ಕೃಷಿಕರ ಚಿತ್ತ ಸೆಳದ ಕೃಷಿ ಯಂತ್ರ ಮೇಳ

ವಿವೇಕಾನಂದ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಆ್ಯಂಡ್‌ ಟೆಕಾಲಜಿಯ ಆವರಣದಲ್ಲಿ ಕೃಷಿ ಯಂತ್ರ ಮೇಳ

Team Udayavani, Feb 11, 2023, 9:59 AM IST

farm

ಪುತ್ತೂರು: ಅನ್ನದಾತರಿಗೆ ನೆರವಾಗುವ ನವೋದ್ಯಮಗಳು, ಔಷಧ ಸಿಂಪಡಣೆಗೆ ಬಗೆ-ಬಗೆಯ ಯಂತ್ರಗಳು, ಆಲಂಕಾರಿಕ ಮೀನುಗಳು, ಕಳೆ ತೆಗೆಯಲು ತರಹೇವಾರಿ ಯಂತ್ರಗಳು, ವಿವಿಧ ತಳಿಯ ಹಣ್ಣು, ಹೂವಿನ ಗಿಡಗಳು, ಎಲೆಕ್ಟ್ರಿಕ್‌ ವಾಹನಗಳು… ವೀಕ್ಷಣೆಗೆ, ಖರೀದಿಗೆ ಮುಗಿ ಬಿದ್ದ ಜನ. ಈ ಚಿತ್ರಣ ಕಂಡುಬಂದಿದ್ದು ನೆಹರೂ ನಗರದ ವಿವೇಕಾನಂದ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಆ್ಯಂಡ್‌ ಟೆಕ್ನಾಲಜಿಯ ಆವರಣದಲ್ಲಿ ಫೆ.10 ರಿಂದ 12 ರ ತನಕ 3 ದಿನಗಳ ಕಾಲ ನಡೆಯಲಿರುವ ಬೃಹತ್‌ ಕೃಷಿಯಂತ್ರ ಮೇಳ-2023 ಮತ್ತು ಕನಸಿನ ಮನೆ ಪ್ರದರ್ಶನದ ಮೊದಲ ದಿನ. ಹದವಾಗಿ ನೆತ್ತಿ ಸುಡುತ್ತಿದ್ದ ಬಿಸಿಲಿನ
ನಡುವೆಯೂ ಕೃಷಿ ಯಂತ್ರ ಮೇಳಕ್ಕೆ ಮೊದಲ ದಿನವಾದ ಶುಕ್ರವಾರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮೇಳವುದ್ದಕ್ಕೂ ಕೃಷಿಕರ ಓಡಾಟ ಕಂಡು ಬಂತು. ಇಡೀ ಮೇಳದ ಅಚ್ಚು ಕಟ್ಟಿನ ವ್ಯವಸ್ಥೆ, ಸುತ್ತಾಟ ಕೃಷಿಕರ ಹುಮ್ಮಸ್ಸು ಹೆಚ್ಚಿಸಿತ್ತು.

