ಕರಾವಳಿ ಜಿಲ್ಲೆಗಳಲ್ಲಿ ಬಂದಿದೆ ಹಾಲಿಗೆ ಬರ! ಹೈನುಗಾರಿಕೆಗೆ ಮನಮಾಡದ ಯುವಜನ

ಹೊರಜಿಲ್ಲೆಗಳಿಂದ ಪ್ರತಿನಿತ್ಯ 2 ಲಕ್ಷ ಲೀ. ಹಾಲು ಖರೀದಿ ಅನಿವಾರ್ಯತೆ

Team Udayavani, May 15, 2024, 7:20 AM IST

ಕರಾವಳಿ ಜಿಲ್ಲೆಗಳಲ್ಲಿ ಬಂದಿದೆ ಹಾಲಿಗೆ ಬರ! ಹೈನುಗಾರಿಕೆಗೆ ಮನಮಾಡದ ಯುವಜನ

ಕುಂದಾಪುರ: ಕೊರೊನಾ ಕಾಲಘಟ್ಟದಲ್ಲಿ 5 ಲಕ್ಷ ಲೀಟರ್‌ಗೆ ತಲುಪಿದ್ದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಾಲು ಉತ್ಪಾದನೆ ಈಗ 3.5 ಲಕ್ಷ ಲೀ. ಗೆ ಇಳಿದಿದೆ. ಉಭಯ ಜಿಲ್ಲೆಗಳಿಗೆ ನಿತ್ಯವೂ2 ಲಕ್ಷ ಲೀ. ಹಾಲು ನೆರೆಯ ಹಾಲು ಒಕ್ಕೂಟಗಳಿಂದ ಖರೀದಿಸಿ ಪೂರೈಸಲಾಗು ತ್ತಿದೆ. ಹೈನೋದ್ಯಮದಿಂದ ರೈತರು ವಿಮುಖರಾಗುತ್ತಿರುವುದು ಪ್ರಮುಖ ಕಾರಣ ಎನ್ನುತ್ತಾರೆ ಪರಿಣಿತರು.

ಪ್ರತೀ ಬೇಸಗೆಯಲ್ಲಿ ಹಸುರು ಮೇವಿನ ಕೊರತೆಯಿಂದ ಹಾಲು ಉತ್ಪಾದನೆ ಇಳಿಕೆಯಾಗುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಗಣನೀಯ ಪ್ರಮಾಣದಲ್ಲಿ ಹೈನುಗಾರರ ಸಂಖ್ಯೆ ಯಲ್ಲಿ ಇಳಿಮುಖವಾಗಿದ್ದು, ಭತ್ತದ ಗದ್ದೆಗಳನ್ನು ವಾಣಿಜ್ಯ ಬೆಳೆಗಳು ಆಕ್ರ ಮಿಸಿರುವುದು ಹಾಲಿನ ಪ್ರಮಾಣ ಕಡಿಮೆಯಾಗಲು ಕಾರಣ. ಬೇರೆಡೆಯಿಂದ ಮೇವು ಖರೀದಿಸಿ ಹಸುಗಳಿಗೆ ನೀಡುವುದು ಲಾಭ ವಲ್ಲ. ಸ್ವಂತ ಜಾಗದ ಅಲಭ್ಯತೆ ಇತ್ಯಾದಿ ಕಾರಣದಿಂದ ದಿನೇದಿನೆ ಹಾಲಿನ ಪ್ರಮಾಣ ಇಳಿಕೆಯಾಗುತ್ತಿದೆ.

ಒಕ್ಕೂಟ ಕ್ರಮ: ಹೈನುಗಾರರಿಗೆ ಸಮಸ್ಯೆಯಾಗದಂತೆ, ಹಸುರು ಮೇವು ಕಡಿಮೆ ಇದ್ದಾಗ ದಕ್ಷಿಣ ಕನ್ನಡ ಹಾಲು ಒಕ್ಕೂಟದಿಂದ 12 ರೂ.ಗೆ ದೊರೆಯುವ ಮೇವನ್ನು 6.5 ರೂ.ಗೆ ದೊರೆಯುವಂತೆ ಮೇವಿಗೆ ಮಾಸಿಕ 10 ಲಕ್ಷ ರೂ.ಗಳಂತೆ 40 ಲಕ್ಷ ರೂ. ಸಬ್ಸಿಡಿ ನೀಡಲಾಗಿದೆ ಎಂದರು ಒಕ್ಕೂಟ ನಿರ್ದೇಶಕ ನರಸಿಂಹ ಕಾಮತ್‌ ಸಾಣೂರು. ಹಾಲು ಕಡಿಮೆ ಇರುವ ಸೊಸೈಟಿಗೆ ಪಶುವೈದ್ಯರು, ಮೇಲ್ವಿಚಾರಕರು ಭೇಟಿ ನೀಡಿ ರೈತರಿಗೆ ತರಬೇತಿ ನೀಡಿದ್ದಾರೆ. ಗುಣಮಟ್ಟದ ಹಾಲು ದೊರೆಯದೇ ಇದ್ದಲ್ಲಿಯೂ ಮಾರ್ಗದರ್ಶನ ನೀಡಲಾಗಿದೆ. ರೈತರಲ್ಲಿ ಹೈನುಗಾರಿಕೆಗೆ ಜುಗುಪ್ಸೆ ಬರದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಮಿಶ್ರ ತಳಿ ಯೋಜನೆಗೆ ಪ್ರೋತ್ಸಾಹ ನೀಡಲಾಗಿದೆ.

