Find On Investigation: ವಾಲ್ಮೀಕಿ ಹಗರಣ ಸೂತ್ರಧಾರ ಮಾಜಿ ಸಚಿವ ಬಿ.ನಾಗೇಂದ್ರ: ಇ.ಡಿ.

ತನಿಖಾ ವರದಿಯಲ್ಲಿ ನಿಗಮದ 187 ಕೋ. ರೂ. ಅಕ್ರಮಗಳ ಉಲ್ಲೇಖ, ಜನ ಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಪ್ರಾಸಿಕ್ಯೂಷನ್‌ ದೂರು ಸಲ್ಲಿಸಿದ ಇ.ಡಿ.

Team Udayavani, Oct 10, 2024, 7:50 AM IST

Nagendra-ED

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋ. ರೂ. ಅವ್ಯವಹಾರದ ಮಾಸ್ಟರ್‌ ಮೈಂಡ್‌ ಮಾಜಿ ಸಚಿವ ಬಿ.ನಾಗೇಂದ್ರ ಆಗಿದ್ದಾರೆ. 2024ರ ಬಳ್ಳಾರಿ ಲೋಕಸಭೆ ಚುನಾವಣೆಯ ಅಭ್ಯರ್ಥಿ ಬೆಂಬಲಿಸಲು ನಿಗಮದ 20.19 ಕೋ. ರೂ. ವಿನಿಯೋಗಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

ಇದು ಬುಧವಾರ ಜಾರಿ ನಿರ್ದೇಶನಾಲಯವು (ಇ.ಡಿ.) ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬುಧವಾರ ಪ್ರಾಸಿಕ್ಯೂಷನ್‌ಗೆ ಸಲ್ಲಿಸಿದ ದೂರು. ನ್ಯಾಯಾಲಯವು ಈ ದೂರನ್ನು ವಿಚಾರಣೆಗೆ ಒಳಪಡಿಸಿದೆ. ಈ ಮಧ್ಯೆ ತನಿಖೆಯ ಪ್ರಮುಖ ಅಂಶಗಳ ಮಾಹಿತಿಗಳನ್ನು ಒಳಗೊಂಡ ಪತ್ರಿಕಾ ಪ್ರಕಟ ನೆಯನ್ನು ಇ.ಡಿ. ಬಿಡುಗಡೆ ಮಾಡಿದೆ.

ಶಾಸಕ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರು ಪ್ರಮುಖ ಆರೋಪಿ ಮತ್ತು ಹಗರಣದ ಮಾಸ್ಟರ್‌ಮೈಂಡ್‌ ಆಗಿದ್ದಾರೆ. ನಾಗೇಂದ್ರರ ಪ್ರಮುಖ ಸಹಚರರಾದ ಸತ್ಯನಾರಾಯಣ ವರ್ಮ, ಏಟಕರಿ ಸತ್ಯನಾರಾಯಣ, ಜೆ.ಜಿ. ಪದ್ಮನಾಭ, ನಾಗೇಶ್ವರ್‌ ರಾವ್‌, ನೆಕ್ಕೆಂಟಿ ನಾಗರಾಜ್‌ ಹಾಗೂ ವಿಜಯ್‌ ಕುಮಾರ್‌ ಗೌಡ ಸಹಿತ 24 ಮಂದಿ ಹಗರಣದಲ್ಲಿ ಸಹಕರಿಸಿದ್ದಾರೆ ಎಂದು ಇ.ಡಿ. ದೃಢಪಡಿಸಿದೆ.

ಶೆಲ್‌ ಘಟಕಗಳ ಮೂಲಕ ಅಕ್ರಮ ವರ್ಗಾವಣೆ
ಕರ್ನಾಟಕ ಪೊಲೀಸ್‌ ಮತ್ತು ಸಿಬಿಐ ದಾಖಲಿಸಿದ ಎಫ್ಐಆರ್‌ಗಳ ಆಧಾರದ ಮೇಲೆ ಇ.ಡಿ. ತನಿಖೆ ಪ್ರಾರಂಭಿಸಿದೆ. ನಿಗಮದ ಖಾತೆಗಳಿಂದ ಸುಮಾರು 89.62 ಕೋ.ರೂ.ಗಳನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ನಕಲಿ ಖಾತೆಗಳಿಗೆ ಹಾಕಲಾಗಿದೆ. ಅನಂತರ ಶೆಲ್‌ ಘಟಕಗಳ ಮೂಲಕ ಅಕ್ರಮವಾಗಿ ಇದನ್ನು ವರ್ಗಾಯಿಸಲಾಗಿದೆ. ಮೇ 2024ರಲ್ಲಿ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡ ಬಳಿಕ ಈ ಹಗರಣ ಬೆಳಕಿಗೆ ಬಂದಿತ್ತು.

ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ 187 ಕೋ. ರೂ. ಠೇವಣಿ
ಬಿ.ನಾಗೇಂದ್ರ ಅವರ ಪ್ರಭಾವದಿಂದ ನಿಗಮದ ಖಾತೆಯನ್ನು ಯಾವುದೇ ಸೂಕ್ತ ಅನುಮತಿಯಿಲ್ಲದೆ ಎಂ.ಜಿ. ರಸ್ತೆ ಶಾಖೆಗೆ ವರ್ಗಾಯಿಸಿರುವುದು ಇ.ಡಿ. ತನಿಖೆಯಿಂದ ತಿಳಿದುಬಂದಿದೆ. ರಾಜ್ಯ ಖಜಾನೆಯಲ್ಲಿದ್ದ ಗಂಗಾ ಕಲ್ಯಾಣ ಯೋಜನೆಯ 43.33 ಕೋ. ರೂ. ಸಹಿತ 187 ಕೋಟಿ ರೂ.ಗಳ ನ್ನು ಸರಿಯಾದ ಕಾರ್ಯವಿಧಾನಗಳನ್ನು ಅನುಸರಿಸದೆ ಹಾಗೂ ಸರಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಠೇವಣಿ ಮಾಡಲಾಗಿದೆ. ಈ ಹಣವನ್ನು ಬಳಿಕ ಅನೇಕ ಶೆಲ್‌ ಖಾತೆಗಳ (ನಕಲಿ ಖಾತೆ) ಮೂಲಕ ನಗದು ರೂಪದಲ್ಲಿ ಪರಿವರ್ತಿಸಲಾಗಿದೆ.

ಬಳ್ಳಾರಿ ಲೋಕಸಭಾ ಅಭ್ಯರ್ಥಿ ಬೆಂಬಲಕ್ಕೆ ನಿಗಮದ ಹಣ
ಹಗರಣದಲ್ಲಿ ಪಡೆದ ಹಣದ ಪೈಕಿ 20.19 ಕೋ. ರೂ.ಗಳನ್ನು ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಬೆಂಬಲಿಸಲು ಹಾಗೂ ಬಿ.ನಾಗೇಂದ್ರ ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಿರುವುದು ತನಿಖೆಯಲ್ಲಿ ಕಂಡು ಬಂದಿದೆ. ವೆಚ್ಚಗಳ ಪುರಾವೆಗಳ ಪರಿಶೀಲನೆಯಲ್ಲಿ ಈ ಅಂಶ ಪತ್ತೆಯಾಗಿದೆ. ಹಣಕಾಸಿನ ವಿಶ್ಲೇಷಣೆ ಮತ್ತು ಕೆಲವು ಹೇಳಿಕೆಗಳಿಂದ ಈ ಕೃತ್ಯ ದೃಢೀಕರಿಸಲ್ಪಟ್ಟಿವೆ. ನಾಗೇಂದ್ರ ಸೂಚನೆ ಮೇರೆಗೆ ನಗದು ನಿರ್ವಹಿಸುತ್ತಿದ್ದ ವಿಜಯ್‌ ಕುಮಾರ್‌ ಗೌಡ ಮೊಬೈಲ್‌ ಫೋನ್‌ನಿಂದ ಚುನಾವಣ ವೆಚ್ಚದ ವಿವರಗಳನ್ನು ಪಡೆಯಲಾಗಿದೆ ಎಂಬ ಮಾಹಿತಿಯನ್ನು ಪ್ರಕಟನೆಯಲ್ಲಿ ಇ.ಡಿ. ತಿಳಿಸಿದೆ.

ತನಿಖಾ ವರದಿಯಲ್ಲೇನಿದೆ?
* ಬಳ್ಳಾರಿ ಚುನಾವಣೆಯಲ್ಲಿ ನಿಗಮದ 20.19 ಕೋ. ರೂ. ವಿನಿಯೋಗ.
* 89.62 ಕೋ.ರೂ. ಆಂಧ್ರಪ್ರದೇಶ, ತೆಲಂಗಾಣದ ನಕಲಿ ಖಾತೆಗಳಿಗೆ ಜಮೆ.
* ಗಂಗಾ ಕಲ್ಯಾಣ ಯೋಜನೆಯ 43.33 ಕೋ. ರೂ. ಸಹಿತ 187 ಕೋ. ರೂ.ಗಳನ್ನು ಎಂ.ಜಿ. ರಸ್ತೆ ಶಾಖೆಗೆ ವರ್ಗ
* ನಾಗೇಂದ್ರ ಆಪ್ತ ವಿಜಯ್‌ ಕುಮಾರ್‌ ಗೌಡ ಮೊಬೈಲಿಂದ ಚುನಾವಣೆ ವೆಚ್ಚದ ವಿವರ ಪತ್ತೆ
* ಮೊಬೈಲ್‌ ನಾಶಪಡಿಸಿ ಹಗರಣದ ಕುರಿತು ಬಾಯಿಬಿಡದಂತೆ ನಾಗೇಂದ್ರ ಸೂಚನೆ

