![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jul 5, 2023, 7:30 AM IST
ಭೋಪಾಲ್: ಬುಡಕಟ್ಟು ಸಮುದಾಯದ ಕಾರ್ಮಿಕರೊಬ್ಬರ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ವರದಿಯಾಗಿದೆ. ಅಲ್ಲದೇ, ವ್ಯಕ್ತಿಯ ಈ ಅನಾಗರಿಕ ವರ್ತನೆಯ ವಿಡಿಯೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು , ಘಟನೆ ಬಗ್ಗೆ ತೀವ್ರ ಆಕ್ರೋಶವೂ ವ್ಯಕ್ತವಾಗಿದೆ.
ಪ್ರವೇಶ್ ಶುಕ್ಲಾ ಎಂಬಾತನು ಬುಡಕಟ್ಟು ಕಾರ್ಮಿಕರಾದ ಪಲೇಕೋಲ್ ಎಂಬವರ ಮೇಲೆ ಮೂತ್ರ ವಿರ್ಸರ್ಜಿಸಿ, ಅದನ್ನು ವಿಡಿಯೋ ಕೂಡ ಮಾಡಿದ್ದ. 6 ದಿನಗಳ ಹಿಂದಿನ ವಿಡಿಯೋ ಈಗ ಜಾಲತಾಣದಲ್ಲಿ ವೈರಲ್ ಆದ ಬಳಿಕ, ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ಗಮನಕ್ಕೂ ಬಂದಿದೆ. ಕೂಡಲೇ ಆರೋಪಿಯನ್ನು ಬಂಧಿಸಿ ಆತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅನ್ವಯ ಕೇಸು ದಾಖಲಿಸಲು ಸಿಎಂ ಪೊಲೀಸರಿಗೆ ಆದೇಶಿಸಿದ್ದಾರೆ.
ಈ ಬಗ್ಗೆ ಎಚ್ಚೆತ್ತುಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರವೇಶ್ ಶುಕ್ಲಾನನ್ನು ಬಂಧಿಸಿದ್ದಾರೆ. ಕೃತ್ಯವೆಸಗಿರುವ ವ್ಯಕ್ತಿ ಬಿಜೆಪಿ ಶಾಸಕ ಕೇದಾರ್ ಶುಕ್ಲಾ ಅವರ ಆಪ್ತ ಎಂದು ರಾಜ್ಯದ ಪ್ರತಿಪಕ್ಷಗಳು ಆರೋಪಿಸಿವೆ. ಇದಲ್ಲದೆ ಕೇದಾರ್ ಶುಕ್ಲಾ ಆರೋಪಿ ಜೊತೆಗಿನ ಫೋಟೋವನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಈ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಎಂದು ಬಿಜೆಪಿ ಹೇಳಿದೆ.
ಆದರೆ, ಪ್ರವೇಶ್ ಶುಕ್ಲಾ ಅವರ ತಂದೆ ರಮಾಕಾಂತ್ ಶುಕ್ಲಾ ತನ್ನ ಮಗ ಕೇದಾರ್ ಶುಕ್ಲಾ ಅವರ ಪ್ರತಿನಿಧಿ ಎಂದು ಹೇಳಿದ್ದಾರೆ. ‘‘ಅವರು ಬಿಜೆಪಿ ಶಾಸಕರ ಪ್ರತಿನಿಧಿಯಾಗಿರುವುದರಿಂದ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ” ಎಂದಿದ್ದಾರೆ.
मध्यप्रदेश में अमानवीयता की हदें पार, आदिवासी युवक के चेहरे पर किया गया पेशाब। अपराधी व्यक्ति भाजपा का कार्यकर्ता प्रवेश शुक्ला बताया जा रहा है. वीडियो सोशल मीडिया पर वायरल…@MPDial100 @ChouhanShivraj pic.twitter.com/lkL5Ss11dj
— Dalit Times | दलित टाइम्स (@DalitTime) July 4, 2023
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…
Jamui: ಸಾಲ ರಿಕವರಿಗೆ ಬಂದ ಏಜೆಂಟ್ ನನ್ನೇ ಮದುವೆಯಾದ ವಿವಾಹಿತ ಮಹಿಳೆ!
Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ
Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!
You seem to have an Ad Blocker on.
To continue reading, please turn it off or whitelist Udayavani.