ಹೊಸ ಸಂಶೋಧನೆಗಳ ಪ್ರದರ್ಶನ

ಮೇಳದಲ್ಲಿ ಸಾಧಕ ರೈತರ ಪರಿಶ್ರಮ, ಕೃಷಿಯಲ್ಲಿ ಲಾಭ ಕಂಡುಕೊಂಡ ಬಗೆ ಅನಾವರಣಗೊಂಡಿತ್ತು. ಹನಿ ನೀರಾವರಿ ಪದ್ಧತಿ, ಛಾವಣಿ ಹಾಗೂ ಮಳೆ ನೀರು ಸಂಗ್ರಹ ವಿಧಾನ, ಮಣ್ಣು ರಹಿತ ಕೃಷಿಯ ಆವಿಷ್ಕಾರ, ಕೃಷಿ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆಗಳು ಮೇಳದಲ್ಲಿ ಗಮನ ಸೆಳೆಯುತ್ತಿವೆ. ಮೇಳದಲ್ಲಿ 250ಕ್ಕೂ ಅಧಿಕ ಮಳಿಗೆಗಳು ಇದ್ದು ಪ್ರತೀ ಮಳಿಗೆಯೂ ವಿಭಿನ್ನ ರೀತಿ ಅನುಭವ ಕಟ್ಟಿಕೊಟ್ಟವು. ತಾಲೂಕು-ಹೊರ ತಾಲೂಕಿನ ಬೇರೆ ಬೇರೆ ಭಾಗದಿಂದ ಆಗಮಿಸಿದ್ದ ರೈತರು ಪ್ರತೀ ಮಳಿಗೆಯತ್ತಲೂ ಕಣ್ಣು ಹಾಯಿಸಿ ಮಾಹಿತಿ ಪಡೆದುಕೊಂಡರು. ಯಂತ್ರೋಪಕರಣ ಮಳಿಗೆಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದವು. ರೈತರ ನೆರವಿಗೆ ವಿವಿಧ ಕಂಪೆನಿಗಳು ನಿರ್ಮಿಸಿರುವ ಉಪಕರಣಗಳು ಮೇಳದಲ್ಲಿ ಗಮನ ಸೆಳೆಯುತ್ತಿವೆ. ಸ್ಥಳದಲ್ಲಿಯೇ ಮಡಿಕೆ ತಯಾರಿಕೆ ಪ್ರಾತ್ಯಕ್ಷಿಕೆ ಕೂಡ ಮನ ಸೆಳೆಯಿತು. ಅಟೋಮೊಬೈಲ್‌, ಆಹಾರ ಮಳಿಗೆ‌ಗಳು, ವ್ಯಾಪಾರ ಮಳಿಗೆ, ಸಾವಯವ ಸಿರಿ ಮಳಿಗೆಗಳು, ಡ್ರೋನ್‌ ಮೂಲಕ ಅಡಿಕೆಗೆ ಔಷಧ ಸಿಂಪಡಣೆಯ ಪ್ರಾತ್ಯಕ್ಷಿಕೆಯ ಅನುಭವ, ಸುಸಜ್ಜಿತ ಕಾರ್ಬನ್‌ ಫೈಬರ್‌ ದೋಟಿಗಳ ಪ್ರದರ್ಶನ, ಜಲಕೃಷಿ ವಿಧಾನದ ಸಮಗ್ರ ಪರಿಚಯ ಮೊದಲಾದವುಗಳ ಕೃಷಿ ಪ್ರಿಯರನ್ನು ಆಕರ್ಷಿಸಿತ್ತು.

ಜನರನ್ನು ಸೆಳೆದ ಪಾರಂಪರಿಕ ಗ್ರಾಮ

ಪಾರಂಪರಿಕ ಗ್ರಾಮ ನಿರ್ಮಾಣ ವೀಕ್ಷಕರ ಗಮನ ಸೆಳೆಯಿತು. ತಟ್ಟಿ ಹೆಣೆಯುವಿಕೆ, ಮೀನು ಬೇಟೆಗೆ ಬಳಸುವ ಕೂರಿ, ಸುಡುವ ಬೆಂಕಿ ಕುಲುಮೆಯೊಳಗೆ ಕತ್ತಿ, ಸುತ್ತಿಗೆ ತಯಾರಿಸುವ ಕಮ್ಮಾರರು ಹೀಗೆ ಪಾರಂಪರಿಕ ಗ್ರಾಮ ಹಳ್ಳಿಯ ಕುಲ ಕಸುಬುಗಳನ್ನು ಪ್ರತ್ಯಕ್ಷವಾಗಿ ತೆರೆದಿಟ್ಟಿತ್ತು. ಇನ್ನೊಂದೆಡೆ ಅನೇಕ ಗ್ರಾಮೀಣ ಕಲಾ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಹಳೆಯ ಕಾಯಿನ್‌ಗಳು, ಚಿನ್ನ-ಹಣದ ಪೆಟ್ಟಿಗೆ, ಮರದ ಪೆಟ್ಟಿಗೆ, ಕುಬಲ್‌ ಪೆಟ್ಟಿಗೆ, ಉರ್ಲಿ, ಗಿಂಡೆ, ಕೈಸಟ್ಟಿ, ಅಡಕೆ ಕತ್ತರಿಗಳು, ಬರ್ಚಿ, ಖಡ್ಗ, ದೈವಗಳ, ಮೊಗಗಳು, ವಿಭೂತಿ, ಕಂಚಿನ ಲೋಟ, ಗ್ರಾಮಫೋನ್‌, ಮರಾಯಿ, ಚೆನ್ನೆಮಣೆ, ಹಳೆಯ ದೀಪಗಳುಗಮನ ಸೆಳೆಯಿತು

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.