ರಾಜ್ಯದಲ್ಲೂ ಇ-ಹುಂಡಿ ವ್ಯವಸ್ಥೆ


Team Udayavani, Sep 13, 2019, 6:05 AM IST

q-49

ತ.ನಾಡಿನ ಶ್ರೀರಂಗನಲ್ಲಿರುವ ಇ-ಹುಂಡಿ

ಬೆಂಗಳೂರು: ದೇವಸ್ಥಾನದ ಹುಂಡಿಗೆ ಇನ್ನು ಮುಂದೆ ನೀವು ಹಾಕುವ ಪ್ರತಿ ಪೈಸೆ ಕಾಣಿಕೆಗೂ ಲೆಕ್ಕ ಸಿಗಲಿದೆ. ಒಂದೊಂದು ರೂಪಾಯಿಗೂ ರಶೀದಿ ಸಿಗಲಿದೆ.

ಇಂಥದ್ದೊಂದು ಎಲೆಕ್ಟ್ರಾನಿಕ್‌ ಹುಂಡಿ ವ್ಯವಸ್ಥೆಯನ್ನು ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಅಳವಡಿಸಲು ಸರ್ಕಾರ ನಿರ್ಧರಿಸಿದೆ. ಆರಂಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ ಸೇರಿದಂತೆ ಆಯ್ದ 10- 15 ದೇವಸ್ಥಾನಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ಬರಲಿದೆ.

‘ಇ- ಆಡಳಿತ’ ಇಲಾಖೆ ಹಾಗೂ ಖಾಸಗಿ ಸಂಸ್ಥೆಯೊಂದರ ಸಹಯೋಗದಲ್ಲಿ ಸುಧಾರಿತ ‘ಇ-ಹುಂಡಿ’ ವ್ಯವಸ್ಥೆ ಅಳವಡಿಕೆಗೆ ಇಲಾಖೆ ಪ್ರಯತ್ನ ನಡೆಸಿದೆ. ಖಾಸಗಿ ಸಂಸ್ಥೆ ಸುಧಾರಿತ ಸಾಧನವನ್ನು ಅಭಿವೃದ್ಧಿಪಡಿಸಿದ್ದು, ತಮಿಳುನಾಡಿನ 25ಕ್ಕೂ ಹೆಚ್ಚು ದೇವಸ್ಥಾನದಲ್ಲಿ ಅಳವಡಿಸಿದೆ. ಭಕ್ತರು ಹಾಕುವ ಕಾಣಿಕೆ, ನಾಣ್ಯ, ನೋಟುಗಳನ್ನು ಮೌಲ್ಯಮಾಪನ ಮಾಡುವ, ರಸೀದಿ ನೀಡುವ ಹಾಗೂ ಆಯಾ ದಿನವೇ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ.

ಸದ್ಯಕ್ಕೆ ನಾಣ್ಯ, ನೋಟು, ನೋಟಿನ ಕಂತೆ ಸ್ವೀಕಾರ ವ್ಯವಸ್ಥೆ ಇದೆ. ಹರಕೆ ಚಿನ್ನ, ಬೆಳ್ಳಿ ಕಾಣಿಕೆಯನ್ನು ಮೌಲ್ಯಮಾಪನ ಮಾಡುವ ವ್ಯವಸ್ಥೆ ಅಳವಡಿಕೆ ಸಾಧ್ಯಾಸಾಧ್ಯತೆ ಬಗ್ಗೆಯೂ ಚರ್ಚೆ ನಡೆದಿದೆ. ಒಟ್ಟಾರೆ ದೇವಸ್ಥಾನಕ್ಕೆ ಭಕ್ತರು ನೀಡುವ ಕಾಣಿಕೆಯ ಪ್ರತಿ ಪೈಸೆಯ ಲೆಕ್ಕ ಪಡೆಯಲು ಸುಧಾರಿತ ತಂತ್ರಜ್ಞಾನ ಅಳವಡಿಸಿಕೊಳ್ಳಲು ಇಲಾಖೆ ಸಜ್ಜಾಗಿದೆ.

ಸಚಿವರಿಗೆ ಪ್ರಾತ್ಯಕ್ಷಿಕೆ: ವಿಕಾಸಸೌಧದಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನಡೆಸಿದ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗಿದೆ. ಸಭೆ ಬಳಿಕ ಮಾತನಾಡಿದ ಅವರು, ಹುಂಡಿಗೆೆ ಹಾಕುವ ಪ್ರತಿ ಪೈಸೆಯ ಲೆಕ್ಕ ಸಿಗಲಿದೆ ಎಂದರು. ಜತೆಗೆ ಇ-ಹುಂಡಿಗೆ ಸಂಗ್ರಹವಾಗುವ ಹಣದ ಮೌಲ್ಯ ಅದೇ ದಿನ ಸಂಬಂಧಪಟ್ಟ ರಾಷ್ಟ್ರೀಕೃತ ಬ್ಯಾಂಕ್‌ನ ನಿರ್ದಿಷ್ಟ ಖಾತೆಗೆ ಜಮೆಯಾಗುವ ವ್ಯವಸ್ಥೆ ಇರಲಿದೆ ಎಂದು ಹೇಳಿದರು.

ಹೇಗಿರುತ್ತೆ ಇ-ಹುಂಡಿ?
ಸುಮಾರು 5.5 ಅಡಿ ಎತ್ತರದ 300 ಕೆ.ಜಿ. ತೂಕದ ಸಾಧನ ಎಟಿಎಂ ಯಂತ್ರದ ಮಾದರಿಯಲ್ಲಿರುತ್ತದೆ. ನಾಣ್ಯ, ನೋಟುಗಳನ್ನು ಹಾಕುತ್ತಿದ್ದಂತೆ ಲೆಕ್ಕ ಹಾಕಿ ರಸೀದಿ ನೀಡಲಿದೆ. ಉನ್ನತ ಅಧಿಕಾರಿಗಳು ಕುಳಿತಲ್ಲೇ ನಿರ್ದಿಷ್ಟ ದೇವಾಲಯದ ‘ಇ-ಹುಂಡಿ’ಯಲ್ಲಿನ ಕಾಣಿಕೆ ಮೊತ್ತದ ವಿವರ ಪಡೆಯಲು ಅವಕಾಶವಿರಲಿದೆ. ಸಾಧನವನ್ನು ಹಾನಿಪಡಿಸಲು, ಹಣ ದೋಚಲು ಯತ್ನಿಸಿದರೆ ಎಚ್ಚರಿಕೆ ಗಂಟೆ ಮೊಳಗುವ ವ್ಯವಸ್ಥೆಯೂ ಇರಲಿದೆ. ನಾನಾ ಸೇವಾ ಕಾರ್ಯಗಳಿಗೆ ಶುಲ್ಕ ಪಾವತಿಸಿ ರಸೀದಿ ಪಡೆಯಲು ಅವಕಾಶವಿರುತ್ತದೆ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.