ರೈತರ ಅನ್ನ ತಿಂದು ದ್ರೋಹ ಬಗೆಯಬೇಡಿ : ಕೋಡಿಹಳ್ಳಿ ಚಂದ್ರಶೇಖರ್


Team Udayavani, Jan 26, 2021, 10:15 PM IST

ರೈತರ ಅನ್ನ ತಿಂದು ದ್ರೋಹ ಬಗೆಯಬೇಡಿ : ಕೋಡಿಹಳ್ಳಿ ಚಂದ್ರಶೇಖರ್

ದಾಸರಹಳ್ಳಿ: ಕೇಂದ್ರದ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೇಶಾದ್ಯಂತ ರೈತರ ಪ್ರತಿಭಟನೆ ಕಿಚ್ಚು ತಾರಕಕ್ಕೇರಿದೆ. ನಗರದ ಸುಮ್ಮನಹಳ್ಳಿ, ದೊಡ್ಡಗೊಲ್ಲರಹಟ್ಟಿ ಸೇರಿ ಹಲವೆಡೆ ರೈತರ ಪ್ರತಿಭಟನೆ ನಡೆಯಿತು.

ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ ಬಳಿ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ಸಾವಿರಾರು ರೈತರು ಜಮಾಯಿಸಿದ್ದರು.

ಪೊಲೀಸರು ರೈತರ ವೇಷದಲ್ಲಿ ಹೋರಾಟವನ್ನು ಹತ್ತಿಕ್ಕಲು ಮುಂದಾದರು. ಟ್ರ್ಯಾಕ್ಟರ್‌ನಲ್ಲಿ ಬಂದ ರೈತರನ್ನು ಬಿಐಇಸಿಯಲ್ಲಿ ತಡೆದರು. ಕೇಂದ್ರ ವಲಯ ಐಜಿಪಿ ಚಂದ್ರಶೇಖರ್‌, ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ.ಚನ್ನಣ್ಣನವರ್‌, ಉತ್ತರ ವಲಯ ಡಿಸಿಪಿ ಧರ್ಮೇಂದ್ರ ಕುಮಾರ್‌ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಭದ್ರತೆ ವ್ಯವಸ್ಥೆ ಮಾಡಿದ್ದು, ಲೆಕ್ಕಿಸದ ರೈತರು ತ್ರಿವರ್ಣ ಧ್ವಜ ಹಿಡಿದು ರಾಷ್ಟ್ರಗೀತೆ ಮೊಳಗಿಸಿ ಗಣರಾಜ್ಯೋತ್ಸವ ಪೆರೇಡ್‌ ನಡೆಸಿದರು.

ಈ ವೇಳೆ ಮಾತನಾಡಿದ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ರೈತರದ್ದು ಬದುಕಿಗಾಗಿ ಹೋರಾಟವೇ ಹೊರತು ಸಿಎಂ ಯಡಿಯೂರಪ್ಪ ಅವರಂತೆ ಅಧಿಕಾರ ಉಳಿಸಿಕೊಳ್ಳುವ ಹಪಾಹಪಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರು ಬೆವರು ಹರಿಸಿ ನಾಡಿಗೆ ಅನ್ನ ನೀಡುತ್ತಿದ್ದಾರೆ. ರೈತರ ಅನ್ನ ತಿಂದು ದ್ರೋಹ ಬಗೆಯಬೇಡಿ. ಅಮೃತದಂಥ ಹಾಲನ್ನು ಸೇವಿಸಿ ವಿಷ ಕಕ್ಕಬೇಡಿ, ರೈತರ ಭೂಮಿ, ಬದುಕು ಹಾಗೂ ನೆಮ್ಮದಿಗೆ ಕೊಳ್ಳಿ ಇಡಬೇಡಿ. ರೈತರ ತಂಟೆಗೆ ಬರಬೇಡಿ ಎಂದು ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಹರಿಹಾಯ್ದರು.

ರೈತರ ಬದುಕನ್ನು ಸರ್ವನಾಶ ಮಾಡುವ ಕೃಷಿ ಕಾಯಿದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಗೊಳಿಸಿದ್ದೀರಿ. ಕಾರ್ಪೊರೆಟ್‌ ಕಂಪನಿಗಳ ಪರವಾದ ನೀತಿಗಳನ್ನು ತಂದಿದ್ದೀರಿ. ರೈತರ ಮಾರುಕಟ್ಟೆಗಳನ್ನು ಬಹುರಾಷ್ಟ್ರೀಯ ಕಂಪೆನಿಗಳಿಗೆ ಮಾರಿದ್ದೀರಿ, ರೈತರನ್ನು ಏನು ಮಾಡಲು ಹೊರಟಿದ್ದೀರಿ? ನಮ್ಮದು ಬದುಕಿಗಾಗಿ ಹೋರಾಟ ಅಷ್ಟೇ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.