Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಲೆಬನಾನ್‌ನ ವಿವಿಧ ಪ್ರದೇಶಗಳಲ್ಲಿ ಸಂಭವಿಸಿದ ಸ್ಫೋಟ, 450 ಮಂದಿಗೆ ತೀವ್ರ ಗಾಯ

Team Udayavani, Sep 19, 2024, 5:50 AM IST

Explod

ಬೈರುತ್‌: ಹೆಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ಲೆಬನಾನ್‌ನಲ್ಲಿ ಒಂದೇ ಬಾರಿಗೆ 1 ಸಾವಿರಕ್ಕೂ ಅಧಿಕ ಪೇಜರ್‌ಗಳನ್ನು ಸ್ಫೋಟಿಸಿದ್ದ ಬೆನ್ನಲ್ಲೇ ಬುಧವಾರ ಮತ್ತೆ 3 ಸಾವಿರ ಹೆಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ವಾಕಿಟಾಕಿ, ವೈರ್‌ಲೆಸ್‌ ರೇಡಿಯೋ ಗಳನ್ನು ಸ್ಫೋಟಿಸಲಾಗಿದೆ. ಈ ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, 450ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪೇಜರ್‌ಗಳನ್ನು ಖರೀದಿಸಿದ್ದ ಸಂದರ್ಭದಲ್ಲೇ ಈ ವಾಕಿ-ಟಾಕಿ ಮತ್ತು ರೇಡಿಯೋಗಳನ್ನೂ ಖರೀದಿಸಲಾಗಿತ್ತು ಎನ್ನುವ ಮಾಹಿತಿ ಹೊರಬಿದ್ದಿದ್ದು, ಲೆಬನಾನ್‌ ಜನರಲ್ಲಿ ಘಟನೆ ಆತಂಕ ಹೆಚ್ಚಿಸಿದೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಬೈರೂತ್‌, ಬೈಕಾ ವ್ಯಾಲಿ ಹಾಗೂ ದಕ್ಷಿಣ ಲೆಬನಾನ್‌ನಲ್ಲಿ ವಾಕಿ-ಟಾಕಿ ಮತ್ತು ವೈರ್‌ಲೆಸ್‌ ರೇಡಿಯೋಗಳು ಸ್ಫೋಟಗೊಂಡಿವೆ. ಹಲವು ಪ್ರದೇಶಗಳಲ್ಲಿ ಮನೆಯ ಸೌರಶಕ್ತಿ ವ್ಯವಸ್ಥೆಗಳೂ ಸ್ಫೋಟಗೊಂಡಿವೆ ಎನ್ನಲಾಗಿದೆ. ಮಂಗಳವಾರ ನಡೆದಿದ್ದ ಪೇಜರ್‌ ಸ್ಫೋಟದಿಂದ 12 ಮಂದಿ ಮೃತಪಟ್ಟಿದ್ದರು. ಈಗ ಈ ಘಟನೆಯನ್ನೂ ಹೆಜ್ಜುಲ್ಲಾ ನಾಯ ಕರು ಇಸ್ರೇಲ್‌ ನಡೆಸಿದೆ ಎಂದು ಆರೋಪಿಸಿದ್ದಾರೆ.

ಅಂತ್ಯಸಂಸ್ಕಾರದ ವೇಳೆಯೇ ಸ್ಫೋಟ
ಮಂಗಳವಾರ ಪೇಜರ್‌ ಸ್ಫೋಟ ದಿಂದ ಮೃತಪಟ್ಟ ಹೆಜ್ಬುಲ್ಲಾ ಸಂಘ ಟನೆಯ ನಾಲ್ವರ ಅಂತಿಮ ಸಂಸ್ಕಾರ ಬೈರೂತ್‌ನಲ್ಲಿ ನಡೆಯುತ್ತಿತ್ತು. ಈ ವೇಳೆಯೇ ವಾಕಿ-ಟಾಕಿಗಳು ಸ್ಫೋಟಗೊಂಡಿವೆ. ಹಲವರು ಗಾಯಗೊಂಡಿದ್ದು, ಜಾಲತಾಣಗಳಲ್ಲೂ ಈ ವೀಡಿಯೋ ವೈರಲ್‌ ಆಗಿದೆ.


ಏನೇನಾಯ್ತು?
* ಬೈರೂತ್‌, ಬೈಕಾ ವ್ಯಾಲಿ, ದ.ಲೆಬನಾನ್‌ನ ಹಲವೆಡೆ ಕೃತ್ಯ
* ವೈರ್‌ಲೆಸ್‌ ರೇಡಿಯೋಗಳು ಕೂಡ ಇದ್ದಕ್ಕಿದ್ದಂತೆ ಚೂರು
* ಕೆಲವಡೆ ಮನೆಯ ಸೌರಶಕ್ತಿ ವ್ಯವಸ್ಥೆ ಗಳೂ ಸ್ಫೋಟ

ಪೇಜರ್‌ಗೆ ಸ್ಫೋಟಕ ತುಂಬಿದ್ದು  ಇಸ್ರೇಲ್‌?
ಹೊಸದಿಲ್ಲಿ: ಲೆಬನಾನ್‌ನಲ್ಲಿ ಪೇಜರ್‌ ಸ್ಫೋಟಗೊಳ್ಳಲು ಇಸ್ರೇಲ್‌ನ ಬೇಹುಗಾರಿಕೆ ಸಂಸ್ಥೆ ಮೊಸಾದ್‌ ಕಾರಣ ಎಂದು ವರದಿಯೊಂದು ತಿಳಿಸಿದೆ. ಪೇಜರ್‌ಗಳು ಲೆಬನಾನ್‌ ತಲುಪುವ ಮೊದಲೇ ಮೊಸಾದ್‌ ಈ ಪೇಜರ್‌ಗಳಲ್ಲಿ 3 ಗ್ರಾಂ ಸ್ಫೋಟಕ ಅಳವಡಿಸಿದೆ ಎಂದು ಹೆಜ್ಬುಲ್ಲಾ ಮೂಲಗಳನ್ನುಲ್ಲೇಖೀಸಿ ಮಾಧ್ಯಮ ವೊಂದು ವರದಿ ಮಾಡಿದೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.