತ್ರೆಯಲ್ಲಿ ಮತ್ತು 1973ರಿಂದ 1978ರವರೆಗೆ ವಿಜಯ ಆಸ್ಪತ್ರೆಯಲ್ಲಿ ಸರ್ಜನ್‌ ಆಗಿ ಕಾರ್ಯನಿರ್ವಹಿಸಿದ್ದರು.

ಈ ಸಂದರ್ಭದಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ಜನಸಾಮಾನ್ಯರಿಗೆ ದುಬಾರಿಯಾಗುತ್ತಿದೆ ಎಂಬುದನ್ನು ಮನಗಂಡ ಡಾ.ಬದ್ರಿನಾಥ್‌ ಅವರು 1978ರಲ್ಲಿ ಮೆಡಿಕಲ್‌ ರಿಸರ್ಚ್‌ ಫೌಂಡೇಶನ್‌ ಶಂಕರ ನೇತ್ರಾಲಯವನ್ನು ಸ್ಥಾಪಿಸಿದ್ದರು. ಈ ಲಾಭರಹಿತ ಚಾರಿಟೇಬಲ್‌ ಸಂಸ್ಥೆಯ ಮೂಲಕ ಡಾ.ಬದ್ರಿನಾಥ್‌ ಅವರು ದೇಶಾದ್ಯಂತ ಲಕ್ಷಾಂತರ ಜನರಿಗೆ ಕೈಗೆಟಕುವ ದರದಲ್ಲಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಜನಪ್ರಿಯರಾಗಿದ್ದರು.

ದಶಕಗಳ ಕಾಲ ಚಾರಿಟೇಬಲ್‌ ಕಾರ್ಯದ ಮೂಲಕ ಸೇವೆ ಸಲ್ಲಿಸಿದ್ದ ಡಾ.ಎಸ್.ಎಸ್.‌ ಬದ್ರಿನಾಥ್‌ ಅವರಿಗೆ ದೇಶದ ಪ್ರತಿಷ್ಠಿತ ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.