Fake Marriage: ನಕಲಿ ವಧು ಜತೆ ಅಸಲಿ ಮದುವೆ ಮಾಡಿಸುತ್ತಿದ್ದ ತಂಡ ಪೊಲೀಸ್‌ ಬಲೆಗೆ

ಮೂರು ವರ್ಷದಲ್ಲಿ ನಾಲ್ಕು ಮೋಸದ ಮದುವೆಯಾದ ವಧು!, ಮದುವೆ ಬಳಿಕ ಹಣ, ಒಡವೆ ಜತೆ ಪರಾರಿ

Team Udayavani, Aug 13, 2024, 9:20 PM IST

Gubbi

ಗುಬ್ಬಿ: ಮದುವೆಯ ನಾಟಕವಾಡಿ ಒಡವೆ, ಹಣ ದೋಚುತ್ತಿದ್ದ ನಾಲ್ವರು ಖದೀಮರ ತಂಡವನ್ನು ಬಂಧಿಸುವಲ್ಲಿ ಗುಬ್ಬಿ ಪೊಲೀಸರು (Police)  ಯಶಸ್ವಿಯಾಗಿದ್ದಾರೆ.

ಮದುವೆ ಹೆಸರಲ್ಲಿ ಅವಿವಾಹಿತರನ್ನೇ ಗುರಿಯಾಗಿಸಿ ಬ್ರೋಕರ್ ಗಳ ತಂಡ ಗ್ರಾಮೀಣ ಭಾಗದಲ್ಲಿ ಮದುವೆ ಮಾಡಲು ಹಾತೊರೆಯುವ ಕುಟುಂಬಗಳ ನಂಬಿಸಿ ಸಂಪ್ರದಾಯದಂತೆ ಮದುವೆ ಮಾಡಿಕೊಂಡು ಹಣ-ಚಿನ್ನದೊಂದಿಗೆ ವ್ಯವಸ್ಥಿತವಾಗಿ ಪರಾರಿಯಾಗುತ್ತಿದ್ದ ತಂಡವನ್ನು ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಲಕ್ಷ್ಮೀ ಬಾಳ ಸಾಬ್ ಜನಕರ್ ಅಲಿಯಾಸ್ ಕೋಮಲಾ , ಸಿದ್ದಪ್ಪ , ಲಕ್ಷ್ಮೀಬಾಯಿ, ಲಕ್ಷ್ಮಿ ಬಂಧಿತರು. ಲಕ್ಷ್ಮೀ ಬಾಳ ಸಾಬ್ ಜನಕರ್ ಅಲಿಯಾಸ್ ಕೋಮಲಾ ಮಧುಮಗಳು. ಚಿಕ್ಕಪ್ಪ ಪಾತ್ರಧಾರಿ ಸಿದ್ದಪ್ಪ, ಚಿಕ್ಕಮ್ಮ ಪಾತ್ರ ಧಾರಿ ಲಕ್ಷ್ಮೀಬಾಯಿ ಹಾಗೂ
ಬ್ರೋಕರ್‌ ಲಕ್ಷ್ಮಿ ಬಂಧಿತರು. ನಕಲಿ ವಧುವಿಗೆ ಇಬ್ಬರು ಬೆಳೆದು ನಿಂತ ಮಕ್ಕಳಿದ್ದಾರೆ ಎಂಬುದು ಅಚ್ಚರಿ ತಂದಿದೆ.

ಗುಬ್ಬಿ ಸೇರಿದಂತೆ ರಾಜ್ಯದ ಹಲವೆಡೆ ಮುಗ್ಧ ಕುಟುಂಬವನ್ನು ಯಾಮಾರಿಸಿದ್ದ ತಂಡ ಮೂರು ವರ್ಷದಲ್ಲಿ ನಾಲ್ಕು ನಕಲಿ ಮದುವೆ ನಡೆಸಿ ಹಣ, ಚಿನ್ನಾಭರಣ ದೋಚಿ ನಾಪತ್ತೆಯಾಗಿದ್ದ ಘಟನೆ ನಡೆದಿತ್ತು.ಈ ಪೈಕಿ ಗುಬ್ಬಿ ತಾಲೂಕಿನ ಅತ್ತಿಗಟ್ಟೆ ಗ್ರಾಮದಲ್ಲಿ ಪಾಲಾಕ್ಷ್ಯ ಎಂಬವರ ಮಗನಿಗೆ ನಕಲಿ ವಧು ಸೃಷ್ಟಿಸಿ ಸಂಪ್ರದಾಯದಂತೆ ಮದುವೆ ನಡೆಸಿದ್ದಾರೆ. ದಯಾನಂದ ಮೂರ್ತಿ(38) ಅಸಲಿ ಗಂಡಿಗೆ ಹೆಣ್ಣು ಹುಡುಕುವ ತವಕದಲ್ಲಿ ಈ ಮೋಸದ ಜಾಲಕ್ಕೆ ಪಾಲಕ್ಷ್ಯ ಕುಟುಂಬ ಸಿಲುಕಿದೆ.

