Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಕೆ.ಸುರೇಂದ್ರ ಅವರನ್ನು ಕಣಕ್ಕಿಳಿಸಿತ್ತು.

Team Udayavani, Oct 28, 2024, 1:25 PM IST

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಚುನಾವಣೆ ನವೆಂಬರ್‌ 13ರಂದು ನಡೆಯಲಿದ್ದು, ಚುನಾವಣ ಅಖಾಡ ಈಗಾಗಲೇ ರಂಗೇರಿದೆ. ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಿರುದ್ಧ ಸ್ಪರ್ಧಿಸಲು ಸಿಪಿಐನ ಮಾಜಿ ಶಾಸಕ, ಎರಡು ಬಾರಿ ಕೌನ್ಸಿಲ(ಬಿಜೆಪಿ)ರ್‌ ಆಗಿದ್ದ ಮಹಿಳೆ, ತಮಿಳು-ಸಿಖ್‌ ಮಹಿಳೆ ಹುರಿಯಾಳಾಗಲು ಮುಂದಾಗಿದ್ದಾರೆ.

2019ರಿಂದ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ವಯನಾಡ್‌ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದು, 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ವಯನಾಡು ಮತ್ತು ಉತ್ತರಪ್ರದೇಶದ ರಾಯ್‌ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಿದ್ದ ರಾಹುಲ್‌ ಗಾಂಧಿ ರಾಯ್‌ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡು, ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ತೆರವಾಗಿದ್ದ ಕ್ಷೇತ್ರಕ್ಕೆ ನ.13ರಂದು ಚುನಾವಣೆ ನಡೆಯಲಿದೆ.

ಈ ಬಾರಿಯ ಚುನಾವಣೆಯಲ್ಲಿ ಐದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂಬ ನಿರೀಕ್ಷೆ ಇರುವುದಾಗಿ ಪ್ರಿಯಾಂಕಾ ಗಾಂಧಿ ಅಭಿಪ್ರಾಯವ್ಯಕ್ತಪಡಿಸಿದ್ದು, ಪಕ್ಷದ ಕಾರ್ಯಕರ್ತರು ಎಲ್ಲಾ ಬೂತ್‌ ಮಟ್ಟದಲ್ಲಿಯೂ ಈಗಾಗಲೇ ಪ್ರಚಾರ ಕಾರ್ಯ ಪೂರ್ಣಗೊಳಿಸಿದ್ದಾರೆ. ನಮಗೆ ಎಲ್ಲೆಡೆಯಿಂದಲೂ ಉತ್ತಮ ಸ್ಪಂದನೆ ದೊರಕಿದೆ ಎಂದು ತಿಳಿಸಿದ್ದಾರೆ.

2009ರಿಂದ ವಯನಾಡ್‌ ಲೋಕಸಭಾ ಕ್ಷೇತ್ರವಾದ ನಂತರ ಮತದಾರರು ಯುಡಿಎಫ್‌ (United Democratic Front)ಗೆ ಮತ ಚಲಾಯಿಸುತ್ತಿದ್ದಾರೆ. ಅದರ ಜೊತೆಗೆ ಹೆಚ್ಚು ಕಡಿಮೆ ವಿಪಕ್ಷವಾದ ಎಲ್‌ ಡಿಎಫ್‌ ಮತ್ತು ಭಾರತೀಯ ಜನತಾ ಪಕ್ಷ ದೀರ್ಘಕಾಲದಿಂದ ಬಾಕಿ ಉಳಿದಿರುವ ಸ್ಥಳೀಯ ವಿಷಯ, ಮೆಡಿಕಲ್‌ ಕಾಲೇಜು ಬೇಡಿಕೆ ಸೇರಿದಂತೆ ಹಲವು ವಿಚಾರಗಳೊಂದಿಗೆ ಭರ್ಜರಿಯಾಗಿ ಪ್ರಚಾರ ನಡೆಸುತ್ತಿವೆ.

