ಕುಲುಮೆಯಂತಾದ ಯುಕೆ; ಹಲವೆಡೆ ಕಾಡ್ಗಿಚ್ಚು: ಗರಿಷ್ಠ 39 ಡಿಗ್ರಿ ಸೆಲ್ಸಿಯಸ್‌ ದಾಖಲು

ಹೀತ್ರೋ ವಿಮಾನ ನಿಲ್ದಾಣದಲ್ಲಿ 40.2 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ

Team Udayavani, Jul 20, 2022, 7:15 AM IST

ಕುಲುಮೆಯಂತಾದ ಯುಕೆ; ಹಲವೆಡೆ ಕಾಡ್ಗಿಚ್ಚು: ಗರಿಷ್ಠ 39 ಡಿಗ್ರಿ ಸೆಲ್ಸಿಯಸ್‌ ದಾಖಲು

ಲಂಡನ್‌: ಯುನೈಟೆಡ್‌ ಕಿಂಗ್‌ಡಮ್‌ನ ಇತಿಹಾಸದಲ್ಲೇ ಕಂಡುಕೇಳರಿಯದಂಥ ಉಷ್ಣ ಹವೆಯ ಮಾರುತಗಳು ಇಡೀ ದೇಶ ಹಾಗೂ ಯೂರೋಪ್‌ನ ಇನ್ನಿತರ ದೇಶಗಳನ್ನು ಆವರಿಸಿದ್ದು, ಜನಜೀವನ ತಲ್ಲಣಗೊಂಡಿದೆ. ಹಲವಾರು ಕಡೆ ಬೆಂಕಿ ಅನಾಹುತಗಳು ಸಂಭವಿಸಿದ್ದು, ಉಷ್ಣಹವೆಯು ಹಲವರ ಬಲಿಯನ್ನೂ ಪಡೆದಿದೆ.

ಎರಡು ದಿನಗಳವರೆಗೆ ಅತಿ ಹೆಚ್ಚು ಉಷ್ಣಾಂಶ ಇರಲಿದೆ ಎಂದು ತಜ್ಞರು ಹೇಳಿದ್ದ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕರಿಗೆ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೊಳಿಸಿತ್ತು. ಬ್ರಿಟನ್‌ ಆರೋಗ್ಯ ಇಲಾಖೆಯು, ಯಾರೊಬ್ಬರೂ ಮನೆಗಳಿಂದ ಅನವಶ್ಯಕವಾಗಿ ಹೊರಬಾರದಂತೆ ಎಚ್ಚರಿಕೆ ನೀಡಿತ್ತು. ರೈಲು, ಬಸ್ಸು ಹಾಗೂ ವಿಮಾನ ಸೇವೆಗಳನ್ನು ಮಿತಿಗೊಳಿಸಲಾಗಿತ್ತು. ಲ್ಯೂಟನ್‌ ನಾರ್ಟನ್‌ ಹಾಗೂ ರಾಯಲ್‌ ಏರ್‌ಫೋರ್ಸ್‌ ಬ್ರಿಜ್‌ ನಾರ್ಟನ್‌ ಸೇವೆಗಳಲ್ಲೂ ವ್ಯತ್ಯಯ ಉಂಟಾಗಿತ್ತು.

ಬ್ರಿಟನ್‌ನಲ್ಲಿ ಮಂಗಳವಾರ ಗರಿಷ್ಠ 39.1 ಉಷ್ಣಾಂಶ ದಾಖಲಾಗಿದೆ. ಆದರೆ, ಹೀತ್ರೋ ವಿಮಾನ ನಿಲ್ದಾಣದಲ್ಲಿ 40.2 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿತ್ತು. ಅಗತ್ಯವಿದ್ದರಷ್ಟೇ ಜನರು ಪ್ರಯಾಣಿಸಬೇಕೆಂದು ಸೂಚಿಸಲಾಗಿತ್ತು. ಆದರೆ, ದೇಶದ ಅಲ್ಲಲ್ಲಿ ಬಿಸಿಲಿನ ಬೇಗೆಯನ್ನು ತಾಳಲಾರದೆ ನದಿ, ಕೆರೆಗಳಲ್ಲಿ ಈಡಾಜಲು ಹೋದವರಲ್ಲಿ ಐವರು ಮೃತಪಟ್ಟಿರುವ ಘಟನೆಗಳು ನಡೆದಿವೆ.

