Education Department: ಪಿಯು ನಂತರ ಸಿಇಟಿಗೆ ಉಚಿತ ತರಬೇತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಸೆ. 20 ರೊಳಗಾಗಿ ವಾರವಿಡೀ ಮೊಟ್ಟೆ ವಿತರಣೆ ಜಾರಿ
Team Udayavani, Sep 6, 2024, 12:35 AM IST
ಬೆಂಗಳೂರು: ಪದವಿಪೂರ್ವ ಶಿಕ್ಷಣದ ನಂತರ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸರ್ಕಾರದಿಂದಲೇ ಉಚಿತವಾಗಿ ತರಬೇತಿ ಕೊಡಲಾಗುವುದು ಎಂದು ಘೋಷಿಸಿದ ಶಾಲಾ ಶಿಕ್ಷಣ ಮತ್ತು ಸಾರಕ್ಷತಾ ಇಲಾಖೆ ಸಚಿವ ಮಧು ಬಂಗಾರಪ್ಪ, ಸೆ.15 ಅಥವಾ 20 ರಿಂದ ಮಕ್ಕಳಿಗೆ ವಾರವಿಡಿ ಮೊಟ್ಟೆ ಕೊಡುವ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದೂ ಪ್ರಕಟಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ “ಅಕ್ಷರ ಆವಿಷ್ಕಾರ’ ಕಾರ್ಯಕ್ರಮದ ಮೂಲಕ 1008 ಎಲ್ಕೆಜಿ, ಯುಕೆಜಿ ತರಗತಿ ಆರಂಭಿಸಿದ್ದು, 40 ದಿನದಲ್ಲಿ 40 ಸಾವಿರ ಮಕ್ಕಳು ದಾಖಲಾಗಿದ್ದಾರೆ.
ಶೈಕ್ಷಣಿಕ ವರ್ಷದ ಮೊದಲ ದಿನವೇ 42,500 ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದ್ದೇವೆ, 12,500 ಶಾಲಾ ಶಿಕ್ಷಕರ ನೇಮಕ ಆಗಿದೆ. 9 ವರ್ಷದಿಂದ ನೇಮಕವಾಗದ ಅನುದಾನಿತ ಶಾಲೆಗಳಲ್ಲೂ 5 ವರ್ಷಕ್ಕೆ ಶಿಕ್ಷಕರ ನೇಮಕಾತಿ ಆಗಿದೆ. ಮುಂದಿನ ದಿನಗಳಲ್ಲಿ ಶಿಕ್ಷಕರು, ಉಪನ್ಯಾಸಕರ ಕೊರತೆ ನೀಗಿಸುತ್ತೇವೆ ಎಂದರು.
ಸಮಾನತೆ, ಬಂಧುತ್ವ, ಸಾಮಾಜಿಕ ನ್ಯಾಯ ಕೊಡುವ ಸಂವಿಧಾನದ ಪೀಠಿಕೆಯನ್ನು 1.06 ಕೋಟಿ ಮಕ್ಕಳು ಪ್ರತಿದಿನ ಓದುವಂತಾಗಿದೆ. ವಾರದಲ್ಲಿ 6 ದಿನವೂ ಹಾಲು, ರಾಗಿ ಮಾಲ್ಟ್, ಮಧ್ಯಾಹ್ನದ ಬಿಸಿಯೂಟ ಸಿಗುತ್ತಿದ್ದು, ವಾರದಲ್ಲಿ ಒಂದು ದಿನ ಸಿಗುತ್ತಿದ್ದ ಮೊಟ್ಟೆಯನ್ನು ವಾರದಲ್ಲಿ ಎರಡು ದಿನ ಕೊಡಲಾಗುತ್ತಿದೆ.
ಅಜೀಂ ಪ್ರೇಮ್ಜೀ ಪ್ರತಿಷ್ಠಾನದೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಪ್ರಕಾರ ಸೆ.15 ಅಥವಾ 20 ರಿಂದ 1500 ಕೋಟಿ ರೂ. ವೆಚ್ಚದಲ್ಲಿ 56 ಲಕ್ಷ ಮಕ್ಕಳಿಗೆ ವಾರವಿಡೀ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು ಕೊಡುವ ಕಾರ್ಯ ಆರಂಭವಾಗಲಿದೆ. ಎಲ್ಲಕ್ಕಿಂತ ಮಿಗಿಲಾಗಿ ಪಿಯು ನಂತರ ಸಿಇಟಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ಸರ್ಕಾರದಿಂದ ಉಚಿತ ತರಬೇತಿ ಕೊಡುವ ಚಿಂತನೆಯೂ ಇದ್ದು, ಈ ಬಾರಿಯಿಂದಲೇ ಶುರು ಮಾಡುತ್ತೇವೆ ಎಂದು ಪ್ರಕಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.