Environment: ಅಭಿವೃದ್ಧಿ ಹೆಸರಿನಲ್ಲಿ ಆಗುಂಬೆ, ಕೊಡಚಾದ್ರಿ ಮುಟ್ಟಿದರೆ ಆಪತ್ತು

"ಭೂ ಕುಸಿತ' ಸಂವಾದದಲ್ಲಿ ಹಿರಿಯ ಭೂ ವಿಜ್ಞಾನಿ ಡಾ.ಉದಯ ಶಂಕರ್‌

Team Udayavani, Aug 4, 2024, 7:18 AM IST

Udupi

ಉಡುಪಿ: ಪಶ್ಚಿಮಘಟ್ಟ ಪರಿಸರ ಅತ್ಯಂತ ಸೂಕ್ಷ್ಮ ಭೂಪದರ ಹೊಂದಿದೆ. ಆಗುಂಬೆ, ಕೊಡಚಾದ್ರಿ ಭಾಗದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡಲ್ಲಿ ಮುಂದಿನ ದಿನಗಳಲ್ಲಿ ಕೇರಳದ ವಯನಾಡಿನಂತೆ ಇಲ್ಲಿಯೂ ಭೂಮಿ ಜರಿಯುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ಎಂಐಟಿಯ ನಿವೃತ್ತ ಪ್ರಾಧ್ಯಾಪಕ, ಹಿರಿಯ ಭೂ ವಿಜ್ಞಾನಿ ಡಾ. ಉದಯಶಂಕರ್‌ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನ ಸಮಿತಿ ಸಹಯೋಗದಲ್ಲಿ ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ “ನೆರೆ-ಬೆಂಕಿ ಅವಘಡ-ಭೂಕುಸಿತ ಒಂದು’ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದರು.
ಪಶ್ಚಿಮ ಘಟ್ಟದ ಭೂರಚನೆ ಅತ್ಯಂತ ಸೂಕ್ಷ್ಮತೆಯಿಂದ ಕೂಡಿದ್ದು, ಕಾಮಗಾರಿ ಉದ್ದೇಶದಿಂದ ಬೃಹತ್‌ ಯಂತ್ರಗಳನ್ನು ಬಳಸಿ ಭೂಮಿಯನ್ನು ಅಗೆಯುವುದು, ಕೊರೆಯುವುದು ಮಾಡುವುದರಿಂದ ಸೂಕ್ಷ್ಮ ಪದರಗಳಿಗೆ ಹಾನಿಯಾದರೆ ಇದರ ಪರಿಣಾಮ ಸಾವಿರಾರು ಕಿ. ಮೀ. ವ್ಯಾಪ್ತಿಯವರೆಗೆ ಇರುತ್ತದೆ.

ಮಳೆ ಸುರಿಯುತ್ತಿರುವಾಗ ಭೂಪದರ ಸಡಿಲಗೊಂಡ ಪ್ರದೇಶಗಳಲ್ಲಿ ನೀರು ಒಳಗೆ ಸೇರುತ್ತದೆ. ಭೂಮಿಯ ಅಡಿಯಲ್ಲಿ ನೀರಿನ ಚಲನೆಗೆ ಒತ್ತಡ ಸೃಷ್ಟಿಯಾದಾಗ ಅಲ್ಲಲ್ಲಿ ಭೂಕುಸಿತ, ಭೂಮಿ ಜರಿಯುವುದು ಇತ್ಯಾದಿ ಸಂಭವಿಸುತ್ತದೆ. ಶಿರೂರು, ಶಿರಾಡಿ, ವಯನಾಡಿನಲ್ಲಿ ದುರ್ಘ‌ಟನೆ ಸಂಭವಿಸಿರುವುದು ಇದೇ ಪ್ರಕ್ರಿಯೆಯಿಂದಾಗಿ. ಇದೆಲ್ಲವೂ ಮಾನವ ನಿರ್ಮಿತ ವಿಕೋಪಗಳಾಗಿವೆ ಎಂದು ಅಭಿಪ್ರಾಯಪಟ್ಟರು.