ವಯನಾಡ್‌ ಲೋಕಸಭಾ ಕ್ಷೇತ್ರ ಮಾನಂತಾವಾಡಿ, ಸುಲ್ತಾನ್‌ ಬತ್ತೇರಿ, ಕಲಪೆಟ್ಟಾ, ಥಿರುವಂಬಾಡಿ, ನಿಲಾಂಬುರ್‌ ಮತ್ತು ವಾಂಡೂರು ವಿಧಾನಸಭಾ ಕ್ಷೇತ್ರವನ್ನೊಳಗೊಂಡಿದೆ ಎಂದು ವರದಿ ವಿವರಿಸಿದೆ.

ಸಿಪಿಐ ತಿರುಗೇಟು: ಈ ಬಾರಿಯ ಚುನಾವಣೆಯಲ್ಲಿ ವಯನಾಡ್‌ ಕ್ಷೇತ್ರದ ಜನತೆ ವಿಭಿನ್ನವಾಗಿ ಆಲೋಚಿಸುತ್ತಿದ್ದಾರೆ.  ವಯನಾಡಿನ ಸಮಸ್ಯೆಗಳು ನಿವಾರಣೆ ಮಾಡುವುದಾಗಿ ರಾಹುಲ್‌ ಗಾಂಧಿ ಭರವಸೆ ನೀಡಿದ್ದರು. ಆದರೆ ರಾಹುಲ್‌ ಯಾವ ಸಮಸ್ಯೆಯನ್ನು ಬಗೆಹರಿಸಿಲ್ಲ. ಅಲ್ಲದೇ ರಾಯ್‌ ಬರೇಲಿಯಲ್ಲಿ ಜಯಗಳಿಸುವ ಮೂಲಕ ವಯನಾಡ್‌ ಕ್ಷೇತ್ರದ ಜನರಿಗೆ ದ್ರೋಹ ಬಗೆದಿದ್ದಾರೆ ಎಂದು ಸಿಪಿಐನ ಹಿರಿಯ ಮುಖಂಡ, ಎಲ್‌ ಡಿಎಫ್‌ ಅಭ್ಯರ್ಥಿ ಸತ್ಯನ್‌ ಮೋಕೇರಿ ದ ಪ್ರಿಂಟ್‌ ಗೆ ತಿಳಿಸಿದ್ದಾರೆ.

ಸತ್ಯನ್‌ ಮಾಜಿ ಪತ್ರಕರ್ತ, ಕೇರಳದ ನಂದಪುರಂ ವಿಧಾನಸಭಾ ಕ್ಷೇತ್ರದ(1987-2001) ಶಾಸಕರಾಗಿದ್ದರು. ಸಿಪಿಐನ ಮುಖಂಡರಾಗಿರುವ ಸತ್ಯನ್‌, ಜನಪ್ರಿಯ ವ್ಯಕ್ತಿಯಾಗಿದ್ದು, ಈ ಬಾರಿಯೂ ಎಲ್‌ ಡಿಎಫ್‌ ಅಭ್ಯರ್ಥಿಯಾಗಿ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಅಖಾಡಕ್ಕಿಳಿದಿದ್ದಾರೆ. ಮೂರು ಬಾರಿ ಶಾಸಕರಾಗಿದ್ದ ಸತ್ಯನ್‌, ಪ್ರಸ್ತುತ ಆಲ್‌ ಇಂಡಿಯಾ ಕಿಸಾನ್‌ ಸಭಾದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿದ್ದಾರೆ.