ಹಸುರು ಮೇವು ಬೆಳೆಸುವವರಿಗೆ ಎಕ್ರೆಗೆ 10 ಸಾವಿರ ರೂ. ಪ್ರೋತ್ಸಾಹಧನ, ಮಿನಿಡೈರಿ ಯೋಜನೆ, ಹೊಸದಾಗಿ ಹೈನೋದ್ಯಮ ಮಾಡುವುದಾದರೆ ಜಾನುವಾರು ಖರೀದಿಗೆ ಸಾಗಾಟ ವೆಚ್ಚ ನೀಡುವುದಾಗಿ ನಿಗಮದ ವ್ಯವಸ್ಥಾಪನ ನಿರ್ದೇಶಕ ವಿವೇಕ್‌ ವಿವರಿಸಿದರು.

ಜತೆಗೆ ಕಳೆದ 7 ತಿಂಗಳಿನಿಂದ ಹೈನು ಗಾರರಿಗೆ ಸರಕಾರದ ಪ್ರೋತ್ಸಾಹ ಧನ ಬಂದಿಲ್ಲ. ಈ ಬಗ್ಗೆ ಒಕ್ಕೂಟ ಸರಕಾರಕ್ಕೆ ಪತ್ರ ಬರೆದಿದ್ದರೂ ಸ್ಪಂದನೆ ಸಿಕ್ಕಿಲ್ಲ.

ಎಷ್ಟು ಸಂಘ?
ದ.ಕ., ಉಡುಪಿ ಜಿಲ್ಲೆಯಲ್ಲಿ 744 ಹಾಲಿನ ಸೊಸೈಟಿಗಳಿವೆ. 53 ಸಾವಿರ ಸದಸ್ಯರು ಸೊಸೈಟಿಗೆ ಹಾಲು ನೀಡುತ್ತಿದ್ದಾರೆ.

ಎಲ್ಲಿಂದ ಖರೀದಿ?
ಹೆಚ್ಚುವರಿ 2 ಲಕ್ಷ ಲೀಟರ್‌ ಹಾಲನ್ನು ಅಗತ್ಯವಿರುವ ಹೆಚ್ಚುವರಿ 2 ಲಕ್ಷ ಲೀ. ಹಾಲನ್ನು ಮಂಡ್ಯ, ಶಿವಮೊಗ್ಗ, ಮೈಸೂರು, ಹಾಸನ ಒಕ್ಕೂಟಗಳಿಂದ ಅಂತರ್‌ ಡೈರಿ ದರದಲ್ಲಿ ಖರೀದಿಸಲಾಗುತ್ತದೆ. ಒಕ್ಕೂಟ ಇಲ್ಲಿ ಹೈನುಗಾರರಿಂದ ಖರೀದಿ ಸುವ ದರಕ್ಕಿಂತಲೂ 48 ಪೈಸೆಗಳಷ್ಟು ಇದು ಕಡಿಮೆ. ಸಾಗಾಟ ವೆಚ್ಚ ಪ್ರತ್ಯೇಕ.

ಎಷ್ಟು ಹಾಲು?
ಮೇ 13ರಂದು 3.57 ಲಕ್ಷ ಲೀ. ಹಾಲು ಸಂಗ್ರಹವಾಗಿದ್ದು ಮೇ 7ರಂದು 3.45 ಲಕ್ಷ ಲೀ.ನಲ್ಲಿತ್ತು. ಅದಕ್ಕೂ ವಾರದ ಹಿಂದೆ 3.3 ಲಕ್ಷ ಲೀ.ಗಳಲ್ಲಿದ್ದ ಹಾಲಿನ ಪ್ರಮಾಣ 4 ತಿಂಗಳಿನಿಂದ ಏರಿಕೆಯಾಗಿ ಈ ಹಂತ ತಲುಪಿದೆ. 2020ರಲ್ಲಿ 5 ಲಕ್ಷ ಲೀ., 2018ರಲ್ಲಿ 4.8 ಲಕ್ಷ ಲೀ., 2017ರಲ್ಲಿ 3.96 ಲಕ್ಷ ಲೀ., 2015ರಲ್ಲಿ 3.76 ಲಕ್ಷ ಲೀ., 2014ರಲ್ಲಿ 3.6 ಲಕ್ಷ ಲೀ.ಗಳಷ್ಟಿತ್ತು. ಪ್ರತೀ ದಿನ 4.24 ಲಕ್ಷ ಲೀ. ಹಾಲು ಮಾರಾಟಕ್ಕೆ ಬೇಕು. ಜತೆಗೆ ಹಾಲಿನ ಇತರ ಉತ್ಪನ್ನಗಳಿಗೂ ಹಾಲಿನ ಅಗತ್ಯವಿದೆ.

ನಿರೀಕ್ಷಿತ ಪ್ರಮಾಣದಲ್ಲಿ ಅಲ್ಲದಿದ್ದರೂ ಕಳೆದ 4 ತಿಂಗಳಿನಿಂದ 27 ಸಾವಿರ ಲೀ. ಹಾಲು ಉತ್ಪಾದನೆ ಏರಿಕೆಯಾಗಿದೆ. ಒಕ್ಕೂಟದಿಂದ ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
– ಕೆ.ಪಿ. ಸುಚರಿತ ಶೆಟ್ಟಿ,
ಅಧ್ಯಕ್ಷ, ದ.ಕ. ಹಾಲು ಒಕ್ಕೂಟ

 

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.