Dulip Trophy: ಭಾರತ ತಂಡದ ಬಹುತೇಕ ಆಟಗಾರರು ಭಾಗಿ
ಸೆ.5ರಿಂದ ಬೆಂಗಳೂರಿನಲ್ಲಿ ಟೂರ್ನಿ, ಬುಮ್ರಾ, ಆರ್.ಅಶ್ವಿನ್ಗೆ ರಿಯಾಯಿತಿ
Team Udayavani, Aug 13, 2024, 7:20 AM IST
ಬೆಂಗಳೂರು: ದೇಶಿ ಕ್ರಿಕೆಟ್ನ ಆರಂಭಿಕ ಪಂದ್ಯಾವಳಿಯಾದ ದುಲೀಪ್ ಟ್ರೋಫಿ ಟೂರ್ನಿಯ ಮೊದಲ ಹಂತದ ಪಂದ್ಯಗಳನ್ನು ಅನಂತಪುರದಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಇದ ರಲ್ಲಿ ಟೀಮ್ ಇಂಡಿಯಾದ ಬಹುತೇಕ ಟೆಸ್ಟ್ ಆಟಗಾರರು ಆಡುವುದು ವಿಶೇಷ.
ಆದರೆ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ, ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಗಾಯಾಳಾಗಿರುವ ವೇಗಿ ಮೊಹಮ್ಮದ್ ಶಮಿ ಅವರಿಗೆ ರಿಯಾಯಿತಿ ನೀಡಲಾಗಿದೆ. ಹಾಗೆಯೇ ಸೀನಿಯರ್ ಕ್ರಿಕೆಟಿಗರಾದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಕೂಡ ವಿನಾಯಿತಿ ಪಡೆಯುವ ಸಾಧ್ಯತೆ ಇದೆ. ಪಂದ್ಯಾವಳಿಯಲ್ಲಿ ಆಡುವ ಅಥವಾ ಆಡದಿರುವ ಆಯ್ಕೆಯನ್ನು ಇವರಿಗೇ ಬಿಡಲಾಗಿದೆ. ಭಾರತ ತಂಡದ ಆಟಗಾರರು ಪೂರ್ತಿ ಸರಣಿಯಲ್ಲಿ ಅಲ್ಲದೇ ಹೋದರೂ ಕೆಲವು ಪಂದ್ಯಗಳಲ್ಲಾದರೂ ಆಡಬೇಕು ಎಂದು ಬಿಸಿಸಿಐ ಈಗಾಗಲೇ ಸೂಚಿಸಿದೆ.
ಚಿನ್ನಸ್ವಾಮಿಯಲ್ಲಿ ಪಂದ್ಯ
ದುಲೀಪ್ ಟ್ರೋಫಿ ಪಂದ್ಯಾವಳಿಯ ಮೊದಲ ಸುತ್ತಿನ 2 ಹಂತದ ಪಂದ್ಯಗಳನ್ನು ಆಂಧ್ರಪ್ರದೇಶದ ಅನಂತಪುರದಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿತ್ತು. ಆದರೀಗ ಒಂದು ಹಂತದ ಪಂದ್ಯವನ್ನು ಬೆಂಗಳೂರಿನ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ಗೆ ಸ್ಥಳಾಂತರಿಸಲಾಗಿದೆ. ಪ್ರಯಾಣ, ಸಾಗಾಣಿಕೆ ಹಾಗೂ ಕೆಲವು ಉನ್ನತ ದರ್ಜೆಯ ಕ್ರಿಕೆಟಿಗರಿಗೆ ಎದುರಾಗುವ ವಸತಿ ಸಮಸ್ಯೆಯಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಬಿಸಿಸಿಐ ಮೂಲ ತಿಳಿಸಿದೆ. ಅನಂತಪುರ ಬೆಂಗಳೂರಿನಿಂದ ಸುಮಾರು 230 ಕಿ.ಮೀ. ದೂರದಲ್ಲಿದ್ದು, ಇಲ್ಲಿಗೆ ವಿಮಾನ ಸಂಚಾರ ಇಲ್ಲ.
ದುಲೀಪ್ ಟ್ರೋಫಿ ಪಂದ್ಯಾವಳಿ ಸೆ. 5ರಂದು ಮೊದಲ್ಗೊಳ್ಳಲಿದೆ. ಅನಂತರ ಪ್ರವಾಸಿ ಬಾಂಗ್ಲಾದೇಶ ವಿರುದ್ಧ ಭಾರತ ತಂಡ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಮೊದಲ ಟೆಸ್ಟ್ ಚೆನ್ನೈಯಲ್ಲಿ (ಸೆ. 19-23) ಮತ್ತು ದ್ವಿತೀಯ ಟೆಸ್ಟ್ ಕಾನ್ಪುರದಲ್ಲಿ ನಡೆಯಲಿದೆ (ಸೆ. 27-ಅ. 1).
ಈ ಸರಣಿಯ ಅಭ್ಯಾಸಕ್ಕಾಗಿ ದುಲೀಪ್ ಟ್ರೋಫಿ ಪಂದ್ಯಾವಳಿಯನ್ನು ಬಳಸಿಕೊಳ್ಳುವುದು ಬಿಸಿಸಿಐ ಯೋಜನೆ. ಅಲ್ಲದೇ ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿರಾಮವಿದ್ದ ವೇಳೆ ಟೀಮ್ ಇಂಡಿಯಾ ಕ್ರಿಕೆಟಿಗರು ದೇಶಿ ಕ್ರಿಕೆಟ್ನಲ್ಲಿ ಆಡಬೇಕೆಂಬುದು ಬಿಸಿಸಿಐ ಬಯಕೆ. ಹೀಗಾಗಿ ಟೆಸ್ಟ್ ತಂಡದ ಸಂಭಾವ್ಯ ಆಟಗಾರರಾದ ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ರಿಷಭ್ ಪಂತ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಕುಲದೀಪ್ ಯಾದವ್ ಮೊದಲಾದವರೆಲ್ಲ ದುಲೀಪ್ ಟ್ರೋಫಿಯ ಕೆಲವು ಪಂದ್ಯಗಳಲ್ಲಿ ಆಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.