ಮೊಬೈಲ್‌ ನಾಶಪಡಿಸಿ ತನಿಖೆಗೆ ಅಡ್ಡಿ: ಇ.ಡಿ.
ಹಗರಣ ಬೆಳಕಿಗೆ ಬಂದ ಬಳಿಕ ರಾಜೀನಾಮೆ ನೀಡಿದ್ದ ಬಿ.ನಾಗೇಂದ್ರ ಮೊಬೈಲ್‌ ಫೋನ್‌ಗಳನ್ನು ನಾಶಪಡಿಸುವ ಮೂಲಕ ತನಿಖೆಗೆ ಅಡ್ಡಿಪಡಿಸಿದ್ದಾರೆ. ಜತೆಗೆ ಇತರರಿಗೆ ಪ್ರಕರಣದ ಕುರಿತು ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದೆ ಮೌನವಾಗಿರಲು ಸೂಚಿಸಿದ್ದಾರೆ. ತನಿಖೆ ವೇಳೆ ನಾಗೇಂದ್ರ ಮತ್ತು ಇತರ ಐವರು ಪ್ರಮುಖ ಆರೋಪಿಗಳನ್ನು ಇ.ಡಿ. ಬಂಧಿಸಿದೆ.

ಟಾಪ್ ನ್ಯೂಸ್

Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ

Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್‌ರೂಂನ “ತ್ರಿಶಕ್ತಿ’ ನಾಯಕರು!

Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್‌ರೂಂನ “ತ್ರಿಶಕ್ತಿ’ ನಾಯಕರು!

Haryana: ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ ಮೈತ್ರಿಕೂಟದಲ್ಲಿ ತಲ್ಲಣ

Haryana: ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ ಮೈತ್ರಿಕೂಟದಲ್ಲಿ ತಲ್ಲಣ

Women’s T20 World Cup: ಸ್ಮತಿ, ಹರ್ಮನ್‌ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು

Women’s T20 World Cup: ಸ್ಮತಿ, ಹರ್ಮನ್‌ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು

T20 Cricket: ಬಾಂಗ್ಲಾದೇಶಕ್ಕೆ 86 ರನ್‌ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ

T20 Cricket: ಬಾಂಗ್ಲಾದೇಶಕ್ಕೆ 86 ರನ್‌ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ

Multan Test : ಪಾಕಿಸ್ಥಾನಕ್ಕೆ ಇಂಗ್ಲೆಂಡ್‌ ತಿರುಗೇಟು… ರೂಟ್‌, ಬ್ರೂಕ್‌ ಅಜೇಯ

Multan Test : ಪಾಕಿಸ್ಥಾನಕ್ಕೆ ಇಂಗ್ಲೆಂಡ್‌ ತಿರುಗೇಟು… ರೂಟ್‌, ಬ್ರೂಕ್‌ ಅಜೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

Munirathna-case

Munirathna Case: ಭದ್ರತೆ ಕೊಟ್ಟರೆ ಮಾಜಿ ಸಿಎಂಗಳ ಹನಿಟ್ರ್ಯಾಪ್‌ ಬಹಿರಂಗ: ಸಂತ್ರಸ್ತೆ

Madhu-Bangarappa

Exam: ಈ ವರ್ಷ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

HC-Mahadevappa

Congress Politics: ಡಿನ್ನರ್‌ ಮೀಟಿಂಗ್‌ಗೆ ಮಹತ್ವ ಬೇಡ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

Shivaraj-Thangadagi

Selection of Awardees: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ 2,800 ಅರ್ಜಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ

Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್‌ರೂಂನ “ತ್ರಿಶಕ್ತಿ’ ನಾಯಕರು!

Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್‌ರೂಂನ “ತ್ರಿಶಕ್ತಿ’ ನಾಯಕರು!

Haryana: ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ ಮೈತ್ರಿಕೂಟದಲ್ಲಿ ತಲ್ಲಣ

Haryana: ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ ಮೈತ್ರಿಕೂಟದಲ್ಲಿ ತಲ್ಲಣ

Women’s T20 World Cup: ಸ್ಮತಿ, ಹರ್ಮನ್‌ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು

Women’s T20 World Cup: ಸ್ಮತಿ, ಹರ್ಮನ್‌ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.