ಉಷ್ಣ ಹವೆಯಿಂದ ಹಲವೆಡೆ ಕಾಡ್ಗಿಚ್ಚು
ಬೇಸಗೆಯಲ್ಲೂ ತಣ್ಣಗಿರುವ ಪ್ರಾಂತ್ಯವೆಂದೇ ಪ್ರಸಿದ್ಧಿಯಾದ ಬ್ರಿಟನ್‌ನ ಪಶ್ಚಿಮ ಭಾಗದಲ್ಲಿರುವ ಬ್ರಿಟಾನಿಯಲ್ಲಿ ಉಷ್ಣ ಹವೆಯಿಂದಾಗಿ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು. ಇದರಂತೆ, ಫ್ರಾನ್ಸ್‌, ಗ್ರೀಸ್‌, ಪೋರ್ಚುಗಲ್‌, ಸ್ಪೇನ್‌ ಸೇರಿದಂತೆ ಯೂರೋಪ್‌ನ ಹಲವಾರು ಕಡೆ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಫ್ರಾನ್ಸ್‌ನ ನೈರುತ್ಯ ಭಾಗದಲ್ಲಿರುವ ಅರಣ್ಯ ಪ್ರಾಂತ್ಯದಲ್ಲಿ ಕಾಣಿಸಿಕೊಂಡಿರುವ ಕಾಡ್ಗಿಚ್ಚಿನಿಂದಾಗಿ 17,000 ಹೆಕ್ಟೇರ್‌ಗಳಲ್ಲಿನ ಅರಣ್ಯ ನಾಶವಾಗಿದೆ. ಕಾಡ್ಗಿಚ್ಚನ್ನು ನಂದಿಸಲು ಅಲ್ಲಿನ ಅಗ್ನಿಶಾಮಕ ದಳದ 1,700 ಸಿಬ್ಬಂದಿ ಅವಿರತ ಪ್ರಯತ್ನಿಸುತ್ತಿದ್ದಾರೆ.

ಸ್ಪೇನ್‌ನ ಝಮೋರಾ ಪ್ರಾಂತ್ಯದ ಅರಣ್ಯ ಪ್ರದೇಶದಲ್ಲಿ ಸಾಗುತ್ತಿದ್ದ ರೈಲನ್ನು, ಹಳಿಯ ಎರಡೂ ಬದಿಯ ಪೊದೆಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡ ಕಾರಣಕ್ಕಾಗಿ ಕೆಲವು ಗಂಟೆಗಳ ಕಾಲ ನಿಲ್ಲಿಸಲಾಗಿತ್ತು. ಸ್ಪೇನ್‌ನ ಪಶ್ಚಿಮ ಭಾಗದಲ್ಲಿರುವ ತಬಾರಾದಲ್ಲಿ ಕಾಡಿಗೆ ತೆರಳಿದ್ದ ಯುವಕನೊಬ್ಬ ಹಠಾತ್ತಾಗಿ ಸುತ್ತಲೂ ಆವರಿಸಿದ ಕಾಡ್ಗಿಚ್ಚಿನಿಂದ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾನೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

1-brit

United Kingdom ಚುನಾವಣೆ: ಭಾರತಕ್ಕೆ ಸಿಹಿ/ಕಹಿ?

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

Jaishankar

Border ಅತಿಕ್ರಮಣ ಬೇಡ: ಚೀನಕ್ಕೆ ಭಾರತ ಎಚ್ಚರಿಕೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.