ಘಟನೆ ಹಿನ್ನೆಲೆ:
ಕುಷ್ಟಗಿ ಮೂಲದ ಬಸವರಾಜು ಮೂಲಕ ಬ್ರೋಕರ್ ಲಕ್ಷ್ಮಿ ಎಂಬಾಕೆಯ ಪರಿಚಯ ಮಾಡಿಕೊಂಡ ಪಾಲಾಕ್ಷ್ಯ ಅವರ ಮದುವೆ ಕನಸಿಗೆ ಮತ್ತಷ್ಟು ಆಸೆ ಹುಟ್ಟಿಸಿ ಹುಬ್ಬಳ್ಳಿಯಲ್ಲಿ ಉತ್ತಮ ಹುಡುಗಿ ಇದ್ದಾಳೆ. ಆಕೆಗೆ ತಂದೆ, ತಾಯಿ ಇಲ್ಲ ನೀವೆ ಮದುವೆ ಮಾಡಿಕೊಳ್ಳಬೇಕೆಂದು ಸುಳ್ಳು ಹೇಳಿ ಕೋಮಲಾ ಎಂಬ ಹೆಸರಿನಲ್ಲಿ ಯುವತಿಯ ಪೋಟೋ ತೋರಿಸಿದ್ದರು.

ವರನ ಮನೆ ನೋಡಲು ತಾಲೂಕಿನ ಅತ್ತಿಕಟ್ಟೆ ಗ್ರಾಮಕ್ಕೆ ಬಂದಿದ್ದ ನಕಲಿ ವಧು ಜೊತೆಗೆ ನಕಲಿ ಚಿಕ್ಕಮ್ಮ, ಚಿಕ್ಕಪ್ಪ,  ಕಳೆದ ವರ್ಷದ ನವೆಂಬರ್‌ನಲ್ಲಿ ವರನ ಮನೆಗೆ ಬಂದು ಅಂದೇ ಮದುವೆ ಮಾತುಕತೆ ನಡೆಸಿ ಮರುದಿನವೇ ಅತ್ತಿಕಟ್ಟೆ ಗ್ರಾಮದಲ್ಲೇ ದೇವಸ್ಥಾನದ ಬಳಿ ಮದುವೆ ಮಾಡಿ ಮುಗಿಸಿ ತಮ್ಮ ಮೋಸದ ಜಾಲ ಯಶಸ್ವಿಗೊಳಿಸಿದರು.

ಸಂಪ್ರದಾಯದ ಹೆಸರಲ್ಲಿ ಹೊರಟ ನಕಲಿ ವಧು:
ಮಧು ಮಗಳಿಗೆ ಚಿನ್ನದ ಸರ, ತಾಳಿ, ಕಿವಿಗೆ ಓಲೆ ಒಟ್ಟು 25 ಗ್ರಾಂ ಚಿನ್ನಾಭರಣ ನೀಡಿದ್ದ ಪಾಲಾಕ್ಷ್ಯ ಇಡೀ ನಕಲಿ ಮದುವೆಯ ಸೂತ್ರಧಾರಿ ಬ್ರೋಕರ್‌ ಲಕ್ಷ್ಮಿಗೆ 1.5 ಲಕ್ಷ ಹಣ ನೀಡಿದ್ದರು. ಹೆಣ್ಣಿನ ಕಡೆಯವರು ಅಂತ 8 ಜನರ ಕರೆ ತಂದಿದ್ದ ಬ್ರೋಕರ್‌ ಲಕ್ಷ್ಮಿ ಮದುವೆ ಮುಗಿದ ಎರಡು ದಿನದ ನಂತರ ಸಂಪ್ರದಾಯದ ಹೆಸರಿನಲ್ಲಿ ಚಿನ್ನಾಭರಣ ಸಹಿತ ಯುವತಿಯೊಬ್ಬಳನ್ನೇ ವಾಪಸ್‌ ಕರೆದುಕೊಂಡು ಹೊರಟರು. ಒಂದು ವಾರ ಕಳೆದರೂ ವಾಪಸ್‌ ಬಾರದ ಮಧುಮಗಳ ಬಗ್ಗೆ ಆತಂಕಗೊಂಡ ಪಾಲಾಕ್ಷ್ಯ ಹುಬ್ಬಳ್ಳಿಗೆ ಹೋಗಿ ವಿಚಾರಿಸಿದಾಗ ಸತ್ಯ ಬಯಲಾಗಿದೆ.

ವಾಪಸ್‌ ಗುಬ್ಬಿಗೆ ಬಂದ ಪಾಲಕ್ಷ್ಯ ಮದುವೆ ಮಾಡಿಸಿದ ತಂಡದ ವಿರುದ್ಧ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಗುಬ್ಬಿ ಪೊಲೀಸರು ನಿರಂತರ ತನಿಖೆ ನಡೆಸಿ ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದ ನಾಲ್ವರು ಆರೋಪಿಗಳ ಮಹಾರಾಷ್ಟ್ರ, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಬಂಧಿಸಿದರು.

ಮದುವೆ ಮಾಡಿ ವಂಚನೆ ಮಾಡುವುದನ್ನೇ ವೃತ್ತಿ ಮಾಡಿಕೊಂಡಿದ್ದ ತಂಡ ನಕಲಿ ವಿಳಾಸದಲ್ಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿಕೊಳ್ಳುತ್ತಿದ್ದರು. ಆಧಾರ್ ಕಾರ್ಡ್ ತೋರಿಸಿ ಗಂಡಿನ‌ ಮನೆಯವರ ನಂಬಿಸುತ್ತಿದ್ದರು. ನಾಲ್ವರಿಗೂ ಹೆಚ್ಚು ಜನರಿಗೆ ಮದುವೆ ಹೆಸರಿನಲ್ಲಿ ದೋಖಾ ಮಾಡಿದ್ದ ಗ್ಯಾಂಗ್‌ ಈಗ ಜೈಲಿನ ಕಂಬಿ ಎಣಿಸುತ್ತಿದೆ.

ಟಾಪ್ ನ್ಯೂಸ್

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.