ಆಗುಂಬೆ ಸುರಂಗ ಕಾಮಗಾರಿ ಅಪಾಯ
ಜೀವವೈವಿಧ್ಯಗಳ ಆಗರ, ಅಮೂಲ್ಯ ಸಸ್ಯ ಸಂಪತ್ತಿನ ತಾಣವಾದ ಆಗುಂಬೆಯಲ್ಲಿ ಸುರಂಗ ಕಾಮಗಾರಿ ನಡೆಸಿದಲ್ಲಿ ಅಂತರ್ಜಲ ವ್ಯವಸ್ಥೆಗೆ ಹಾನಿಯಾಗಿ ಜೀವವೈವಿಧ್ಯ ನಾಶವಾಗಲಿದೆ. ಕೊಡಚಾದ್ರಿಗೆ ರೋಪ್‌ವೇ ನಿರ್ಮಿಸುವುದು ಕೂಡ ದೊಡ್ಡ ಅನಾಹುತಕ್ಕೆ ಮುನ್ನುಡಿ ಬರೆದಂತೆ. ಮಣಿಪಾಲದ ಕುಂಡಲಕಾಡು ಸಹಿತ ಕೆಲವು ಪ್ರದೇಶಗಳು ಮುಂದಿನ ದಿನಗಳಲ್ಲಿ ಅಪಾಯಕಾರಿಯಾಗಲಿದೆ. ಭೂಮಿಗೆ ಹಾನಿ ಮಾಡದಂತೆ ಅಭಿವೃದ್ಧಿ ಕಾರ್ಯಗಳು ನಡೆಯಲಿ ಎಂದು ಆಶಿಸಿದರು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅಗೆಯುವ ಮುನ್ನ ವೈಜ್ಞಾನಿಕ ಪರಿಶೀಲನೆ ಅಗತ್ಯ
ಅಂಕೋಲ, ಶಿರೂರು ದುರ್ಘ‌ಟನೆ ಪ್ರಸ್ತಾವಿಸಿದ ಅವರು, ಇಲ್ಲಿ ಭೂಮಿಯ ಒಳಗಿನ ಸ್ಥಿತಿ ಹೇಗಿದೆ ಎಂದು ಅಧ್ಯಯನ ನಡೆಸದೆ 90 ಡಿಗ್ರಿ ಕೋನದಲ್ಲಿ ಗುಡ್ಡವನ್ನು ಕತ್ತರಿಸಲಾಗಿದೆ. ಈ ಪ್ರದೇಶ ಸಂಪೂರ್ಣ ನದಿ, ಬೆಟ್ಟ ಗಳಿಂದ ಆವೃತವಾಗಿದ್ದು, ಸಿವಿಲ್‌ ಎಂಜಿನಿಯರ್‌ಗಳು ರಸ್ತೆಯ ವಿನ್ಯಾಸ ಮಾಡುವ ಮೊದಲು ಭೂ ವಿಜ್ಞಾನಿಗಳ ಸಲಹೆ ಪಡೆಯ ಬೇಕು. ರಾ. ಹೆ. ಪ್ರಾಧಿಕಾರವು ಜಿಯಾಲಿಕಲ್‌ ಸರ್ವೇ ಆಫ್ ಇಂಡಿಯಾ ಎಂಜಿನಿಯರಿಂಗ್‌ ವಿಭಾಗದಿಂದ ಸಲಹೆ ಪಡೆದುಕೊಳ್ಳಬಹುದು. ಆದರೆ ಈ ಬಗ್ಗೆ ಆಡಳಿತ ವ್ಯವಸ್ಥೆ ಇಚ್ಛಾಶಕ್ತಿ ಮತ್ತು ಮಾರ್ಗದರ್ಶನದ ಕೊರತೆ ಇದೆ ಎಂದು ಡಾ| ಉದಯಶಂಕರ್‌ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.