Father Muller: ಔಷಧ ವಿಜ್ಞಾನ ಮಹಾವಿದ್ಯಾಲಯ ಬಿ ಫಾರ್ಮ ಕೋರ್ಸ್ಗೆ ಅನುಮತಿ
ಫಾದರ್ ಮುಲ್ಲರ್ ಆವರಣದಲ್ಲಿ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಾಣ
Team Udayavani, Sep 14, 2024, 1:57 AM IST
ಮಂಗಳೂರು: ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಸಮೂಹಕ್ಕೆ ಹೊಸ ಸೇರ್ಪಡೆಯಾದ ಫಾದರ್ ಮುಲ್ಲರ್ ಔಷಧ ವಿಜ್ಞಾನಗಳ ಮಹಾ ವಿದ್ಯಾನಿಲಯದಲ್ಲಿ 2024-25ನೇ ಸಾಲಿನಲ್ಲಿ ಬಿ. ಫಾರ್ಮ ವ್ಯಾಸಂಗಕ್ಕೆ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲು ಅನುಮತಿ ದೊರಕಿದೆ.
ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಮಾನ್ಯತೆ ಲಭಿಸುವುದರೊಂದಿಗೆ ಫಾದರ್ ಮುಲ್ಲರ್ ಔಷಧ ವಿಜ್ಞಾನಗಳ ಮಹಾವಿದ್ಯಾಲಯವು ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಅಡಿಯಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲಿದೆ. ಈಗಾಗಲೇ ಶೈಕ್ಷಣಿಕ ಮತ್ತು ಆರೋಗ್ಯ ಸೇವೆಯಲ್ಲಿ ಉತ್ಕೃಷ್ಟತೆಗೆ ಹೆಸರಾಗಿರುವ ಫಾದರ್ ಮುಲ್ಲರ್ ಸಂಸ್ಥೆಗಳ ಸೇವಾ ಜಾಲ ಇದರಿಂದ ಇನಷ್ಟು ವಿಸ್ತರಿಸಲಿದೆ.
ಉನ್ನತ ಮಟ್ಟದ ಸೌಕರ್ಯಗಳು ಪ್ರಥಮ ವರ್ಷದಲ್ಲಿ 60 ವಿದ್ಯಾರ್ಥಿ
ಗಳಿಗೆ ಪ್ರವೇಶ ಪಡೆ ಯುವ ಅವ ಕಾಶವಿದೆ. ಆರು ಮಹಡಿಗಳ ಕಟ್ಟಡದಲ್ಲಿ ಉನ್ನತ ಮಟ್ಟದ ಸೌಕರ್ಯಗಳು, ಪ್ರಯೋಗಾಲಯಗಳು, ಬೋಧನಾ ಕೊಠಡಿಗಳು, ಅತ್ಯಾಧುನಿಕ ಉಪಕರಣ ಗಳು, ಡಿಜಿಟಲ್ ತಂತ್ರಜ್ಞಾನ ಸೌಲಭ್ಯ ಗಳನ್ನು ಕಲ್ಪಿಸಲಾಗಿದೆ. ಡಿಜಿಟಲ್ ಗ್ರಂಥಾ ಲಯ, ಪ್ರತ್ಯೇಕ ವಸತಿ ನಿಲಯ ಹಾಗೂ ಮಹಾವಿದ್ಯಾಲಯದ ಶಾಂತ ಹಸಿರಿನ ಪರಿಸರ ಇವೆಲ್ಲವೂ ದೇರಳ ಕಟ್ಟೆಯ ಫಾದರ್ ಮುಲ್ಲರ್ ಆವರಣದಲ್ಲಿ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸಿವೆ. ಅನುಭವಿ ಪ್ರಾಧ್ಯಾಪಕರು ಉತ್ತಮ ಸೌಕರ್ಯಗಳನ್ನು ಹೊಂದಿದ ಆಸ್ಪತ್ರೆ, ಸಂಶೋಧನ ಸೌಲಭ್ಯಗಳು ಉತ್ತಮ ಗುಣಮಟ್ಟದ ಔಷಧ ವಿಜ್ಞಾನ ತಂತ್ರಜ್ಞರನ್ನು ಜಗತ್ತಿಗೆ ಕೊಡುಗೆಯಾಗಿ ನೀಡಲಿವೆ.
ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಸ್ಥಾನ
ವಿಜ್ಞಾನ ಆರೋಗ್ಯ ಸೇವೆ ಮತ್ತು ರೋಗಿಗಳೊಂದಿಗೆ ಸಂವಹನ ಹೊಂದಿರುವ ಫಾರ್ಮಸಿಸ್ಟ್ ಕೆಲಸವು ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಸ್ಥಾನ ಹೊಂದಿದೆ. ಬಿ.ಫಾರ್ಮ ಪದವಿ ಪಡೆದವರಿಗೆ ಮುಂದೆ ವಿದ್ಯಾಭ್ಯಾಸ ಮುಂದುವರಿಸಿ ಸಂಶೋಧನೆ, ಬೋಧನೆ, ಔಷಧ ತಯಾರಿ ಉದ್ಯಮ, ಹೀಗೆ ಹಲವು ಸ್ಥರಗಳಲ್ಲಿ ಬೆಳವಣಿಗೆಗೆ ಅವಕಾಶ ದೊರಕಿಸಿಕೊಡುತ್ತದೆ.
ಬೆಳ್ಳಿಹಬ್ಬದ ಸಂದರ್ಭ ಮಾನ್ಯತೆ
ಔಷಧ ವಿಜ್ಞಾನಗಳ ಮಹಾವಿದ್ಯಾನಿಲ ಯಕ್ಕೆ ದೊರೆತ ಮಾನ್ಯತೆಗಾಗಿ ಸಂತಸ ವ್ಯಕ್ತಪಡಿಸಿರುವ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕರಾದ ವಂ| ಫಾ|ರಿಚರ್ಡ್ ಅಲೋಶಿಯಸ್ ಕುವೆಲ್ಲೊ, ಈ ಮಹಾವಿದ್ಯಾಲಯದಲ್ಲಿ ಉತ್ತಮ ಮಟ್ಟದ ಶಿಕ್ಷಣ ಹಾಗೂ ಸೌಲಭ್ಯಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ. ಮಹಾವಿದ್ಯಾಲಯವು ತನ್ನ ಬೆಳ್ಳಿಹಬ್ಬ ಆಚರಿಸುತ್ತಿರುವ ಸಂದರ್ಭದಲ್ಲಿ ಔಷಧ ವಿಜ್ಞಾನ ಮಹಾವಿದ್ಯಾನಿಲಯಕ್ಕೆ ಅನುಮತಿ ದೊರೆತಿರುವುದು ದೇವರ ಅನುಗ್ರಹ ಎಂದು ಅವರು ತಿಳಿಸಿದ್ದಾರೆ. ಇಲ್ಲಿ ಪ್ರವೇಶ ಪಡೆಯಬಯಸುವರು ಇಮೇಲ್ ಸಂಪರ್ಕಿಸ ಬಹುದು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಿರಿದಾಗುತ್ತಿದೆ ಪಣಂಬೂರು ಬೀಚ್! ಇನ್ನೂ ಖಚಿತವಾಗದ ಕಾರಣ
Biological Park: ಪಿಲಿಕುಳಕ್ಕೆ ಪೆಂಗ್ವಿನ್, ಅನಕೊಂಡ ತರಿಸುವ ಮಹತ್ವದ ನಿರ್ಧಾರ
High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ
MSEZ: ಜೆಬಿಎಫ್ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್ನಲ್ಲಿ ಉದ್ಯೋಗ
Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.