ಈ ಕ್ಷೇತ್ರ ದಶಕಗಳ ಕಾಲದಿಂದಲೂ ಕಾಂಗ್ರೆಸ್‌ ಹಿಡಿತದಲ್ಲಿದೆ. ಶಹನವಾಸ್‌ ಕೂಡ ಈ ಕ್ಷೇತ್ರಕ್ಕೆ ಏನೂ ಮಾಡಿಲ್ಲ. ನಂತರ ಬಂದ ರಾಹುಲ್‌ ಗಾಂಧಿ ಕೂಡಾ ನಿಷ್ಕ್ರಿಯರಾಗಿದ್ದರು. ರಾಹುಲ್‌ ಮೂಲಭೂತ ಸಮಸ್ಯೆಯನ್ನೂ ಪರಿಹರಿಸಿಲ್ಲ ಎಂದು ವಯನಾಡ್‌ ಬಿಜೆಪಿ ಅಧ್ಯಕ್ಷ ಪ್ರಶಾಂತ್‌ ಮಾಳವಯಾಲ್‌ ದೂರಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಕೆ.ಸುರೇಂದ್ರ ಅವರನ್ನು ಕಣಕ್ಕಿಳಿಸಿತ್ತು. ಈ ಬಾರಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್‌ ಅವರನ್ನು ಅಖಾಡಕ್ಕಿಳಿಸಿದೆ. 39 ವರ್ಷದ ಮಾಜಿ ಐಟಿ ಉದ್ಯೋಗಿ ಪ್ರಸ್ತುತ ಬಿಜೆಪಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಕೋಝಿಕೋಡ್‌ ನಗರಪಾಲಿಕೆಯ ಕೌನ್ಸಿಲರ್‌ ಆಗಿದ್ದು, 2020ರಲ್ಲೂ ಪುನರಾಯ್ಕೆಯಾಗಿದ್ದರು.

ಎರಡು ಬಾರಿ ಕೌನ್ಸಿಲರ್‌ ಆಗಿರುವ ನವ್ಯಾ ಹರಿದಾಸ್‌ ಕೂಡಾ ಅಪರಿಚಿತ ಮುಖವಲ್ಲ. ಉನ್ನತ ಮಟ್ಟದ ಶಿಕ್ಷಣ ಪಡೆದಿರುವ ನವ್ಯಾ ಐಟಿ ಉದ್ಯೋಗ ತೊರೆದು, ರಾಜಕೀಯ ಪ್ರವೇಶಿಸಿದ್ದಾರೆ. ನವ್ಯಾ ವಯನಾಡು ಕ್ಷೇತ್ರದ ಸಮಸ್ಯೆಯನ್ನು ಅರಿತಿದ್ದು, ಈ ಬಾರಿ ಲೋಕಸಭಾ ಸಮರಕ್ಕೆ ಧುಮುಕಿರುವುದಾಗಿ ಮಾಳವಯಾಲ್‌ ತಿಳಿಸಿದ್ದಾರೆ.

ಕಳೆದ ಬಾರಿ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ 3,64,422 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಈ ಬಾರಿ ಸಹೋದರಿ ಪ್ರಿಯಾಂಕಾ ಗಾಂಧಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಜತೆಗೆ ಸಿಪಿಐ, ಬಿಜೆಪಿ ಕೂಡಾ ಸ್ಪರ್ಧಾ ಕಣದಲ್ಲಿದ್ದು, ಮತದಾರನ ಒಲವು ಯಾರ ಕಡೆಗೆ ಎಂಬುದು ಫಲಿತಾಂಶದ ಮೂಲಕ ಬಹಿರಂಗವಾಗಲಿದೆ.

ಟಾಪ್ ನ್ಯೂಸ್

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

1-D-C

German company; ಖಾಸಗಿತನ ರಕ್ಷಣೆಗಾಗಿ ಡಿಜಿಟಲ್‌ ಕಾಂಡೋಮ್‌

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Pranam devaraj starrer Son of muthanna movie

Son of Muthanna; ಮುತ್ತಣ್ಣನಿಗೆ ಶಿವಣ್ಣ ಸಾಥ್‌: ತಂದೆ-ಮಗನ ಬಾಂಧವ್ಯದ ಸುತ ಸಿನಿಮಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

2

Mangaluru: ನಾಳೆಯಿಂದ ನೀತಿ ಸಂಹಿತೆ ಸಡಿಲಿಕೆ; ನೂತನ ಮೇಯರ್‌ ಆಡಳಿತ ಶುರು

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

1

Mangaluru: ಸಂಗ್ರಹಿಸಿದ ಪ್ಲಾಸ್ಟಿಕನ್ನು ಏನ್ಮಾಡ್ತಾರೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.